AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ […]

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ
ಆಯೇಷಾ ಬಾನು
|

Updated on: Sep 26, 2020 | 8:16 AM

Share

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ ಪೊಲೀಸ್ ಗೌರವ ಸಲ್ಲಿಸಲಿದೆ.

ಅಂತ್ಯಕ್ರಿಯೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11ರವರೆಗೆ SPB ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬೆಳಗ್ಗೆ 11ರ ನಂತರ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ