AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ನೇ ತರಗತಿ ಪಠ್ಯದಲ್ಲಿ ಸೋನಿಯಾ ಗಾಂಧಿ ಬಗ್ಗೆ ಉಲ್ಲೇಖಿಸಿ; ಕಾಂಗ್ರೆಸ್​ ಆಗ್ರಹ

ತೆಲಂಗಾಣ ನಿರ್ಮಾಣದಲ್ಲಿ ಕೆಸಿಆರ್​ ಹಾಗೂ ಇತರ ನಾಯಕರ ಪಾತ್ರದ ಬಗ್ಗೆ 10ನೇ ತರಗತಿ ಸಾಮಾಜಿಕ ಅಧ್ಯಯನ ಪಠ್ಯ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ. ಅದೇ ರೀತಿ ಸೋನಿಯಾ ಹೆಸರು ಇರಬೇಕು ಅನ್ನೋದು ಕಾಂಗ್ರೆಸ್​ ಆಗ್ರಹ.

10 ನೇ ತರಗತಿ ಪಠ್ಯದಲ್ಲಿ ಸೋನಿಯಾ ಗಾಂಧಿ ಬಗ್ಗೆ ಉಲ್ಲೇಖಿಸಿ; ಕಾಂಗ್ರೆಸ್​ ಆಗ್ರಹ
ಸೋನಿಯಾ ಗಾಂಧಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 10, 2020 | 10:21 PM

Share

ಹೈದರಾಬಾದ್​: ತೆಲಂಗಾಣ ರಾಜ್ಯ ಸ್ಥಾಪನೆಯಲ್ಲಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಪಾತ್ರ ಪ್ರಮುಖವಾಗಿದ್ದು, ಆ ಬಗ್ಗೆ 10ನೇ ತರಗತಿ ಪಠ್ಯದಲ್ಲಿ ಉಲ್ಲೇಖಿಸಬೇಕು ಎಂದು ಕೈ ಪಕ್ಷ ಆಗ್ರಹಿಸಿದೆ. ಸೋನಿಯಾ ಅವರ 74 ನೇ ಜನ್ಮದಿನಾಚರಣೆ ಅಂಗವಾಗಿ ತೆಲಂಗಾಣದಲ್ಲಿ ನಡೆದ ಕಾರ್ಯಕ್ರಮದ ವೇಳೆ ಈ ಆಗ್ರಹ ಕೇಳಿ ಬಂದಿದೆ.

ಬುಧವಾರ ಸೋನಿಯಾ ಗಾಂಧೀ ತಮ್ಮ 74ನೇ ಜನ್ಮದಿನವನ್ನು ಆಚರಿಸಿಕೊಂಡರು. ಈ ವೇಳೆ ಕಾಂಗ್ರೆಸ್​ ವಕ್ತಾರ ಸರ್ವನ್ ದಾಸೋಜು, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬಳಿ ಈ ಬೇಡಿಕೆ ಇಟ್ಟಿದ್ದಾರೆ. ತೆಲಂಗಾಣ ಸ್ಥಾಪನೆಯಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ತುಂಬಾ ದೊಡ್ಡದು. ಹೀಗಾಗಿ ಆ ಬಗ್ಗೆ ಶಾಲಾ ಪಠ್ಯಕ್ರಮದಲ್ಲಿ ಹೇಳಬೇಕು ಎಂದಿದ್ದಾರೆ.

ತೆಲಂಗಾಣ ರಾಜ್ಯ ನಿರ್ಮಾಣದಲ್ಲಿ ಕೆಸಿಆರ್​ ಅವರ ಪಾತ್ರ ದೊಡ್ಡದು ಎನ್ನುವುದರಲ್ಲಿ ಎರಡು ಮಾತಿಲ್ಲ. ಈಗಾಗಲೇ ಪಠ್ಯಕ್ರಮದಲ್ಲಿ ಅವರ ಹೆಸರು ಉಲ್ಲೇಖಿಸಲ್ಪಟ್ಟಿದೆ. ಆದರೆ, ಸೋನಿಯಾ ಗಾಂಧಿ ಅವರ ಹೆಸರೇಕೆ ಇಲ್ಲ ಎಂದು ಸರ್ವನ್ ದಾಸೋಜು ಪ್ರಶ್ನೆ ಮಾಡಿದ್ದಾರೆ.

ತೆಲಂಗಾಣ ನಿರ್ಮಾಣದಲ್ಲಿ ಕೆಸಿಆರ್​ ಹಾಗೂ ಇತರ ನಾಯಕರ ಪಾತ್ರದ ಬಗ್ಗೆ 10ನೇ ತರಗತಿ ಸಾಮಾಜಿಕ ಅಧ್ಯಯನ ಪಠ್ಯ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ. 2013ರ ಜುಲೈ ತಿಂಗಳಲ್ಲಿ ತೆಲಂಗಾಣ ರಾಜ್ಯ ಸ್ಥಾಪನೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಒಪ್ಪಿಗೆ ನೀಡಿತ್ತು. ತೆಲಂಗಾಣ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡುವ ಮಸೂದೆಗೆ 2014ರಲ್ಲಿ ಸಂಸತ್ತು ಒಪ್ಪಿಗೆ ನೀಡಿತ್ತು. 2014ರ ಜೂನ್​ ತಿಂಗಳಲ್ಲಿ ಅಧಿಕೃತವಾಗಿ ತೆಲಂಗಾಣ ಸ್ಥಾಪನೆಗೊಂಡಿತ್ತು.

Fact Check | ಸೋನಿಯಾಗಾಂಧಿ ‘ಬಾರ್ ಡ್ಯಾನ್ಸರ್’‌ ಎಂದು ತೋರಿಸಲು ಟ್ವೀಟಿಗರು ಬಳಸಿದ್ದು ಹಾಲಿವುಡ್ ನಟಿಯರ ಫೋಟೊ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ