AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದ ನಿಮಿತ್ತ ವಿಶೇಷ ರೈಲು ಸಂಚಾರ; ದಕ್ಷಿಣ ಮಧ್ಯ ರೈಲ್ವೆಯಿಂದ 4 ಟ್ರೇನ್​ಗಳ ವ್ಯವಸ್ಥೆ, ಇಲ್ಲಿದೆ ವೇಳಾಪಟ್ಟಿ

ದೇಶಾದ್ಯಂತ ಮಾರ್ಚ್​ 28-29ರಂದು ಹೋಳಿ ಹಬ್ಬ ಆಚರಣೆ ನಡೆಯಲಿದ್ದು, ದೇಶದೆಲ್ಲೆಡೆ ಜನರು ಇದನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಹಾಗೇ, ಹಬ್ಬ ಸಮೀಪಿಸುತ್ತಿದ್ದಂತೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರ ಸಂಚಾರವೂ ಹೆಚ್ಚಾಗಿರುತ್ತದೆ.

ಹೋಳಿ ಹಬ್ಬದ ನಿಮಿತ್ತ ವಿಶೇಷ ರೈಲು ಸಂಚಾರ; ದಕ್ಷಿಣ ಮಧ್ಯ ರೈಲ್ವೆಯಿಂದ 4 ಟ್ರೇನ್​ಗಳ ವ್ಯವಸ್ಥೆ, ಇಲ್ಲಿದೆ ವೇಳಾಪಟ್ಟಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 23, 2021 | 3:30 PM

Share

ಸಿಕಂದರಾಬಾದ್​: ಹೋಳಿ ಹಬ್ಬದ ನಿಮಿತ್ತ ದಕ್ಷಿಣ ಮಧ್ಯ ರೈಲ್ವೆ ವಲಯ ನಾಲ್ಕು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಇದರ ಅನ್ವಯ, ಸಿಕಂದರಾಬಾದ್​ ಮತ್ತು ಉತ್ತರಪ್ರದೇಶದ ಗೋರಖ್​ಪುರ ನಡುವೆ 2 ರೈಲುಗಳು ಹಾಗೂ ಹೈದರಾಬಾದ್​ ಮತ್ತು ಬಿಹಾರದ ರಕ್ಸೌಲ್​ ನಡುವೆ 2 ವಿಶೇಷ ಟ್ರೇನ್​​ಗಳು ಸಂಚಾರ ಮಾಡಲಿವೆ.

ದೇಶಾದ್ಯಂತ ಮಾರ್ಚ್​ 28-29ರಂದು ಹೋಳಿ ಹಬ್ಬ ಆಚರಣೆ ನಡೆಯಲಿದ್ದು, ದೇಶದೆಲ್ಲೆಡೆ ಜನರು ಇದನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಹಾಗೇ, ಹಬ್ಬ ಸಮೀಪಿಸುತ್ತಿದ್ದಂತೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರ ಸಂಚಾರವೂ ಹೆಚ್ಚಾಗಿರುತ್ತದೆ. ಈ ಕಾರಣಕ್ಕಾಗಿ ದಕ್ಷಿಣ ಮಧ್ಯ ರೈಲ್ವೆ ವಲಯ ಹೆಚ್ಚುವರಿ ರೈಲುಗಳನ್ನು ಬಿಡಲು ನಿರ್ಧರಿಸಿದೆ.

ಹೀಗಿದೆ ಟ್ರೇನ್​ ನಂಬರ್​ ಮತ್ತು ವೇಳಾಪಟ್ಟಿ 07003 ನಂಬರ್​ನ ಟ್ರೇನ್​ ರಾತ್ರಿ 9.25ಕ್ಕೆ ಸಿಕಂದರಾಬಾದ್​ನಿಂದ ಹೊರಟು ಮುಂಜಾನೆ 06.25ಕ್ಕೆ ಗೋರಖ್​ಪುರ ತಲುಪುತ್ತದೆ. ಹಾಗೇ 07004 ನಂಬರ್​ನ ರೈಲು ಪ್ರತಿದಿನ ಸಂಜೆ 5.25ಕ್ಕೆ ಗೋರಖ್​​ಪುರದಿಂದ ಹೊರಟು ಮರುದಿನ ಮುಂಜಾನೆ 4.10ಕ್ಕೆ ಸಿಕಂದರಾಬಾದ್​​ಗೆ ಬರುತ್ತದೆ.

ಹಾಗೇ, ಟ್ರೇನ್​ ನಂಬರ್​ 07040 ಪ್ರತಿದಿನ ಸಂಜೆ 9.40ಕ್ಕೆ ಹೈದರಾಬಾದ್​​ನಿಂದ ಹೊರಟು ಮರುದಿನ ಮುಂಜಾನೆ 4.50ಕ್ಕೆ ರಕ್ಸೌಲ್​ ತಲುಪುತ್ತದೆ. ಹಾಗೇ ಇನ್ನೊಂದು ರೈಲು ಅಂದರೆ ಟ್ರೇನ್​ ನಂಬರ್​ 07039, ಪ್ರತಿದಿನ ಮುಂಜಾನೆ 3.25ಕ್ಕೆ ರಕ್ಸೌಲ್​​ನಿಂದ ಹೊರಟು, ರಾತ್ರಿ 10.15ರ ಹೊತ್ತಿಗೆ ಹೈದರಾಬಾದ್​ ತಲುಪಲಿದೆ. ಈ ವಿಶೇಷ ರೈಲುಗಳಲ್ಲಿ ಪ್ರಯಾಣ ಮಾಡಲಿಚ್ಛಿಸುವ ಪ್ರಯಾಣಿಕರು ಮೊದಲೇ ಟಿಕೆಟ್​ ಕಾಯ್ದಿರಿಸಬೇಕಾಗಿದೆ. ಇನ್ನು ಉತ್ತರ ರೈಲ್ವೆ ವಲಯ ಕೂಡ ವಿವಿಧ ಪ್ರದೇಶಗಳ ನಡುವೆ ವಿಶೇಷ ರೈಲು ಸಂಚಾರ ಪ್ರಾರಂಭಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಯುವರತ್ನ ಸಿನಿಮಾದಲ್ಲಿ ನನ್ನ ಪಾತ್ರ ರಿವೀಲ್ ಮಾಡಬಾರ್ದು ಅಂತ ಪ್ರಾಮಿಸ್ ಮಾಡಿಸ್ಕೋಂಡಿದ್ದಾರೆ – ನಟಿ ಸೋನುಗೌಡ

Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ