Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕೊರಿಯಾದ ಯುವತಿಗೆ ಮುಂಬೈನಲ್ಲಿ ಕಿರುಕುಳ; ಟ್ವಿಟ್ಟರ್​​ನಲ್ಲಿ ವಿಡಿಯೋ ವೈರಲ್

ಆತನಿಂದ ಬಿಡಿಸಿಕೊಂಡು ಅವಳು ದೂರ ಹೋಗುತ್ತಿದ್ದಂತೆ ಅವನು ಮತ್ತೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಬೈಕಿನಲ್ಲಿ ಬಂದು ಅವಳಿಗೆ ಲಿಫ್ಟ್ ಕೊಡುತ್ತೇನೆ ಬಾ ಎಂದು ಹೇಳುತ್ತಾನೆ. ಅದಕ್ಕೆ ಆ ಮಹಿಳೆ ನಿರಾಕರಿಸುತ್ತಾಳೆ.

ದಕ್ಷಿಣ ಕೊರಿಯಾದ ಯುವತಿಗೆ ಮುಂಬೈನಲ್ಲಿ ಕಿರುಕುಳ; ಟ್ವಿಟ್ಟರ್​​ನಲ್ಲಿ ವಿಡಿಯೋ ವೈರಲ್
ಕೊರಿಯಾದ ಯೂಟ್ಯೂಬರ್​ಗೆ ಕಿರುಕುಳ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 01, 2022 | 12:50 PM

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಲೈವ್ ಪರ್ಫಾರ್ಮನ್ಸ್​ ಮಾಡುತ್ತಿದ್ದ ದಕ್ಷಿಣ ಕೊರಿಯಾದ ಮಹಿಳೆಗೆ ಕಿರುಕುಳ ನೀಡಿದ ಇಬ್ಬರನ್ನು ಬಂಧಿಸಲಾಗಿದೆ. ಆನ್‌ಲೈನ್‌ನಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಆರೋಪಿಗಳಲ್ಲಿ ಕೊರಿಯಾದ ಯೂಟ್ಯೂಬರ್​ (YouTuber) ಒಬ್ಬರು ಎಷ್ಟೇ ಬೇಡ ಬೇಡ ಎಂದು ಕೂಗುತ್ತಿದ್ದರೂ ಕೇಳದೆ ಆಕೆಯನ್ನು ಎಳೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ನಿನ್ನೆ ರಾತ್ರಿ ಈ ಘಟನೆ ನಡೆದಿದೆ.

ಆಕೆಯ ವಿರೋಧದ ನಡುವೆಯೂ ಆ ವ್ಯಕ್ತಿ ಆ ಯೂಟ್ಯೂಬರ್ ಹತ್ತಿರ ಬಂದು ಆಕೆಯ ಕೈ ಹಿಡಿದಿರುವುದು ವಿಡಿಯೋದಲ್ಲಿದೆ. ಆತನಿಂದ ಬಿಡಿಸಿಕೊಂಡು ಅವಳು ದೂರ ಹೋಗುತ್ತಿದ್ದಂತೆ ಅವನು ಮತ್ತೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಬೈಕಿನಲ್ಲಿ ಬಂದು ಅವಳಿಗೆ ಲಿಫ್ಟ್ ಕೊಡುತ್ತೇನೆ ಬಾ ಎಂದು ಹೇಳುತ್ತಾನೆ. ಅದಕ್ಕೆ ಆ ಮಹಿಳೆ ನಿರಾಕರಿಸುತ್ತಾಳೆ. ನನ್ನ ಮನೆ ಇಲ್ಲಿಯೇ ಹತ್ತಿರದಲ್ಲಿದೆ, ನಾನೇ ಹೋಗುತ್ತೇನೆ ಎಂದು ಆಕೆ ಇಂಗ್ಲಿಷ್‌ನಲ್ಲಿ ಹೇಳುತ್ತಾಳೆ.

ಇದನ್ನೂ ಓದಿ: Viral Video: ಭತ್ತದ ಗದ್ದೆಯಿಂದ ಓಡಿಸಿದ ಜನರ ಮೇಲೆ ಕೋಪಗೊಂಡು ಅಟ್ಟಾಡಿಸಿದ ಕಾಡಾನೆ; ವಿಡಿಯೋ ವೈರಲ್

ಈ ವಿಡಿಯೋ ಇದೀಗ ವೈರಲ್ ಆಗಿದೆ. ನಿನ್ನೆ ರಾತ್ರಿ ಸ್ಟ್ರೀಮ್‌ನಲ್ಲಿ ಒಬ್ಬ ವ್ಯಕ್ತಿ ನನಗೆ ಕಿರುಕುಳ ನೀಡಿದನು. ಅವನು ತನ್ನ ಸ್ನೇಹಿತನೊಂದಿಗೆ ಇದ್ದುದರಿಂದ ನಾನು ಪರಿಸ್ಥಿತಿಯನ್ನು ನಿಯಂತ್ರಿಸಲು ನನ್ನ ಕೈಲಾದಷ್ಟು ಪ್ರಯತ್ನಿಸಿದೆ. ಇಂತಹ ಘಟನೆಗಳಿಂದಾಗಿ ರಾತ್ರಿ ಲೈವ್​ ಸ್ಟ್ರೀಮಿಂಗ್ ನೀಡಲು ಯೋಚಿಸುವಂತಾಗಿದೆ ಎಂದು ಆ ಯುವತಿ ವಿಡಿಯೋವನ್ನು ರೀಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ವಿಡಿಯೋ ಆಧರಿಸಿ ಪೊಲೀಸರು ಸ್ವಯಂ ಪ್ರೇರಿತವಾಗಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು