AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕೊರಿಯಾದ ಯುವತಿಗೆ ಮುಂಬೈನಲ್ಲಿ ಕಿರುಕುಳ; ಟ್ವಿಟ್ಟರ್​​ನಲ್ಲಿ ವಿಡಿಯೋ ವೈರಲ್

ಆತನಿಂದ ಬಿಡಿಸಿಕೊಂಡು ಅವಳು ದೂರ ಹೋಗುತ್ತಿದ್ದಂತೆ ಅವನು ಮತ್ತೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಬೈಕಿನಲ್ಲಿ ಬಂದು ಅವಳಿಗೆ ಲಿಫ್ಟ್ ಕೊಡುತ್ತೇನೆ ಬಾ ಎಂದು ಹೇಳುತ್ತಾನೆ. ಅದಕ್ಕೆ ಆ ಮಹಿಳೆ ನಿರಾಕರಿಸುತ್ತಾಳೆ.

ದಕ್ಷಿಣ ಕೊರಿಯಾದ ಯುವತಿಗೆ ಮುಂಬೈನಲ್ಲಿ ಕಿರುಕುಳ; ಟ್ವಿಟ್ಟರ್​​ನಲ್ಲಿ ವಿಡಿಯೋ ವೈರಲ್
ಕೊರಿಯಾದ ಯೂಟ್ಯೂಬರ್​ಗೆ ಕಿರುಕುಳ
TV9 Web
| Edited By: |

Updated on: Dec 01, 2022 | 12:50 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಲೈವ್ ಪರ್ಫಾರ್ಮನ್ಸ್​ ಮಾಡುತ್ತಿದ್ದ ದಕ್ಷಿಣ ಕೊರಿಯಾದ ಮಹಿಳೆಗೆ ಕಿರುಕುಳ ನೀಡಿದ ಇಬ್ಬರನ್ನು ಬಂಧಿಸಲಾಗಿದೆ. ಆನ್‌ಲೈನ್‌ನಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಆರೋಪಿಗಳಲ್ಲಿ ಕೊರಿಯಾದ ಯೂಟ್ಯೂಬರ್​ (YouTuber) ಒಬ್ಬರು ಎಷ್ಟೇ ಬೇಡ ಬೇಡ ಎಂದು ಕೂಗುತ್ತಿದ್ದರೂ ಕೇಳದೆ ಆಕೆಯನ್ನು ಎಳೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ನಿನ್ನೆ ರಾತ್ರಿ ಈ ಘಟನೆ ನಡೆದಿದೆ.

ಆಕೆಯ ವಿರೋಧದ ನಡುವೆಯೂ ಆ ವ್ಯಕ್ತಿ ಆ ಯೂಟ್ಯೂಬರ್ ಹತ್ತಿರ ಬಂದು ಆಕೆಯ ಕೈ ಹಿಡಿದಿರುವುದು ವಿಡಿಯೋದಲ್ಲಿದೆ. ಆತನಿಂದ ಬಿಡಿಸಿಕೊಂಡು ಅವಳು ದೂರ ಹೋಗುತ್ತಿದ್ದಂತೆ ಅವನು ಮತ್ತೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಬೈಕಿನಲ್ಲಿ ಬಂದು ಅವಳಿಗೆ ಲಿಫ್ಟ್ ಕೊಡುತ್ತೇನೆ ಬಾ ಎಂದು ಹೇಳುತ್ತಾನೆ. ಅದಕ್ಕೆ ಆ ಮಹಿಳೆ ನಿರಾಕರಿಸುತ್ತಾಳೆ. ನನ್ನ ಮನೆ ಇಲ್ಲಿಯೇ ಹತ್ತಿರದಲ್ಲಿದೆ, ನಾನೇ ಹೋಗುತ್ತೇನೆ ಎಂದು ಆಕೆ ಇಂಗ್ಲಿಷ್‌ನಲ್ಲಿ ಹೇಳುತ್ತಾಳೆ.

ಇದನ್ನೂ ಓದಿ: Viral Video: ಭತ್ತದ ಗದ್ದೆಯಿಂದ ಓಡಿಸಿದ ಜನರ ಮೇಲೆ ಕೋಪಗೊಂಡು ಅಟ್ಟಾಡಿಸಿದ ಕಾಡಾನೆ; ವಿಡಿಯೋ ವೈರಲ್

ಈ ವಿಡಿಯೋ ಇದೀಗ ವೈರಲ್ ಆಗಿದೆ. ನಿನ್ನೆ ರಾತ್ರಿ ಸ್ಟ್ರೀಮ್‌ನಲ್ಲಿ ಒಬ್ಬ ವ್ಯಕ್ತಿ ನನಗೆ ಕಿರುಕುಳ ನೀಡಿದನು. ಅವನು ತನ್ನ ಸ್ನೇಹಿತನೊಂದಿಗೆ ಇದ್ದುದರಿಂದ ನಾನು ಪರಿಸ್ಥಿತಿಯನ್ನು ನಿಯಂತ್ರಿಸಲು ನನ್ನ ಕೈಲಾದಷ್ಟು ಪ್ರಯತ್ನಿಸಿದೆ. ಇಂತಹ ಘಟನೆಗಳಿಂದಾಗಿ ರಾತ್ರಿ ಲೈವ್​ ಸ್ಟ್ರೀಮಿಂಗ್ ನೀಡಲು ಯೋಚಿಸುವಂತಾಗಿದೆ ಎಂದು ಆ ಯುವತಿ ವಿಡಿಯೋವನ್ನು ರೀಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ವಿಡಿಯೋ ಆಧರಿಸಿ ಪೊಲೀಸರು ಸ್ವಯಂ ಪ್ರೇರಿತವಾಗಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್