AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದ ನಿಮಿತ್ತ ವಿಶೇಷ ರೈಲು ಸಂಚಾರ; ದಕ್ಷಿಣ ಮಧ್ಯ ರೈಲ್ವೆಯಿಂದ 4 ಟ್ರೇನ್​ಗಳ ವ್ಯವಸ್ಥೆ, ಇಲ್ಲಿದೆ ವೇಳಾಪಟ್ಟಿ

ದೇಶಾದ್ಯಂತ ಮಾರ್ಚ್​ 28-29ರಂದು ಹೋಳಿ ಹಬ್ಬ ಆಚರಣೆ ನಡೆಯಲಿದ್ದು, ದೇಶದೆಲ್ಲೆಡೆ ಜನರು ಇದನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಹಾಗೇ, ಹಬ್ಬ ಸಮೀಪಿಸುತ್ತಿದ್ದಂತೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರ ಸಂಚಾರವೂ ಹೆಚ್ಚಾಗಿರುತ್ತದೆ.

ಹೋಳಿ ಹಬ್ಬದ ನಿಮಿತ್ತ ವಿಶೇಷ ರೈಲು ಸಂಚಾರ; ದಕ್ಷಿಣ ಮಧ್ಯ ರೈಲ್ವೆಯಿಂದ 4 ಟ್ರೇನ್​ಗಳ ವ್ಯವಸ್ಥೆ, ಇಲ್ಲಿದೆ ವೇಳಾಪಟ್ಟಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 23, 2021 | 3:30 PM

Share

ಸಿಕಂದರಾಬಾದ್​: ಹೋಳಿ ಹಬ್ಬದ ನಿಮಿತ್ತ ದಕ್ಷಿಣ ಮಧ್ಯ ರೈಲ್ವೆ ವಲಯ ನಾಲ್ಕು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಇದರ ಅನ್ವಯ, ಸಿಕಂದರಾಬಾದ್​ ಮತ್ತು ಉತ್ತರಪ್ರದೇಶದ ಗೋರಖ್​ಪುರ ನಡುವೆ 2 ರೈಲುಗಳು ಹಾಗೂ ಹೈದರಾಬಾದ್​ ಮತ್ತು ಬಿಹಾರದ ರಕ್ಸೌಲ್​ ನಡುವೆ 2 ವಿಶೇಷ ಟ್ರೇನ್​​ಗಳು ಸಂಚಾರ ಮಾಡಲಿವೆ.

ದೇಶಾದ್ಯಂತ ಮಾರ್ಚ್​ 28-29ರಂದು ಹೋಳಿ ಹಬ್ಬ ಆಚರಣೆ ನಡೆಯಲಿದ್ದು, ದೇಶದೆಲ್ಲೆಡೆ ಜನರು ಇದನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಹಾಗೇ, ಹಬ್ಬ ಸಮೀಪಿಸುತ್ತಿದ್ದಂತೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರ ಸಂಚಾರವೂ ಹೆಚ್ಚಾಗಿರುತ್ತದೆ. ಈ ಕಾರಣಕ್ಕಾಗಿ ದಕ್ಷಿಣ ಮಧ್ಯ ರೈಲ್ವೆ ವಲಯ ಹೆಚ್ಚುವರಿ ರೈಲುಗಳನ್ನು ಬಿಡಲು ನಿರ್ಧರಿಸಿದೆ.

ಹೀಗಿದೆ ಟ್ರೇನ್​ ನಂಬರ್​ ಮತ್ತು ವೇಳಾಪಟ್ಟಿ 07003 ನಂಬರ್​ನ ಟ್ರೇನ್​ ರಾತ್ರಿ 9.25ಕ್ಕೆ ಸಿಕಂದರಾಬಾದ್​ನಿಂದ ಹೊರಟು ಮುಂಜಾನೆ 06.25ಕ್ಕೆ ಗೋರಖ್​ಪುರ ತಲುಪುತ್ತದೆ. ಹಾಗೇ 07004 ನಂಬರ್​ನ ರೈಲು ಪ್ರತಿದಿನ ಸಂಜೆ 5.25ಕ್ಕೆ ಗೋರಖ್​​ಪುರದಿಂದ ಹೊರಟು ಮರುದಿನ ಮುಂಜಾನೆ 4.10ಕ್ಕೆ ಸಿಕಂದರಾಬಾದ್​​ಗೆ ಬರುತ್ತದೆ.

ಹಾಗೇ, ಟ್ರೇನ್​ ನಂಬರ್​ 07040 ಪ್ರತಿದಿನ ಸಂಜೆ 9.40ಕ್ಕೆ ಹೈದರಾಬಾದ್​​ನಿಂದ ಹೊರಟು ಮರುದಿನ ಮುಂಜಾನೆ 4.50ಕ್ಕೆ ರಕ್ಸೌಲ್​ ತಲುಪುತ್ತದೆ. ಹಾಗೇ ಇನ್ನೊಂದು ರೈಲು ಅಂದರೆ ಟ್ರೇನ್​ ನಂಬರ್​ 07039, ಪ್ರತಿದಿನ ಮುಂಜಾನೆ 3.25ಕ್ಕೆ ರಕ್ಸೌಲ್​​ನಿಂದ ಹೊರಟು, ರಾತ್ರಿ 10.15ರ ಹೊತ್ತಿಗೆ ಹೈದರಾಬಾದ್​ ತಲುಪಲಿದೆ. ಈ ವಿಶೇಷ ರೈಲುಗಳಲ್ಲಿ ಪ್ರಯಾಣ ಮಾಡಲಿಚ್ಛಿಸುವ ಪ್ರಯಾಣಿಕರು ಮೊದಲೇ ಟಿಕೆಟ್​ ಕಾಯ್ದಿರಿಸಬೇಕಾಗಿದೆ. ಇನ್ನು ಉತ್ತರ ರೈಲ್ವೆ ವಲಯ ಕೂಡ ವಿವಿಧ ಪ್ರದೇಶಗಳ ನಡುವೆ ವಿಶೇಷ ರೈಲು ಸಂಚಾರ ಪ್ರಾರಂಭಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಯುವರತ್ನ ಸಿನಿಮಾದಲ್ಲಿ ನನ್ನ ಪಾತ್ರ ರಿವೀಲ್ ಮಾಡಬಾರ್ದು ಅಂತ ಪ್ರಾಮಿಸ್ ಮಾಡಿಸ್ಕೋಂಡಿದ್ದಾರೆ – ನಟಿ ಸೋನುಗೌಡ

Roberrt: ರಾಜ್ಯಾದ್ಯಂತ ಇನ್ಮೇಲೆ ಡಿ ಬಾಸ್​ ಜಾತ್ರೆ! ಫ್ಯಾನ್ಸ್​ಗೆ ಧನ್ಯವಾದ ಹೇಳಲು ದರ್ಶನ್​ ದೊಡ್ಡ ನಿರ್ಧಾರ!

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?