AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Siddique: ಬಾಬಾ ಸಿದ್ದಿಕಿ ಕೊಲೆ ಹಿಂದಿದೆಯಾ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್ ಕೈವಾಡ?

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಆಘಾತಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರೂ ಆರೋಪಿಗಳು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ದಾಳಿಯ ಹೊಣೆಯನ್ನು ಗ್ಯಾಂಗ್ ಇನ್ನೂ ಹೊತ್ತುಕೊಂಡಿಲ್ಲ.

Baba Siddique: ಬಾಬಾ ಸಿದ್ದಿಕಿ ಕೊಲೆ ಹಿಂದಿದೆಯಾ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್ ಕೈವಾಡ?
ಬಾಬಾ ಸಿದ್ದಿಕಿImage Credit source: Lokmat Times
ನಯನಾ ರಾಜೀವ್
|

Updated on: Oct 13, 2024 | 8:32 AM

Share

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಆಘಾತಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರೂ ಆರೋಪಿಗಳು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ದಾಳಿಯ ಹೊಣೆಯನ್ನು ಗ್ಯಾಂಗ್ ಹೊತ್ತುಕೊಂಡಿಲ್ಲ.

ಆರೋಪಿಗಳಿಬ್ಬರನ್ನೂ ಮುಂಬೈ ಪೊಲೀಸರು ಗುರುತಿಸಿ ಬಂಧಿಸಿದ್ದು, ಆರೋಪಿಗಳನ್ನು ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ. ಕರ್ನೈಲ್ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಧರ್ಮರಾಜ್ ಹರ್ಯಾಣದವನು ಎನ್ನಲಾಗಿದೆ.

ವಿಚಾರಣೆ ವೇಳೆ ಆರೋಪಿಗಳು ತಮ್ಮನ್ನು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಎಂದು ಗುರುತಿಸಿಕೊಂಡಿದ್ದಾರೆ. ಆರೋಪಿಗಳು ಕಳೆದ 25-30 ದಿನಗಳಿಂದ ಈ ಕೃತ್ಯ ಎಸಗಲು ಸಿದ್ಧತೆ ನಡೆಸಿದ್ದರು. ಮೂವರು ಆರೋಪಿಗಳು ಆಟೋ ರಿಕ್ಷಾದ ಮೂಲಕ ಬಾಂದ್ರಾ ಪೂರ್ವಕ್ಕೆ ಬಂದಿದ್ದರು. ಮೂವರು ಆರೋಪಿಗಳು ಅಲ್ಲಿ ಸ್ವಲ್ಪ ಸಮಯ ಕಳೆದರು ಮತ್ತು ಬಾಬಾ ಸಿದ್ದಿಕಿ ಬರುವವರೆಗೆ ಕಾಯುತ್ತಿದ್ದರು. ಇದಾದ ಬಳಿಕ ಬಾಬಾ ಸಿದ್ದಿಕಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಮತ್ತಷ್ಟು ಓದಿ: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಮುಂಬೈನ ಬಾಂದ್ರಾ ಪೂರ್ವ ಪ್ರದೇಶದಲ್ಲಿ ಶನಿವಾರ ರಾತ್ರಿ ಹತ್ಯೆ ಮಾಡಲಾಗಿದೆ. ಅವರ ಮೇಲೆ ಮೂವರು ಗುಂಡು ಹಾರಿಸಿದ್ದಾರೆ.

ನಿರ್ಮಲ್ ನಗರದ ಕೋಲ್ಗೇಟ್ ಗ್ರೌಂಡ್ ಬಳಿ ಇರುವ ಬಾಬಾ ಸಿದ್ದಿಕಿ ಪುತ್ರ ಹಾಗೂ ಶಾಸಕ ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ಇಬ್ಬರನ್ನು ಬಂಧಿಸಲಾಗಿದೆ.

ಬಾಬಾ ಸಿದ್ದಿಕಿ ಅವರು ಬಾಂದ್ರಾ (ಪಶ್ಚಿಮ) ಕ್ಷೇತ್ರವನ್ನು ವಿಧಾನಸಭೆಯಲ್ಲಿ ಮೂರು ಬಾರಿ ಪ್ರತಿನಿಧಿಸಿದ್ದರು. ಮುಂಬೈನ ಪ್ರಮುಖ ಮುಸ್ಲಿಂ ನಾಯಕ ಸಿದ್ದಿಕಿ, ಹಲವಾರು ಬಾಲಿವುಡ್ ತಾರೆಯರ ನಿಕಟವರ್ತಿ ಎಂದು ತಿಳಿದುಬಂದಿದೆ.

ಈ ಆಘಾತಕಾರಿ ಘಟನೆಯ ನಂತರ, ಪ್ರತಿಪಕ್ಷಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದವು. ರಾಜ್ಯದಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಶೀಘ್ರದಲ್ಲೇ ಅವರ ದಿನಾಂಕಗಳನ್ನು ಪ್ರಕಟಿಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ