AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ನೇ ತರಗತಿ ಪಠ್ಯದಲ್ಲಿ ಸೋನಿಯಾ ಗಾಂಧಿ ಬಗ್ಗೆ ಉಲ್ಲೇಖಿಸಿ; ಕಾಂಗ್ರೆಸ್​ ಆಗ್ರಹ

ತೆಲಂಗಾಣ ನಿರ್ಮಾಣದಲ್ಲಿ ಕೆಸಿಆರ್​ ಹಾಗೂ ಇತರ ನಾಯಕರ ಪಾತ್ರದ ಬಗ್ಗೆ 10ನೇ ತರಗತಿ ಸಾಮಾಜಿಕ ಅಧ್ಯಯನ ಪಠ್ಯ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ. ಅದೇ ರೀತಿ ಸೋನಿಯಾ ಹೆಸರು ಇರಬೇಕು ಅನ್ನೋದು ಕಾಂಗ್ರೆಸ್​ ಆಗ್ರಹ.

10 ನೇ ತರಗತಿ ಪಠ್ಯದಲ್ಲಿ ಸೋನಿಯಾ ಗಾಂಧಿ ಬಗ್ಗೆ ಉಲ್ಲೇಖಿಸಿ; ಕಾಂಗ್ರೆಸ್​ ಆಗ್ರಹ
ಸೋನಿಯಾ ಗಾಂಧಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 10, 2020 | 10:21 PM

Share

ಹೈದರಾಬಾದ್​: ತೆಲಂಗಾಣ ರಾಜ್ಯ ಸ್ಥಾಪನೆಯಲ್ಲಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಪಾತ್ರ ಪ್ರಮುಖವಾಗಿದ್ದು, ಆ ಬಗ್ಗೆ 10ನೇ ತರಗತಿ ಪಠ್ಯದಲ್ಲಿ ಉಲ್ಲೇಖಿಸಬೇಕು ಎಂದು ಕೈ ಪಕ್ಷ ಆಗ್ರಹಿಸಿದೆ. ಸೋನಿಯಾ ಅವರ 74 ನೇ ಜನ್ಮದಿನಾಚರಣೆ ಅಂಗವಾಗಿ ತೆಲಂಗಾಣದಲ್ಲಿ ನಡೆದ ಕಾರ್ಯಕ್ರಮದ ವೇಳೆ ಈ ಆಗ್ರಹ ಕೇಳಿ ಬಂದಿದೆ.

ಬುಧವಾರ ಸೋನಿಯಾ ಗಾಂಧೀ ತಮ್ಮ 74ನೇ ಜನ್ಮದಿನವನ್ನು ಆಚರಿಸಿಕೊಂಡರು. ಈ ವೇಳೆ ಕಾಂಗ್ರೆಸ್​ ವಕ್ತಾರ ಸರ್ವನ್ ದಾಸೋಜು, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬಳಿ ಈ ಬೇಡಿಕೆ ಇಟ್ಟಿದ್ದಾರೆ. ತೆಲಂಗಾಣ ಸ್ಥಾಪನೆಯಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ತುಂಬಾ ದೊಡ್ಡದು. ಹೀಗಾಗಿ ಆ ಬಗ್ಗೆ ಶಾಲಾ ಪಠ್ಯಕ್ರಮದಲ್ಲಿ ಹೇಳಬೇಕು ಎಂದಿದ್ದಾರೆ.

ತೆಲಂಗಾಣ ರಾಜ್ಯ ನಿರ್ಮಾಣದಲ್ಲಿ ಕೆಸಿಆರ್​ ಅವರ ಪಾತ್ರ ದೊಡ್ಡದು ಎನ್ನುವುದರಲ್ಲಿ ಎರಡು ಮಾತಿಲ್ಲ. ಈಗಾಗಲೇ ಪಠ್ಯಕ್ರಮದಲ್ಲಿ ಅವರ ಹೆಸರು ಉಲ್ಲೇಖಿಸಲ್ಪಟ್ಟಿದೆ. ಆದರೆ, ಸೋನಿಯಾ ಗಾಂಧಿ ಅವರ ಹೆಸರೇಕೆ ಇಲ್ಲ ಎಂದು ಸರ್ವನ್ ದಾಸೋಜು ಪ್ರಶ್ನೆ ಮಾಡಿದ್ದಾರೆ.

ತೆಲಂಗಾಣ ನಿರ್ಮಾಣದಲ್ಲಿ ಕೆಸಿಆರ್​ ಹಾಗೂ ಇತರ ನಾಯಕರ ಪಾತ್ರದ ಬಗ್ಗೆ 10ನೇ ತರಗತಿ ಸಾಮಾಜಿಕ ಅಧ್ಯಯನ ಪಠ್ಯ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ. 2013ರ ಜುಲೈ ತಿಂಗಳಲ್ಲಿ ತೆಲಂಗಾಣ ರಾಜ್ಯ ಸ್ಥಾಪನೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಒಪ್ಪಿಗೆ ನೀಡಿತ್ತು. ತೆಲಂಗಾಣ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡುವ ಮಸೂದೆಗೆ 2014ರಲ್ಲಿ ಸಂಸತ್ತು ಒಪ್ಪಿಗೆ ನೀಡಿತ್ತು. 2014ರ ಜೂನ್​ ತಿಂಗಳಲ್ಲಿ ಅಧಿಕೃತವಾಗಿ ತೆಲಂಗಾಣ ಸ್ಥಾಪನೆಗೊಂಡಿತ್ತು.

Fact Check | ಸೋನಿಯಾಗಾಂಧಿ ‘ಬಾರ್ ಡ್ಯಾನ್ಸರ್’‌ ಎಂದು ತೋರಿಸಲು ಟ್ವೀಟಿಗರು ಬಳಸಿದ್ದು ಹಾಲಿವುಡ್ ನಟಿಯರ ಫೋಟೊ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು