AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ತಪಾಸಣೆಗೆ ರಾಹುಲ್- ಪ್ರಿಯಾಂಕಾ ಗಾಂಧಿಯೊಂದಿಗೆ ವಿದೇಶಕ್ಕೆ ಹೊರಟ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ನವದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಸಹ ಭೇಟಿ ಮಾಡಲಿದ್ದಾರೆ.

ಆರೋಗ್ಯ ತಪಾಸಣೆಗೆ ರಾಹುಲ್- ಪ್ರಿಯಾಂಕಾ ಗಾಂಧಿಯೊಂದಿಗೆ ವಿದೇಶಕ್ಕೆ ಹೊರಟ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 24, 2022 | 8:37 AM

Share

ನವದೆಹಲಿ: ವೈದ್ಯಕೀಯ ತಪಾಸಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ವಿದೇಶಕ್ಕೆ ತೆರಳಲಿದ್ದು, ಮಕ್ಕಳಾದ ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಕೂಡ ಅವರೊಂದಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ (Congress) ಪಕ್ಷದ ಮೂಲಗಳು ತಿಳಿಸಿವೆ. ಆದರೆ, ಇನ್ನೂ ಪ್ರಯಾಣದ ದಿನಾಂಕ ಅಥವಾ ಸೋನಿಯಾ ಗಾಂಧಿ ಭೇಟಿ ನೀಡುವ ಸ್ಥಳದ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಸೆಪ್ಟೆಂಬರ್ 4ರಂದು ರಾಹುಲ್ ಗಾಂಧಿ ಕಾಂಗ್ರೆಸ್‌ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ. ಹಾಗಾಗಿ, ಅದಾದ ಬಳಿಕವೇ ಅವರು ಸೋನಿಯಾ ಗಾಂಧಿಯನ್ನು ಕರೆದುಕೊಂಡು ವಿದೇಶಕ್ಕೆ ತೆರಳುವ ಸಾಧ್ಯತೆಯಿದೆ.

ಇದನ್ನೂ ಓದಿ: Rahul Gandhi Press Conference: ಭಾರತದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ, ನಾಲ್ವರಿಂದ ಸರ್ವಾಧಿಕಾರ; ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

“ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ನವದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಸಹ ಭೇಟಿ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಪ್ರಯಾಣಿಸಲಿದ್ದಾರೆ. ರಾಹುಲ್ ಗಾಂಧಿ ಸೆಪ್ಟೆಂಬರ್ 4ರಂದು ನವದೆಹಲಿಯಲ್ಲಿ ಕಾಂಗ್ರೆಸ್‌ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ಪ್ರಧಾನಿ ಮೋದಿ ಚೀನಾ ಜೊತೆ ಸೇರಿ ತ್ರಿವರ್ಣ ಧ್ವಜದ ಒಪ್ಪಂದ ಮಾಡಿಕೊಂಡಿದ್ದಾರೆ; ರಾಹುಲ್ ಗಾಂಧಿ ಟೀಕೆ

ಕಾಂಗ್ರೆಸ್ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ‘ಭಾರತ್ ಜೋಡೋ ಯಾತ್ರೆ’ಗೆ ಸೆಪ್ಟೆಂಬರ್ 7ರಿಂದ ಸಿದ್ಧತೆ ನಡೆಸುತ್ತಿರುವ ಸಮಯದಲ್ಲಿಯೇ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಲಿರುವ ವಿಷಯ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?