AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದ ನಿಮಿತ್ತ ವಿಶೇಷ ರೈಲು ಸಂಚಾರ; ದಕ್ಷಿಣ ಮಧ್ಯ ರೈಲ್ವೆಯಿಂದ 4 ಟ್ರೇನ್​ಗಳ ವ್ಯವಸ್ಥೆ, ಇಲ್ಲಿದೆ ವೇಳಾಪಟ್ಟಿ

ದೇಶಾದ್ಯಂತ ಮಾರ್ಚ್​ 28-29ರಂದು ಹೋಳಿ ಹಬ್ಬ ಆಚರಣೆ ನಡೆಯಲಿದ್ದು, ದೇಶದೆಲ್ಲೆಡೆ ಜನರು ಇದನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಹಾಗೇ, ಹಬ್ಬ ಸಮೀಪಿಸುತ್ತಿದ್ದಂತೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರ ಸಂಚಾರವೂ ಹೆಚ್ಚಾಗಿರುತ್ತದೆ.

ಹೋಳಿ ಹಬ್ಬದ ನಿಮಿತ್ತ ವಿಶೇಷ ರೈಲು ಸಂಚಾರ; ದಕ್ಷಿಣ ಮಧ್ಯ ರೈಲ್ವೆಯಿಂದ 4 ಟ್ರೇನ್​ಗಳ ವ್ಯವಸ್ಥೆ, ಇಲ್ಲಿದೆ ವೇಳಾಪಟ್ಟಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 23, 2021 | 3:30 PM

Share

ಸಿಕಂದರಾಬಾದ್​: ಹೋಳಿ ಹಬ್ಬದ ನಿಮಿತ್ತ ದಕ್ಷಿಣ ಮಧ್ಯ ರೈಲ್ವೆ ವಲಯ ನಾಲ್ಕು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಇದರ ಅನ್ವಯ, ಸಿಕಂದರಾಬಾದ್​ ಮತ್ತು ಉತ್ತರಪ್ರದೇಶದ ಗೋರಖ್​ಪುರ ನಡುವೆ 2 ರೈಲುಗಳು ಹಾಗೂ ಹೈದರಾಬಾದ್​ ಮತ್ತು ಬಿಹಾರದ ರಕ್ಸೌಲ್​ ನಡುವೆ 2 ವಿಶೇಷ ಟ್ರೇನ್​​ಗಳು ಸಂಚಾರ ಮಾಡಲಿವೆ.

ದೇಶಾದ್ಯಂತ ಮಾರ್ಚ್​ 28-29ರಂದು ಹೋಳಿ ಹಬ್ಬ ಆಚರಣೆ ನಡೆಯಲಿದ್ದು, ದೇಶದೆಲ್ಲೆಡೆ ಜನರು ಇದನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಹಾಗೇ, ಹಬ್ಬ ಸಮೀಪಿಸುತ್ತಿದ್ದಂತೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರ ಸಂಚಾರವೂ ಹೆಚ್ಚಾಗಿರುತ್ತದೆ. ಈ ಕಾರಣಕ್ಕಾಗಿ ದಕ್ಷಿಣ ಮಧ್ಯ ರೈಲ್ವೆ ವಲಯ ಹೆಚ್ಚುವರಿ ರೈಲುಗಳನ್ನು ಬಿಡಲು ನಿರ್ಧರಿಸಿದೆ.

ಹೀಗಿದೆ ಟ್ರೇನ್​ ನಂಬರ್​ ಮತ್ತು ವೇಳಾಪಟ್ಟಿ 07003 ನಂಬರ್​ನ ಟ್ರೇನ್​ ರಾತ್ರಿ 9.25ಕ್ಕೆ ಸಿಕಂದರಾಬಾದ್​ನಿಂದ ಹೊರಟು ಮುಂಜಾನೆ 06.25ಕ್ಕೆ ಗೋರಖ್​ಪುರ ತಲುಪುತ್ತದೆ. ಹಾಗೇ 07004 ನಂಬರ್​ನ ರೈಲು ಪ್ರತಿದಿನ ಸಂಜೆ 5.25ಕ್ಕೆ ಗೋರಖ್​​ಪುರದಿಂದ ಹೊರಟು ಮರುದಿನ ಮುಂಜಾನೆ 4.10ಕ್ಕೆ ಸಿಕಂದರಾಬಾದ್​​ಗೆ ಬರುತ್ತದೆ.

ಹಾಗೇ, ಟ್ರೇನ್​ ನಂಬರ್​ 07040 ಪ್ರತಿದಿನ ಸಂಜೆ 9.40ಕ್ಕೆ ಹೈದರಾಬಾದ್​​ನಿಂದ ಹೊರಟು ಮರುದಿನ ಮುಂಜಾನೆ 4.50ಕ್ಕೆ ರಕ್ಸೌಲ್​ ತಲುಪುತ್ತದೆ. ಹಾಗೇ ಇನ್ನೊಂದು ರೈಲು ಅಂದರೆ ಟ್ರೇನ್​ ನಂಬರ್​ 07039, ಪ್ರತಿದಿನ ಮುಂಜಾನೆ 3.25ಕ್ಕೆ ರಕ್ಸೌಲ್​​ನಿಂದ ಹೊರಟು, ರಾತ್ರಿ 10.15ರ ಹೊತ್ತಿಗೆ ಹೈದರಾಬಾದ್​ ತಲುಪಲಿದೆ. ಈ ವಿಶೇಷ ರೈಲುಗಳಲ್ಲಿ ಪ್ರಯಾಣ ಮಾಡಲಿಚ್ಛಿಸುವ ಪ್ರಯಾಣಿಕರು ಮೊದಲೇ ಟಿಕೆಟ್​ ಕಾಯ್ದಿರಿಸಬೇಕಾಗಿದೆ. ಇನ್ನು ಉತ್ತರ ರೈಲ್ವೆ ವಲಯ ಕೂಡ ವಿವಿಧ ಪ್ರದೇಶಗಳ ನಡುವೆ ವಿಶೇಷ ರೈಲು ಸಂಚಾರ ಪ್ರಾರಂಭಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಯುವರತ್ನ ಸಿನಿಮಾದಲ್ಲಿ ನನ್ನ ಪಾತ್ರ ರಿವೀಲ್ ಮಾಡಬಾರ್ದು ಅಂತ ಪ್ರಾಮಿಸ್ ಮಾಡಿಸ್ಕೋಂಡಿದ್ದಾರೆ – ನಟಿ ಸೋನುಗೌಡ

Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್