AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾದಾ ಸಂಪೂರ್ಣ ಗುಣಮುಖ, ಆಸ್ಪತ್ರೆಯಿಂದ ನಾಳೆಯೇ ಡಿಸ್ಚಾರ್ಜ್ ಆಗಲಿದ್ದಾರೆ ಗಂಗೂಲಿ..

ತನ್ನ ಡಿಸ್ಚಾರ್ಜ್​ನಿಂದ ಆಸ್ಪತ್ರೆ ಹಾಗೂ ಮನೆಯ ಮುಂದೆ ಆಗಮಿಸುವ ಅಭಿಮಾನಿಗಳನ್ನು ನಿಯಂತ್ರಿಸುವ ಸಲುವಾಗಿ ಗಂಗೂಲಿಯವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ದಾದಾ ಸಂಪೂರ್ಣ ಗುಣಮುಖ, ಆಸ್ಪತ್ರೆಯಿಂದ ನಾಳೆಯೇ ಡಿಸ್ಚಾರ್ಜ್ ಆಗಲಿದ್ದಾರೆ ಗಂಗೂಲಿ..
ಸೌರವ್​ ಗಂಗೂಲಿ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on:Jan 06, 2021 | 3:43 PM

ಕೊಲ್ಕತ್ತಾ: ಭಾರತೀಯ ಕ್ರಿಕೆಟ್‌ನ ಮಾಜಿ ನಾಯಕ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ನಾಳೆ, ಅಂದರೆ ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಆಗಲ್ಲಿದ್ದಾರೆ ಎಂದು ಕೋಲ್ಕತ್ತಾದ ವುಡ್‌ಲ್ಯಾಂಡ್ಸ್ ಆಸ್ಪತ್ರೆಯ ಹಿರಿಯ ವೈದ್ಯ ರೂಪಾಲಿ ಬಸು ಹೇಳಿದ್ದಾರೆ. ಸ್ವತಃ ಗಂಗೂಲಿ ಅವರೇ ಈ ನಿರ್ಧಾರ ತೆಗೆದುಕೊಂಡಿದ್ದು, ಇನ್ನೂ ಒಂದು ದಿನ ಆಸ್ಪತ್ರೆಯಲ್ಲಿ ಇರಲು ಗಂಗೂಲಿ ಬಯಸಿದ್ದಾರೆ. ಜೊತೆಗೆ ಗಂಗೂಲಿ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ರೂಪಾಲಿ ಬಸು ತಿಳಿಸಿದ್ದಾರೆ.

ಈ ಹಿಂದೆ ಗಂಗೂಲಿಯವರನ್ನು ಬುಧವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂಬ ಸುದ್ದಿ ಕೇಳಿಬಂದಿತ್ತು. ಇದಕ್ಕಾಗಿ ಸಂಪೂರ್ಣ ಸಿದ್ಧತೆಯು ನಡೆದಿತ್ತು. ಹೀಗಾಗಿ ಮಂಗಳವಾರ ಗಂಗೂಲಿಯವರ ಆರೋಗ್ಯ ಪರಿಶೀಲಿಸಿದ್ದ ಡಾ.ದೇವಿ ಶೆಟ್ಟಿ, ಗಂಗೂಲಿ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ವರದಿ ನೀಡಿದ್ದರು. ಆದರೆ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವುದಾಗಿ ಸ್ವತಃ ಗಂಗೂಲಿ ಅವರೇ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತನ್ನ ಡಿಸ್ಚಾರ್ಜ್​ನಿಂದ ಆಸ್ಪತ್ರೆ ಹಾಗೂ ಮನೆಯ ಮುಂದೆ ಆಗಮಿಸುವ ಅಭಿಮಾನಿಗಳನ್ನು ನಿಯಂತ್ರಿಸುವ ಸಲುವಾಗಿ ಗಂಗೂಲಿಯವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದ ದಾದಾ.. ಮನೆಯಲ್ಲಿ ಜಿಮ್ ಮಾಡುವಾಗ ಅವರ ಆರೋಗ್ಯ ಹಠಾತ್ತನೆ ಹದಗೆಟ್ಟಿತು. ಹೀಗಾಗಿ ಎದೆ ನೋವಿನಿಂದ ಬಳಲುತ್ತಿದ್ದ ಗಂಗೂಲಿಯನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗಾಗಿ ಗಂಗೂಲಿಯವರ ಆರೋಗ್ಯ ಪರಿಶೀಲಿಸಿದ ಆಸ್ಪತ್ರೆ ವೈದ್ಯರು, ಗಂಗೂಲಿಗೆ ಲಘು ಹೃದಯಾಘಾತವಾಗಿದೆಯೆಂದು ಸ್ಪಷ್ಟನೆ ನೀಡಿದ್ದರು. ಆಸ್ಪತ್ರೆಯಲ್ಲಿ 5 ದಿನ ಚಿಕಿತ್ಸೆ ಪಡೆದ ದಾದಾ ಇಂದು ಸಂಪೂರ್ಣ ಗುಣಮುಖರಾಗಿ, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲ್ಲಿದ್ದಾರೆ.

ಗಂಗೂಲಿ ಕಾಣಿಸಿಕೊಂಡಿದ್ದ ಫಾರ್ಚೂನ್ ಅಡುಗೆ ಎಣ್ಣೆ ಜಾಹೀರಾತುಗಳನ್ನು ತಡೆಹಿಡಿದ ಅದಾನಿ ವಿಲ್ಮರ್​ ಸಂಸ್ಥೆ

Published On - 3:32 pm, Wed, 6 January 21

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್