AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣ ಕ್ಷಣಕ್ಕೂ ಬಿಗಡಾಯಿಸ್ತಿದೆ ಎಸ್​ಪಿಬಿ ಸರ್ ಆರೋಗ್ಯ ಸ್ಥಿತಿ, ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ

ಚೆನ್ನೈ: ಗಾನ ಗಂಧರ್ವ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಷಣ ಕ್ಷಣಕ್ಕೂ ಬಿಗಡಾಯಿಸ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರ ಜೊತೆಗೆ ಎಸ್​ಪಿಬಿ ಪುತ್ರ ಚರಣ್ ಚರ್ಚೆ ನಡೆಸುತ್ತಿದ್ದಾರೆ. ಎಸ್​ಪಿಬಿ ಪುತ್ರಿ ಪಲ್ಲವಿ, ಸಹೋದರಿ ಶೈಲಜಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಎಸ್​ಪಿಬಿ ಆಪ್ತರಲ್ಲಿ, ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕೆಲಹೊತ್ತಲ್ಲಿ ಖ್ಯಾತ ನಿರ್ದೇಶಕ ಭಾರತಿರಾಜ, ಸಂಗೀತ ನಿರ್ದೇಶಕ ಇಳಯರಾಜ ಆಸ್ಪತ್ರೆಗೆ ಭೇಟಿ ನೀಡುವ ಮಾಹಿತಿ ಇದೆ. ಇಂದು ಬೆಳಗ್ಗೆ ಕಮಲ್​ ಹಾಸನ್ ಬಂದು  ಎಸ್ಪಿಬಿ ಆರೋಗ್ಯ ವಿಚಾರಿಸಿಕೊಂಡು […]

ಕ್ಷಣ ಕ್ಷಣಕ್ಕೂ ಬಿಗಡಾಯಿಸ್ತಿದೆ ಎಸ್​ಪಿಬಿ ಸರ್ ಆರೋಗ್ಯ ಸ್ಥಿತಿ, ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 25, 2020 | 2:16 PM

Share

ಚೆನ್ನೈ: ಗಾನ ಗಂಧರ್ವ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಷಣ ಕ್ಷಣಕ್ಕೂ ಬಿಗಡಾಯಿಸ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರ ಜೊತೆಗೆ ಎಸ್​ಪಿಬಿ ಪುತ್ರ ಚರಣ್ ಚರ್ಚೆ ನಡೆಸುತ್ತಿದ್ದಾರೆ.

ಎಸ್​ಪಿಬಿ ಪುತ್ರಿ ಪಲ್ಲವಿ, ಸಹೋದರಿ ಶೈಲಜಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಎಸ್​ಪಿಬಿ ಆಪ್ತರಲ್ಲಿ, ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕೆಲಹೊತ್ತಲ್ಲಿ ಖ್ಯಾತ ನಿರ್ದೇಶಕ ಭಾರತಿರಾಜ, ಸಂಗೀತ ನಿರ್ದೇಶಕ ಇಳಯರಾಜ ಆಸ್ಪತ್ರೆಗೆ ಭೇಟಿ ನೀಡುವ ಮಾಹಿತಿ ಇದೆ.

ಇಂದು ಬೆಳಗ್ಗೆ ಕಮಲ್​ ಹಾಸನ್ ಬಂದು  ಎಸ್ಪಿಬಿ ಆರೋಗ್ಯ ವಿಚಾರಿಸಿಕೊಂಡು ಹೋದರು. ಚೆನ್ನೈ ಎಂಜಿಎಂ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಚೆನ್ನೈನ ಎಸ್​ಪಿಬಿ ನಿವಾಸಕ್ಕೆ ಆಗಮಿಸ್ತಿರೋ ಆಪ್ತರು: ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್‌ಪಿಬಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಹೆಲ್ತ್​ಬುಲೆಟಿನ್ ಬಿಡುಗಡೆಯಾಗಿಲ್ಲ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಎಸ್​ಪಿಬಿ ನಿವಾಸದಲ್ಲಿ ಕುಟುಂಬಸ್ಥರೆಲ್ಲ ಸೇರಿದ್ದಾರೆ. ಕಣ್ಣೀರು ಸುರಿಸುತ್ತಿದ್ದಾರೆ. ಎಸ್​ಪಿಬಿ ಮನೆಯ ಸುತ್ತ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ನಿವಾಸಕ್ಕೆ ಆಗಮಿಸೋರಿಗೆ ಕುರ್ಚಿ ವ್ಯವಸ್ಥೆ ಮಾಡಲಾಗಿದೆ.

ಎಸ್​ಪಿಬಿ ಅವರು ಯಾವತ್ತೂ ನನ್ನನ್ನ ಡ್ರೈವರ್ ಅಂತಾ ನೋಡ್ಲಿಲ್ಲ: ಎಸ್​ಪಿ ಬಾಲಸುಬ್ರಹ್ಮಣ್ಯಂ ನಮಗೆ ದೇವರಿದ್ದಂತೆ. ಆದ್ರೆ ನಾವೀಗ ಭಗವಂತನ ಮೇಲೆಯೇ ಭಾರ ಹಾಕಿದ್ದೇವೆ ಎಂದು ಎಂಜಿಎಂ ಆಸ್ಪತ್ರೆ ಎದುರು ಎಸ್​ಪಿಬಿ ಡ್ರೈವರ್ ದುಃಖ ಹಂಚಿಕೊಂಡಿದ್ದಾರೆ. ಎಸ್​ಪಿಬಿ ಅವರು ಯಾವತ್ತೂ ನನ್ನನ್ನ ಡ್ರೈವರ್ ಅಂತಾ ನೋಡ್ಲಿಲ್ಲ. ಅವರ ಜೊತೆ ಊಟ ಮಾಡಿದ್ದೀನಿ, ಅವರ ಜೊತೆ ಓಡಾಡಿದ್ದೀನಿ. ಅವರ ಮನೆಯ ಮಗನ ರೀತಿ ನಮ್ಮನ್ನ ನೋಡಿಕೊಳ್ತಿದ್ರು .

ಅವರು ಹಾಡಿರೋ ದೇವರು ಹಾಡುಗಳು ದೇವರಿಗೆ ತಲುಪಿವೆ. ಈಗ ಆ ದೇವರೇ ಅವರನ್ನ ಬದುಕಿಸ್ತಾರೆ ಅನ್ನೋ ನಂಬಿಕೆ ಇದೆ. ತಿರುವಣ್ಣಾಮಲೈಗೆ ಎಸ್​ಪಿಬಿ ಜಾಸ್ತಿ ಹೋಗ್ತಾ ಇದ್ರು. ಪೂಜೆ ಮುಗಿಯೋ ವರೆಗೂ ಎಸ್​ಪಿಬಿ ಹನಿ ನೀರು ಕುಡಿಯುತ್ತಿರಲಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಎಸ್​ಪಿಬಿ ಹಣ ನೀಡಿದ್ರು . ನನಗೆ ಬೈಪಾಸ್ ಸರ್ಜರಿ ಆದಾಗಲೂ ಅವರೇ ಹಣ ನೀಡಿ ನನ್ನನ್ನ ಬದುಕಿಸಿದ್ರು . ಅವರು ವಾಪಸ್ ಬರ್ತಾರೆ ಅನ್ನೋ ನಂಬಿಕೆ ಇದೆ. ವಾಪಸ್ ಬಂದು ಹಾಡು ಹಾಡದೇ ಇದ್ರೂ ನಮ್ಮ ಜೊತೆ ಇದ್ರೆ ಸಾಕು ಎಂದು ಡ್ರೈವರ್ ಷಣ್ಮುಗಂ ದುಃಖದಿಂದ ತಮ್ಮ ನೋವನ್ನು ಹೊರಹಾಕಿದ್ದಾರೆ.

Published On - 12:20 pm, Fri, 25 September 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು