AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕೊರಿಯಾದ ಯುವತಿಗೆ ಮುಂಬೈನಲ್ಲಿ ಕಿರುಕುಳ; ಟ್ವಿಟ್ಟರ್​​ನಲ್ಲಿ ವಿಡಿಯೋ ವೈರಲ್

ಆತನಿಂದ ಬಿಡಿಸಿಕೊಂಡು ಅವಳು ದೂರ ಹೋಗುತ್ತಿದ್ದಂತೆ ಅವನು ಮತ್ತೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಬೈಕಿನಲ್ಲಿ ಬಂದು ಅವಳಿಗೆ ಲಿಫ್ಟ್ ಕೊಡುತ್ತೇನೆ ಬಾ ಎಂದು ಹೇಳುತ್ತಾನೆ. ಅದಕ್ಕೆ ಆ ಮಹಿಳೆ ನಿರಾಕರಿಸುತ್ತಾಳೆ.

ದಕ್ಷಿಣ ಕೊರಿಯಾದ ಯುವತಿಗೆ ಮುಂಬೈನಲ್ಲಿ ಕಿರುಕುಳ; ಟ್ವಿಟ್ಟರ್​​ನಲ್ಲಿ ವಿಡಿಯೋ ವೈರಲ್
ಕೊರಿಯಾದ ಯೂಟ್ಯೂಬರ್​ಗೆ ಕಿರುಕುಳ
TV9 Web
| Edited By: |

Updated on: Dec 01, 2022 | 12:50 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಲೈವ್ ಪರ್ಫಾರ್ಮನ್ಸ್​ ಮಾಡುತ್ತಿದ್ದ ದಕ್ಷಿಣ ಕೊರಿಯಾದ ಮಹಿಳೆಗೆ ಕಿರುಕುಳ ನೀಡಿದ ಇಬ್ಬರನ್ನು ಬಂಧಿಸಲಾಗಿದೆ. ಆನ್‌ಲೈನ್‌ನಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಆರೋಪಿಗಳಲ್ಲಿ ಕೊರಿಯಾದ ಯೂಟ್ಯೂಬರ್​ (YouTuber) ಒಬ್ಬರು ಎಷ್ಟೇ ಬೇಡ ಬೇಡ ಎಂದು ಕೂಗುತ್ತಿದ್ದರೂ ಕೇಳದೆ ಆಕೆಯನ್ನು ಎಳೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ನಿನ್ನೆ ರಾತ್ರಿ ಈ ಘಟನೆ ನಡೆದಿದೆ.

ಆಕೆಯ ವಿರೋಧದ ನಡುವೆಯೂ ಆ ವ್ಯಕ್ತಿ ಆ ಯೂಟ್ಯೂಬರ್ ಹತ್ತಿರ ಬಂದು ಆಕೆಯ ಕೈ ಹಿಡಿದಿರುವುದು ವಿಡಿಯೋದಲ್ಲಿದೆ. ಆತನಿಂದ ಬಿಡಿಸಿಕೊಂಡು ಅವಳು ದೂರ ಹೋಗುತ್ತಿದ್ದಂತೆ ಅವನು ಮತ್ತೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಬೈಕಿನಲ್ಲಿ ಬಂದು ಅವಳಿಗೆ ಲಿಫ್ಟ್ ಕೊಡುತ್ತೇನೆ ಬಾ ಎಂದು ಹೇಳುತ್ತಾನೆ. ಅದಕ್ಕೆ ಆ ಮಹಿಳೆ ನಿರಾಕರಿಸುತ್ತಾಳೆ. ನನ್ನ ಮನೆ ಇಲ್ಲಿಯೇ ಹತ್ತಿರದಲ್ಲಿದೆ, ನಾನೇ ಹೋಗುತ್ತೇನೆ ಎಂದು ಆಕೆ ಇಂಗ್ಲಿಷ್‌ನಲ್ಲಿ ಹೇಳುತ್ತಾಳೆ.

ಇದನ್ನೂ ಓದಿ: Viral Video: ಭತ್ತದ ಗದ್ದೆಯಿಂದ ಓಡಿಸಿದ ಜನರ ಮೇಲೆ ಕೋಪಗೊಂಡು ಅಟ್ಟಾಡಿಸಿದ ಕಾಡಾನೆ; ವಿಡಿಯೋ ವೈರಲ್

ಈ ವಿಡಿಯೋ ಇದೀಗ ವೈರಲ್ ಆಗಿದೆ. ನಿನ್ನೆ ರಾತ್ರಿ ಸ್ಟ್ರೀಮ್‌ನಲ್ಲಿ ಒಬ್ಬ ವ್ಯಕ್ತಿ ನನಗೆ ಕಿರುಕುಳ ನೀಡಿದನು. ಅವನು ತನ್ನ ಸ್ನೇಹಿತನೊಂದಿಗೆ ಇದ್ದುದರಿಂದ ನಾನು ಪರಿಸ್ಥಿತಿಯನ್ನು ನಿಯಂತ್ರಿಸಲು ನನ್ನ ಕೈಲಾದಷ್ಟು ಪ್ರಯತ್ನಿಸಿದೆ. ಇಂತಹ ಘಟನೆಗಳಿಂದಾಗಿ ರಾತ್ರಿ ಲೈವ್​ ಸ್ಟ್ರೀಮಿಂಗ್ ನೀಡಲು ಯೋಚಿಸುವಂತಾಗಿದೆ ಎಂದು ಆ ಯುವತಿ ವಿಡಿಯೋವನ್ನು ರೀಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ವಿಡಿಯೋ ಆಧರಿಸಿ ಪೊಲೀಸರು ಸ್ವಯಂ ಪ್ರೇರಿತವಾಗಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?