SPB ಆರೋಗ್ಯ ಸ್ಟೇಬಲ್, ಸದ್ಯ ಅವರಿಗೆ ಪೂರ್ಣ ಪ್ರಜ್ಞೆ ಬಂದಿದೆ

ಚೆನ್ನೈ: ಕೊರೊನಾ ಸೋಂಕು ದೃಢಪಟ್ಟ ನಂತರ ಕೆಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ S.P. ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಎಂಜಿಎಂ ಆಸ್ಪತ್ರೆಯಿಂದ ಎಸ್ಪಿಬಿ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದ್ದು, ಎಸ್ಪಿಬಿ ಆರೋಗ್ಯ ಸ್ಟೇಬಲ್ ಆಗಿದ್ದು,ಪೂರ್ಣ ಪ್ರಜ್ಞೆ ಬಂದಿದೆ. ಈಗಲೂ ಎಸ್ಪಿಬಿ ಅವರಿಗೆ ವೆಂಟಿಲೆಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿದಿದೆ. ಜೊತೆಗೆ ಫಿಸಿಯೋಥೆರಪಿಗೆ ಚಿಕಿತ್ಸೆಗೆ ಬಹಳ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ. ಹಾಗೂ ಮಲ್ಟಿಡಿಸಿಪ್ಲಿನರಿ ಕ್ಲಿನಿಕಲ್ […]

SPB ಆರೋಗ್ಯ ಸ್ಟೇಬಲ್, ಸದ್ಯ ಅವರಿಗೆ  ಪೂರ್ಣ ಪ್ರಜ್ಞೆ ಬಂದಿದೆ
ಸಾಧು ಶ್ರೀನಾಥ್​

Updated on: Aug 31, 2020 | 6:33 PM

ಚೆನ್ನೈ: ಕೊರೊನಾ ಸೋಂಕು ದೃಢಪಟ್ಟ ನಂತರ ಕೆಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ S.P. ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಎಂಜಿಎಂ ಆಸ್ಪತ್ರೆಯಿಂದ ಎಸ್ಪಿಬಿ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದ್ದು, ಎಸ್ಪಿಬಿ ಆರೋಗ್ಯ ಸ್ಟೇಬಲ್ ಆಗಿದ್ದು,ಪೂರ್ಣ ಪ್ರಜ್ಞೆ ಬಂದಿದೆ. ಈಗಲೂ ಎಸ್ಪಿಬಿ ಅವರಿಗೆ ವೆಂಟಿಲೆಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿದಿದೆ.

ಜೊತೆಗೆ ಫಿಸಿಯೋಥೆರಪಿಗೆ ಚಿಕಿತ್ಸೆಗೆ ಬಹಳ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ. ಹಾಗೂ ಮಲ್ಟಿಡಿಸಿಪ್ಲಿನರಿ ಕ್ಲಿನಿಕಲ್ ಟೀಮ್ ಎಸ್ಪಿಬಿ ಅವರ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

Published On - 6:25 pm, Mon, 31 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us