AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ತಪಾಸಣೆಗೆ ರಾಹುಲ್- ಪ್ರಿಯಾಂಕಾ ಗಾಂಧಿಯೊಂದಿಗೆ ವಿದೇಶಕ್ಕೆ ಹೊರಟ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ನವದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಸಹ ಭೇಟಿ ಮಾಡಲಿದ್ದಾರೆ.

ಆರೋಗ್ಯ ತಪಾಸಣೆಗೆ ರಾಹುಲ್- ಪ್ರಿಯಾಂಕಾ ಗಾಂಧಿಯೊಂದಿಗೆ ವಿದೇಶಕ್ಕೆ ಹೊರಟ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
TV9 Web
| Edited By: |

Updated on: Aug 24, 2022 | 8:37 AM

Share

ನವದೆಹಲಿ: ವೈದ್ಯಕೀಯ ತಪಾಸಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ವಿದೇಶಕ್ಕೆ ತೆರಳಲಿದ್ದು, ಮಕ್ಕಳಾದ ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಕೂಡ ಅವರೊಂದಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ (Congress) ಪಕ್ಷದ ಮೂಲಗಳು ತಿಳಿಸಿವೆ. ಆದರೆ, ಇನ್ನೂ ಪ್ರಯಾಣದ ದಿನಾಂಕ ಅಥವಾ ಸೋನಿಯಾ ಗಾಂಧಿ ಭೇಟಿ ನೀಡುವ ಸ್ಥಳದ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಸೆಪ್ಟೆಂಬರ್ 4ರಂದು ರಾಹುಲ್ ಗಾಂಧಿ ಕಾಂಗ್ರೆಸ್‌ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ. ಹಾಗಾಗಿ, ಅದಾದ ಬಳಿಕವೇ ಅವರು ಸೋನಿಯಾ ಗಾಂಧಿಯನ್ನು ಕರೆದುಕೊಂಡು ವಿದೇಶಕ್ಕೆ ತೆರಳುವ ಸಾಧ್ಯತೆಯಿದೆ.

ಇದನ್ನೂ ಓದಿ: Rahul Gandhi Press Conference: ಭಾರತದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ, ನಾಲ್ವರಿಂದ ಸರ್ವಾಧಿಕಾರ; ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

“ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅವರು ನವದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಸಹ ಭೇಟಿ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಪ್ರಯಾಣಿಸಲಿದ್ದಾರೆ. ರಾಹುಲ್ ಗಾಂಧಿ ಸೆಪ್ಟೆಂಬರ್ 4ರಂದು ನವದೆಹಲಿಯಲ್ಲಿ ಕಾಂಗ್ರೆಸ್‌ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ಪ್ರಧಾನಿ ಮೋದಿ ಚೀನಾ ಜೊತೆ ಸೇರಿ ತ್ರಿವರ್ಣ ಧ್ವಜದ ಒಪ್ಪಂದ ಮಾಡಿಕೊಂಡಿದ್ದಾರೆ; ರಾಹುಲ್ ಗಾಂಧಿ ಟೀಕೆ

ಕಾಂಗ್ರೆಸ್ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ‘ಭಾರತ್ ಜೋಡೋ ಯಾತ್ರೆ’ಗೆ ಸೆಪ್ಟೆಂಬರ್ 7ರಿಂದ ಸಿದ್ಧತೆ ನಡೆಸುತ್ತಿರುವ ಸಮಯದಲ್ಲಿಯೇ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಲಿರುವ ವಿಷಯ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ