ದಕ್ಷಿಣ ಭಾರತದ ಕೊಡುಗೆಯಿಲ್ಲದೆ ಭಾರತದ ಪ್ರಗತಿಯನ್ನು ಯೋಚಿಸಲೂ ಸಾಧ್ಯವಿಲ್ಲ: ಅಮಿತ್ ಶಾ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸ್ಥಳೀಯ ಸಂಸ್ಕೃತಿ ಮತ್ತು ಭಾಷೆಗಳನ್ನು ಗೌರವಿಸುತ್ತದೆ ಎಂದು ಅಮಿತ್ ಶಾ ನುಡಿದರು.

ದಕ್ಷಿಣ ಭಾರತದ ಕೊಡುಗೆಯಿಲ್ಲದೆ ಭಾರತದ ಪ್ರಗತಿಯನ್ನು ಯೋಚಿಸಲೂ ಸಾಧ್ಯವಿಲ್ಲ: ಅಮಿತ್ ಶಾ
ಅಮಿತ್​ ಶಾ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 14, 2021 | 11:03 PM

ತಿರುಪತಿ: ದಕ್ಷಿಣ ಭಾರತದ ರಾಜ್ಯಗಳ ಕೊಡುಗೆಯನ್ನು ನಿರ್ಲಕ್ಷಿಸಿ ಭಾರತದ ಪ್ರಗತಿಯನ್ನು ಆಲೋಚಿಸಲು ಸಾಧ್ಯವೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ದಕ್ಷಿಣ ವಲಯ ಮಂಡಳಿಯ 29ನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಭಾರತದ ರಾಜ್ಯಗಳ ಪ್ರಾಚೀನ ಸಂಸ್ಕೃತಿ, ಪರಂಪರೆ ಮತ್ತು ಭಾಷೆಗಳು ಭಾರತದ ಸಂಸ್ಕೃತಿ ಮತ್ತು ಇತಿಹಾಸದ ಮೌಲ್ಯವನ್ನು ಹೆಚ್ಚಿಸಿವೆ ಎಂದು ತಿಳಿಸಿದರು. ಸಭೆಯಲ್ಲಿ ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ ಮತ್ತು ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹಗಳು ದಕ್ಷಿಣ ವಲಯ ಮಂಡಳಿಯ ಸದಸ್ಯ ರಾಜ್ಯಗಳಾಗಿವೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೊವಿಡ್-19 ಲಸಿಕಾಕರಣದ ವೇಗ ಹೆಚ್ಚಿಸಬೇಕು, ಮುಖ್ಯಮಂತ್ರಿಗಳೇ ಸ್ವತಃ ಈ ವಿಚಾರದ ನಿಗಾ ವಹಿಸಬೇಕು ಎಂದು ಶಾ ವಿವಿಧ ರಾಜ್ಯಗಳ ಆಡಳಿತ ಚುಕ್ಕಾಣಿ ಹಿಡಿದವರಿಗೆ ಸೂಚಿಸಿದರು. ಮಾದಕದ್ರವ್ಯಗಳ ಜಾಲವನ್ನು ಹತ್ತಿಕ್ಕಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಭಾರತೀಯ ದಂಡಸಂಹಿತೆ ಮತ್ತು ಅಪರಾಧ ಪ್ರಕ್ರಿಯಾ ನಿಯಮಗಳಲ್ಲಿ ಬದಲಾವಣೆಗಳನ್ನು ಸೂಚಿಸುವಂತಿದ್ದರೆ ತಿಳಿಸಿ ಎಂದು ಅಮಿತ್ ಶಾ ಹೇಳಿದರು.

ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ ಅವರು, ಪೊಲೀಸ್ ಇಲಾಖೆಯಲ್ಲಿ ವಿಚಾರಣೆಗಾಗಿ ನಿರ್ದೇಶನಾಲಯ ಸ್ಥಾಪಿಸಬೇಕು. ಉತ್ತಮ ತನಿಖೆ ನಡೆಯುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಸ್ಥಳೀಯ ಭಾಷೆಗಳಲ್ಲಿ ಪಾಠ ಮಾಡುವ ಒಂದಾದರೂ ವಿಧಿವಿಜ್ಞಾನ (ಫೊರೆನ್ಸಿಕ್) ಕಾಲೇಜು ಆರಂಭಿಸಬೇಕು. ಆಗ ಉತ್ತಮ ತನಿಖೆ ನಿರ್ವಹಿಸಲು ಸೂಕ್ತರೀತಿಯಲ್ಲಿ ಸಜ್ಜುಗೊಂಡ ಮಾನವ ಸಂಪನ್ಮೂಲ ಸಿದ್ಧವಾಗುತ್ತದೆ ಎಂದು ನುಡಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸ್ಥಳೀಯ ಸಂಸ್ಕೃತಿ ಮತ್ತು ಭಾಷೆಗಳನ್ನು ಗೌರವಿಸುತ್ತದೆ. ಈ ಸಭೆಯಲ್ಲಿಯೂ ವಿವಿಧ ರಾಜ್ಯಗಳ ಭಾಷೆಗೆ ಅನುವಾದದ ಸೌಕರ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ರಾಜ್ಯಗಳ ಪ್ರತಿನಿಧಿಗಳು ಸ್ಥಳೀಯ ಭಾಷೆಗಳಲ್ಲಿಯೇ ಮಾತನಾಡಿದರೆ ನನಗೆ ಹೆಚ್ಚು ಸಂತೋಷವಾಗುತ್ತದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ವಿಚಾರ ವಿನಿಮಯ ನಡೆಸಲು ವಲಯ ಮಂಡಳಿ ಸಭೆಗಳು ಅತ್ಯುತ್ತಮ ವೇದಿಕೆಗಳಾಗಿವೆ. ಭಾನುವಾರದ ಸಭೆಯಲ್ಲಿ ಚರ್ಚೆಗೆ ಬಂದ 51 ವಿಷಯಗಳ ಪೈಕಿ 30 ಅಂಶಗಳನ್ನು ಪರಿಹರಿಸಲಾಗಿದೆ. ವಲಯ ಮಂಡಳಿ ಸಭೆಗಳು ಸಲಹಾತ್ಮಕವಾಗಿದ್ದರೂ ಹಲವು ಪ್ರಮುಖ ವಿಚಾರಗಳನ್ನು ಪರಿಹರಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಸದಸ್ಯ ರಾಜ್ಯಗಳ ಅತ್ಯುನ್ನತ ಹಂತದ ಆಡಳಿತ ಪ್ರತಿನಿಧಿಗಳು ಪರಸ್ಪರ ಭೇಟಿಯಾಗಿ ಚರ್ಚಿಸಲು ಇಂಥ ಸಭೆಗಳು ಅವಕಾಶ ಮಾಡಿಕೊಡುತ್ತವೆ ಎಂದು ಅಮಿತ್ ಶಾ ನುಡಿದರು.

ವಲಯ ಮಂಡಳಿ ಸಭೆಗಳಲ್ಲಿ ರಾಜ್ಯಗಳ ಗಡಿಗಳಿಗೆ ಸಂಬಂಧಿಸಿದ ವಿವಾದಗಳು, ಭದ್ರತೆ, ಮೂಲಸೌಕರ್ಯ ಸಮಸ್ಯೆಗಳು, ಪರಿಸರ, ವಸತಿ, ಶಿಕ್ಷಣ, ಆಹಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಕುರಿತು ಚರ್ಚೆಗೆ ಅವಕಾಶವಿದೆ.

ಇದನ್ನೂ ಓದಿ: ಅಗತ್ಯ ಬಿದ್ದಾಗ ನನ್ನನ್ನು ಸಂಪರ್ಕಿಸಿ: ಜಮ್ಮು ವ್ಯಕ್ತಿಯ ಫೋನ್ ನಂಬರ್​ ಪಡೆದು ತನ್ನ ನಂಬರ್ ಕೊಟ್ಟ ಅಮಿತ್ ಶಾ ಇದನ್ನೂ ಓದಿ: Amit Shah: ಗಡಿ ನಿರ್ಣಯ, ಚುನಾವಣೆ ಬಳಿಕ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ವಾಪಾಸ್; ಅಮಿತ್ ಶಾ ಭರವಸೆ

Published On - 11:01 pm, Sun, 14 November 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ