AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ನೇ ತರಗತಿ ಪಠ್ಯದಲ್ಲಿ ಸೋನಿಯಾ ಗಾಂಧಿ ಬಗ್ಗೆ ಉಲ್ಲೇಖಿಸಿ; ಕಾಂಗ್ರೆಸ್​ ಆಗ್ರಹ

ತೆಲಂಗಾಣ ನಿರ್ಮಾಣದಲ್ಲಿ ಕೆಸಿಆರ್​ ಹಾಗೂ ಇತರ ನಾಯಕರ ಪಾತ್ರದ ಬಗ್ಗೆ 10ನೇ ತರಗತಿ ಸಾಮಾಜಿಕ ಅಧ್ಯಯನ ಪಠ್ಯ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ. ಅದೇ ರೀತಿ ಸೋನಿಯಾ ಹೆಸರು ಇರಬೇಕು ಅನ್ನೋದು ಕಾಂಗ್ರೆಸ್​ ಆಗ್ರಹ.

10 ನೇ ತರಗತಿ ಪಠ್ಯದಲ್ಲಿ ಸೋನಿಯಾ ಗಾಂಧಿ ಬಗ್ಗೆ ಉಲ್ಲೇಖಿಸಿ; ಕಾಂಗ್ರೆಸ್​ ಆಗ್ರಹ
ಸೋನಿಯಾ ಗಾಂಧಿ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 10, 2020 | 10:21 PM

Share

ಹೈದರಾಬಾದ್​: ತೆಲಂಗಾಣ ರಾಜ್ಯ ಸ್ಥಾಪನೆಯಲ್ಲಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಪಾತ್ರ ಪ್ರಮುಖವಾಗಿದ್ದು, ಆ ಬಗ್ಗೆ 10ನೇ ತರಗತಿ ಪಠ್ಯದಲ್ಲಿ ಉಲ್ಲೇಖಿಸಬೇಕು ಎಂದು ಕೈ ಪಕ್ಷ ಆಗ್ರಹಿಸಿದೆ. ಸೋನಿಯಾ ಅವರ 74 ನೇ ಜನ್ಮದಿನಾಚರಣೆ ಅಂಗವಾಗಿ ತೆಲಂಗಾಣದಲ್ಲಿ ನಡೆದ ಕಾರ್ಯಕ್ರಮದ ವೇಳೆ ಈ ಆಗ್ರಹ ಕೇಳಿ ಬಂದಿದೆ.

ಬುಧವಾರ ಸೋನಿಯಾ ಗಾಂಧೀ ತಮ್ಮ 74ನೇ ಜನ್ಮದಿನವನ್ನು ಆಚರಿಸಿಕೊಂಡರು. ಈ ವೇಳೆ ಕಾಂಗ್ರೆಸ್​ ವಕ್ತಾರ ಸರ್ವನ್ ದಾಸೋಜು, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬಳಿ ಈ ಬೇಡಿಕೆ ಇಟ್ಟಿದ್ದಾರೆ. ತೆಲಂಗಾಣ ಸ್ಥಾಪನೆಯಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ತುಂಬಾ ದೊಡ್ಡದು. ಹೀಗಾಗಿ ಆ ಬಗ್ಗೆ ಶಾಲಾ ಪಠ್ಯಕ್ರಮದಲ್ಲಿ ಹೇಳಬೇಕು ಎಂದಿದ್ದಾರೆ.

ತೆಲಂಗಾಣ ರಾಜ್ಯ ನಿರ್ಮಾಣದಲ್ಲಿ ಕೆಸಿಆರ್​ ಅವರ ಪಾತ್ರ ದೊಡ್ಡದು ಎನ್ನುವುದರಲ್ಲಿ ಎರಡು ಮಾತಿಲ್ಲ. ಈಗಾಗಲೇ ಪಠ್ಯಕ್ರಮದಲ್ಲಿ ಅವರ ಹೆಸರು ಉಲ್ಲೇಖಿಸಲ್ಪಟ್ಟಿದೆ. ಆದರೆ, ಸೋನಿಯಾ ಗಾಂಧಿ ಅವರ ಹೆಸರೇಕೆ ಇಲ್ಲ ಎಂದು ಸರ್ವನ್ ದಾಸೋಜು ಪ್ರಶ್ನೆ ಮಾಡಿದ್ದಾರೆ.

ತೆಲಂಗಾಣ ನಿರ್ಮಾಣದಲ್ಲಿ ಕೆಸಿಆರ್​ ಹಾಗೂ ಇತರ ನಾಯಕರ ಪಾತ್ರದ ಬಗ್ಗೆ 10ನೇ ತರಗತಿ ಸಾಮಾಜಿಕ ಅಧ್ಯಯನ ಪಠ್ಯ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ. 2013ರ ಜುಲೈ ತಿಂಗಳಲ್ಲಿ ತೆಲಂಗಾಣ ರಾಜ್ಯ ಸ್ಥಾಪನೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಒಪ್ಪಿಗೆ ನೀಡಿತ್ತು. ತೆಲಂಗಾಣ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡುವ ಮಸೂದೆಗೆ 2014ರಲ್ಲಿ ಸಂಸತ್ತು ಒಪ್ಪಿಗೆ ನೀಡಿತ್ತು. 2014ರ ಜೂನ್​ ತಿಂಗಳಲ್ಲಿ ಅಧಿಕೃತವಾಗಿ ತೆಲಂಗಾಣ ಸ್ಥಾಪನೆಗೊಂಡಿತ್ತು.

Fact Check | ಸೋನಿಯಾಗಾಂಧಿ ‘ಬಾರ್ ಡ್ಯಾನ್ಸರ್’‌ ಎಂದು ತೋರಿಸಲು ಟ್ವೀಟಿಗರು ಬಳಸಿದ್ದು ಹಾಲಿವುಡ್ ನಟಿಯರ ಫೋಟೊ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ