AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಸಾಧ್ಯತೆ: ಕಾಂಗ್ರೆಸ್​​​

ಅಯೋಧ್ಯೆ ರಾಮಮಂದಿರ ಲೋರ್ಕಾಪಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್​​ ನಾಯಕಿ ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್​​​ ಮೂಲಗಳು ತಿಳಿಸಿದೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಸಾಧ್ಯತೆ: ಕಾಂಗ್ರೆಸ್​​​
ಅಕ್ಷಯ್​ ಪಲ್ಲಮಜಲು​​
|

Updated on:Dec 29, 2023 | 3:09 PM

Share

ದೆಹಲಿ, ಡಿ.29: ಅಯೋಧ್ಯೆ ರಾಮಮಂದಿರ ಲೋರ್ಕಾಪಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್​​ ನಾಯಕಿ ಸೋನಿಯಾ ಗಾಂಧಿ (Sonia Gandhi) ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್​​​ ಮೂಲಗಳು ತಿಳಿಸಿದೆ. ಕಾಂಗ್ರೆಸ್​​​ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಇದೀಗ ಸೋನಿಯಾ ಗಾಂಧಿ ಅವರು ರಾಮಮಂದಿರ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್​​ ಹೇಳಿದೆ. ಇದೀಗ ಈ ವಿಚಾರ ದೇಶದ ರಾಜಕೀಯದಲ್ಲಿ ಭಾರೀ ದೊಡ್ಡ ಸುದ್ದಿ ಮಾಡಿದೆ. ಹಾಗೂ ಇಂಡಿಯಾ ಮೈತ್ರಿ ಕೂಟದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿಗೆ 22ರಂದು ರಾಮಮಂದಿರದ ಲೋರ್ಕಾಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ ಅವರು ಕೂಡ ಭಾಗವಹಿಸುವ ಸಾಧ್ಯತೆ ಎಂದು ಕಾಂಗ್ರೆಸ್​​ ಮೂಲಗಳು ಹೇಳಿದೆ. ಈ ಹಿಂದೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಸೋನಿಯಾ ಗಾಂಧಿ ಅವರನ್ನು ಪ್ರತಿನಿಧಿಸುವ ನಿಯೋಗ ರಾಮಮಂದಿರದಲ್ಲಿ ಇರಲಿದೆ ಎಂದು ಹೇಳಿದ್ದಾರೆ.

ರಾಮ ಮಂದಿರ ವಿಚಾರದಲ್ಲಿ ಅವರು ಸೂಕ್ಷ್ಮವಾಗಿ ನಿರ್ಧಾರ ತೆಗೆದುಕೊಳ್ಳಬೇಕಿದೆ ಏಕೆಂದರೆ, ಇಂಡಿಯಾ ಮೈತ್ರಿಕೂಟದಲ್ಲಿ ಯೂನಿಯನ್ ಮುಸ್ಲಿಂ ಲೀಗ್​​ನಂತಹ ರಾಮಮಂದಿರ ವಿರೋಧಿ ಪಕ್ಷಗಳು ಇರುವಾಗ, ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಕಾಂಗ್ರೆಸ್​​​​ ಮೂಲಗಳು ಹೇಳಿದೆ. ಇನ್ನು ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಈ ನಿರ್ಧಾರದಿಂದ ದೇಶದಲ್ಲಿ ಇಂಡಿಯಾ ಮೈತ್ರಿ ಕೂಟದ ಮೇಲೆ ಪ್ರಮುಖ ಪ್ರಭಾವ ಉಂಟು ಮಾಡಬಹುದು. ಹಾಗೂ ಇದೆ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡಬಹುದು ಎಂಬ ಕಾರಣಕ್ಕೆ ಕಾಂಗ್ರೆಸ್​​​ ಎಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿದೆ.

ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ 600ಕೆಜಿ ತೂಕದ ಲೋಹದ ಗಂಟೆ

ಆಡಳಿತ ಪಕ್ಷದ ಟೀಕೆಗಳನ್ನು ಹಾಗೂ ಮಂದಿರ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧಕ-ಭಾದಕಗಳ ಲೆಕ್ಕಚಾರವನ್ನು ನೋಡಿಕೊಂಡು ಇಂಡಿಯಾ ಮೈತ್ರಿ ಪಕ್ಷಗಳು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳು ಇದೆ. ಇನ್ನು ಕಾಂಗ್ರೆಸ್​​​ ರಾಮಮಂದಿರ ವಿಚಾರದಲ್ಲಿ ಪ್ರಾಣಸಂಕಟಕ್ಕೆ ಸಿಲುಕಿಕೊಂಡದಂತಾಗಿದೆ. ಒಂದು ಕಡೆ ರಾಮಮಂದಿರ ಕಾರ್ಯಕ್ರಮದಲ್ಲಿ ಭಾಗಿಯಾದರೆ ಮುಸ್ಲಿಂ ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕು. ಭಾಗಿಯಾಗದಿದ್ದಾರೆ ಬಿಜೆಪಿ ಟೀಕೆಗಳು ಹಾಗೂ ಹಿಂದೂ ಸಮುದಾಯ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ, ಒಟ್ಟಾರೆ ಕಾಂಗ್ರೆಸ್​​ಗೆ​​​​ ರಾಮಮಂದಿರ ನುಂಗಲಾರದ ತುತ್ತಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Fri, 29 December 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ