AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕೊರಿಯಾದ ಯುವತಿಗೆ ಮುಂಬೈನಲ್ಲಿ ಕಿರುಕುಳ; ಟ್ವಿಟ್ಟರ್​​ನಲ್ಲಿ ವಿಡಿಯೋ ವೈರಲ್

ಆತನಿಂದ ಬಿಡಿಸಿಕೊಂಡು ಅವಳು ದೂರ ಹೋಗುತ್ತಿದ್ದಂತೆ ಅವನು ಮತ್ತೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಬೈಕಿನಲ್ಲಿ ಬಂದು ಅವಳಿಗೆ ಲಿಫ್ಟ್ ಕೊಡುತ್ತೇನೆ ಬಾ ಎಂದು ಹೇಳುತ್ತಾನೆ. ಅದಕ್ಕೆ ಆ ಮಹಿಳೆ ನಿರಾಕರಿಸುತ್ತಾಳೆ.

ದಕ್ಷಿಣ ಕೊರಿಯಾದ ಯುವತಿಗೆ ಮುಂಬೈನಲ್ಲಿ ಕಿರುಕುಳ; ಟ್ವಿಟ್ಟರ್​​ನಲ್ಲಿ ವಿಡಿಯೋ ವೈರಲ್
ಕೊರಿಯಾದ ಯೂಟ್ಯೂಬರ್​ಗೆ ಕಿರುಕುಳ
TV9 Web
| Edited By: |

Updated on: Dec 01, 2022 | 12:50 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಲೈವ್ ಪರ್ಫಾರ್ಮನ್ಸ್​ ಮಾಡುತ್ತಿದ್ದ ದಕ್ಷಿಣ ಕೊರಿಯಾದ ಮಹಿಳೆಗೆ ಕಿರುಕುಳ ನೀಡಿದ ಇಬ್ಬರನ್ನು ಬಂಧಿಸಲಾಗಿದೆ. ಆನ್‌ಲೈನ್‌ನಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಆರೋಪಿಗಳಲ್ಲಿ ಕೊರಿಯಾದ ಯೂಟ್ಯೂಬರ್​ (YouTuber) ಒಬ್ಬರು ಎಷ್ಟೇ ಬೇಡ ಬೇಡ ಎಂದು ಕೂಗುತ್ತಿದ್ದರೂ ಕೇಳದೆ ಆಕೆಯನ್ನು ಎಳೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ನಿನ್ನೆ ರಾತ್ರಿ ಈ ಘಟನೆ ನಡೆದಿದೆ.

ಆಕೆಯ ವಿರೋಧದ ನಡುವೆಯೂ ಆ ವ್ಯಕ್ತಿ ಆ ಯೂಟ್ಯೂಬರ್ ಹತ್ತಿರ ಬಂದು ಆಕೆಯ ಕೈ ಹಿಡಿದಿರುವುದು ವಿಡಿಯೋದಲ್ಲಿದೆ. ಆತನಿಂದ ಬಿಡಿಸಿಕೊಂಡು ಅವಳು ದೂರ ಹೋಗುತ್ತಿದ್ದಂತೆ ಅವನು ಮತ್ತೆ ಇನ್ನೊಬ್ಬ ವ್ಯಕ್ತಿಯೊಂದಿಗೆ ಬೈಕಿನಲ್ಲಿ ಬಂದು ಅವಳಿಗೆ ಲಿಫ್ಟ್ ಕೊಡುತ್ತೇನೆ ಬಾ ಎಂದು ಹೇಳುತ್ತಾನೆ. ಅದಕ್ಕೆ ಆ ಮಹಿಳೆ ನಿರಾಕರಿಸುತ್ತಾಳೆ. ನನ್ನ ಮನೆ ಇಲ್ಲಿಯೇ ಹತ್ತಿರದಲ್ಲಿದೆ, ನಾನೇ ಹೋಗುತ್ತೇನೆ ಎಂದು ಆಕೆ ಇಂಗ್ಲಿಷ್‌ನಲ್ಲಿ ಹೇಳುತ್ತಾಳೆ.

ಇದನ್ನೂ ಓದಿ: Viral Video: ಭತ್ತದ ಗದ್ದೆಯಿಂದ ಓಡಿಸಿದ ಜನರ ಮೇಲೆ ಕೋಪಗೊಂಡು ಅಟ್ಟಾಡಿಸಿದ ಕಾಡಾನೆ; ವಿಡಿಯೋ ವೈರಲ್

ಈ ವಿಡಿಯೋ ಇದೀಗ ವೈರಲ್ ಆಗಿದೆ. ನಿನ್ನೆ ರಾತ್ರಿ ಸ್ಟ್ರೀಮ್‌ನಲ್ಲಿ ಒಬ್ಬ ವ್ಯಕ್ತಿ ನನಗೆ ಕಿರುಕುಳ ನೀಡಿದನು. ಅವನು ತನ್ನ ಸ್ನೇಹಿತನೊಂದಿಗೆ ಇದ್ದುದರಿಂದ ನಾನು ಪರಿಸ್ಥಿತಿಯನ್ನು ನಿಯಂತ್ರಿಸಲು ನನ್ನ ಕೈಲಾದಷ್ಟು ಪ್ರಯತ್ನಿಸಿದೆ. ಇಂತಹ ಘಟನೆಗಳಿಂದಾಗಿ ರಾತ್ರಿ ಲೈವ್​ ಸ್ಟ್ರೀಮಿಂಗ್ ನೀಡಲು ಯೋಚಿಸುವಂತಾಗಿದೆ ಎಂದು ಆ ಯುವತಿ ವಿಡಿಯೋವನ್ನು ರೀಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ವಿಡಿಯೋ ಆಧರಿಸಿ ಪೊಲೀಸರು ಸ್ವಯಂ ಪ್ರೇರಿತವಾಗಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ