AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಭಾರತೀಯರ ಶೀಘ್ರ ಬಿಡುಗಡೆ : ಕೇಂದ್ರ ಸರ್ಕಾರ

ರಷ್ಯಾದಲ್ಲಿ ಕೆಲಸ ನೀಡುವುದಾಗಿ ವಂಚಿಸಿ, ಅಲ್ಲಿ ಸೈನ್ಯಕ್ಕೆ ಮೋಸದಿಂದ ಸೇರಿಸಿಕೊಂಡಿರುವ ಭಾರತೀಯರನ್ನು ಶೀಘ್ರದಲ್ಲಿ ಬಿಡುಗಡೆ ಮಾಡಿಸುವುದಾಗಿ ಭಾರತ ಸರ್ಕಾರ ಹೇಳಿದೆ. ಈ ಕುರಿತು ರಷ್ಯಾ ಸರ್ಕಾರದ ಜತೆಗೆ ಮಾತುಕತೆ ನಡೆಸಿದ್ದೇವೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿದೆ. 

ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಭಾರತೀಯರ ಶೀಘ್ರ ಬಿಡುಗಡೆ : ಕೇಂದ್ರ ಸರ್ಕಾರ
ಅಕ್ಷಯ್​ ಪಲ್ಲಮಜಲು​​
|

Updated on:Mar 08, 2024 | 5:39 PM

Share

ದೆಹಲಿ, ಮಾ.8: ಕೇಂದ್ರ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ರಷ್ಯಾದ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಭಾರತೀಯರನ್ನು ಶೀಘ್ರ ಬಿಡುಗಡೆ ಮಾಡಲು ಬದ್ಧವಾಗಿದೆ ಎಂದು ಕೇಂದ್ರವು ಇಂದು (ಮಾ.8) ಹೇಳಿದೆ. ಭಾರತೀಯರನ್ನು ವಂಚಿಸಿ ರಷ್ಯಾದ ಸೇನೆಯೊಂದಿಗೆ ಕೆಲಸ ಮಾಡಲು ನೇಮಿಸಲಾಗಿದೆ. ಇದೀಗ ಅಲ್ಲಿರುವ ಭಾರತೀಯ ಪ್ರಜೆಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಲು ನಾವು ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಹೇಳಲಾಗಿದೆ.ಸುಳ್ಳು ನೆಪ ಮತ್ತು ಭರವಸೆಗಳನ್ನು ನೀಡಿ ಭಾರತೀಯ ನಾಗರಿಕರನ್ನು ಸೇನೆಗೆ ನೇಮಕ ಮಾಡಿಕೊಂಡಿರುವ ಏಜೆಂಟರು ಮತ್ತು ಕಾನೂನು ವಿರುದ್ಧವಾದ ಅಂಶಗಳು ಕಂಡು ಬಂದಿದ್ದು, ಅವರ ವಿರುದ್ಧ ಬಲವಾದ ಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಸಚಿವಾಲಯ ಹೇಳಿದೆ. ರಷ್ಯಾದ ಸೈನ್ಯದೊಂದಿಗೆ ಸಹಾಯಕ ಉದ್ಯೋಗಗಳಿಗಾಗಿ ಏಜೆಂಟ್‌ಗಳು ನೀಡುವ ಕೊಡುಗೆಗಳಿಂದ ವಂಚಿತರಾಗದಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ.

ಇಂತಹ ಮೊಸಗಳಿಗೆ ಒಳಲಾಗುವುದು ಅಪಾಯ ಮತ್ತು ಜೀವ ತೊಂದರೆ ಎಂದು ಹೇಳಿದೆ. ರಷ್ಯಾದ ಸೈನ್ಯದಲ್ಲಿ ಸಹಾಯಕ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ನಮ್ಮ ಪ್ರಜೆಗಳ ಬಿಡುಗಡೆಗೆ ಮತ್ತು ಅವರನ್ನು ಭಾರತಕ್ಕೆ ವಾಪಸ್ಸು ಕರೆಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿದೆ.

ರಷ್ಯಾ ಮತ್ತು ಉಕ್ರೇನ್ ಸೇರಿದಂತೆ ವಿದೇಶದಲ್ಲಿ ಲಾಭದಾಯಕ ಉದ್ಯೋಗಗಳ ನೀಡುವುದಾಗಿ ಪೊಳ್ಳು ಭರವಸೆಯನ್ನು ನೀಡಿ, ಯುವಜನರನ್ನು ಗುರಿಯಾಗಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗಿದೆ. ಹಾಗೂ ದೇಶಾದ್ಯಂತ ನಡೆಯುತ್ತಿರುವ ಮಾನವ ಕಳ್ಳಸಾಗಣೆ ಜಾಲವನ್ನು ಕೇಂದ್ರೀಯ ಬ್ಯೂರೋ (ಸಿಬಿಐ) ಭೇದಿಸಿದ್ದು, ಈ ಸಮಯದಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ಉಕ್ರೇನ್​​ ಮತ್ತು ರಷ್ಯಾದಲ್ಲಿ ಯುದ್ಧ ನಡೆಯುತ್ತಿದೆ, ಇದನ್ನೇ ಲಾಭ ಮಾಡಿಕೊಂಡು ಏಜೆಂಟ್​​​ಗಳು ಈ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವಾಲಯ ಹೇಳಿದೆ.

ದೆಹಲಿ, ತಿರುವನಂತಪುರಂ, ಮುಂಬೈ, ಅಂಬಾಲಾ, ಚಂಡೀಗಢ, ಮಧುರೈ ಮತ್ತು ಚೆನ್ನೈನ 13 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ಏಜೆಂಟ್​​​ಗಳು ವಿದೇಶಕ್ಕೆ ಮಾನವ ಕಳ್ಳಸಾಗಣೆಯನ್ನು ಮಾಡಿರುವ 35 ಪ್ರಕರಣಗಳು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಜನರಿಗೆ ಒದ್ದ ದೆಹಲಿ ಪೊಲೀಸ್; ಅಧಿಕಾರಿ ಅಮಾನತು

ರಷ್ಯಾ ಪರ ಹೋರಾಡಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದಾರೆ

ಇನ್ನು ರಷ್ಯಾದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಇಬ್ಬರು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆ ಮೊಹಮ್ಮದ್ ಅಸ್ಫಾನ್ ಅವರು ಸಾವನ್ನಪ್ಪಿರುವ ಬಗ್ಗೆ ಮಾರ್ಚ್ 6 ರಂದು ಎಕ್ಸ್​​​ನಲ್ಲಿ ತಿಳಿಸಿದೆ.

ಹೈದರಾಬಾದ್‌ನ 30 ವರ್ಷದ ವ್ಯಕ್ತಿ ಕಳೆದ ವರ್ಷದ ಕೊನೆಯಲ್ಲಿ ರಷ್ಯಾಕ್ಕೆ ಪ್ರಯಾಣ ಬೆಳೆಸಿದ್ದು, ಕಳೆದ ತಿಂಗಳು ಯುದ್ಧ ನಡೆಯುತ್ತಿದ್ದ ವಲಯದಲ್ಲಿ ಇಬ್ಬರು ಭಾರತೀಯರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದಕ್ಕೂ ಮೊದಲು, ಗುಜರಾತ್‌ನ ಸೂರತ್‌ನ ನಿವಾಸಿ 23 ವರ್ಷದ ಹೇಮಲ್ ಅಶ್ವಿನ್‌ಭಾಯ್ ಮಂಗುಕಿಯಾ ಅವರು ರಷ್ಯಾ ಆಕ್ರಮಿತ ಉಕ್ರೇನ್‌ನ ಒಂದು ಭಾಗವಾದ ಡೊನೆಟ್ಸ್ಕ್‌ನಲ್ಲಿ ರಷ್ಯಾದ ಸೈನ್ಯದೊಂದಿಗೆ ಭದ್ರತಾ ಸಹಾಯಕನಾಗಿ ಸೇವೆ ಸಲ್ಲಿಸುತ್ತಿದ್ದಾಗ ಉಕ್ರೇನಿಯನ್ ನಡೆಸಿದ ವಾಯುದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Fri, 8 March 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​