AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣ ಕ್ಷಣಕ್ಕೂ ಬಿಗಡಾಯಿಸ್ತಿದೆ ಎಸ್​ಪಿಬಿ ಸರ್ ಆರೋಗ್ಯ ಸ್ಥಿತಿ, ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ

ಚೆನ್ನೈ: ಗಾನ ಗಂಧರ್ವ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಷಣ ಕ್ಷಣಕ್ಕೂ ಬಿಗಡಾಯಿಸ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರ ಜೊತೆಗೆ ಎಸ್​ಪಿಬಿ ಪುತ್ರ ಚರಣ್ ಚರ್ಚೆ ನಡೆಸುತ್ತಿದ್ದಾರೆ. ಎಸ್​ಪಿಬಿ ಪುತ್ರಿ ಪಲ್ಲವಿ, ಸಹೋದರಿ ಶೈಲಜಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಎಸ್​ಪಿಬಿ ಆಪ್ತರಲ್ಲಿ, ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕೆಲಹೊತ್ತಲ್ಲಿ ಖ್ಯಾತ ನಿರ್ದೇಶಕ ಭಾರತಿರಾಜ, ಸಂಗೀತ ನಿರ್ದೇಶಕ ಇಳಯರಾಜ ಆಸ್ಪತ್ರೆಗೆ ಭೇಟಿ ನೀಡುವ ಮಾಹಿತಿ ಇದೆ. ಇಂದು ಬೆಳಗ್ಗೆ ಕಮಲ್​ ಹಾಸನ್ ಬಂದು  ಎಸ್ಪಿಬಿ ಆರೋಗ್ಯ ವಿಚಾರಿಸಿಕೊಂಡು […]

ಕ್ಷಣ ಕ್ಷಣಕ್ಕೂ ಬಿಗಡಾಯಿಸ್ತಿದೆ ಎಸ್​ಪಿಬಿ ಸರ್ ಆರೋಗ್ಯ ಸ್ಥಿತಿ, ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ
ಆಯೇಷಾ ಬಾನು
| Edited By: |

Updated on:Sep 25, 2020 | 2:16 PM

Share

ಚೆನ್ನೈ: ಗಾನ ಗಂಧರ್ವ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಷಣ ಕ್ಷಣಕ್ಕೂ ಬಿಗಡಾಯಿಸ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರ ಜೊತೆಗೆ ಎಸ್​ಪಿಬಿ ಪುತ್ರ ಚರಣ್ ಚರ್ಚೆ ನಡೆಸುತ್ತಿದ್ದಾರೆ.

ಎಸ್​ಪಿಬಿ ಪುತ್ರಿ ಪಲ್ಲವಿ, ಸಹೋದರಿ ಶೈಲಜಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಎಸ್​ಪಿಬಿ ಆಪ್ತರಲ್ಲಿ, ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕೆಲಹೊತ್ತಲ್ಲಿ ಖ್ಯಾತ ನಿರ್ದೇಶಕ ಭಾರತಿರಾಜ, ಸಂಗೀತ ನಿರ್ದೇಶಕ ಇಳಯರಾಜ ಆಸ್ಪತ್ರೆಗೆ ಭೇಟಿ ನೀಡುವ ಮಾಹಿತಿ ಇದೆ.

ಇಂದು ಬೆಳಗ್ಗೆ ಕಮಲ್​ ಹಾಸನ್ ಬಂದು  ಎಸ್ಪಿಬಿ ಆರೋಗ್ಯ ವಿಚಾರಿಸಿಕೊಂಡು ಹೋದರು. ಚೆನ್ನೈ ಎಂಜಿಎಂ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಚೆನ್ನೈನ ಎಸ್​ಪಿಬಿ ನಿವಾಸಕ್ಕೆ ಆಗಮಿಸ್ತಿರೋ ಆಪ್ತರು: ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್‌ಪಿಬಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಹೆಲ್ತ್​ಬುಲೆಟಿನ್ ಬಿಡುಗಡೆಯಾಗಿಲ್ಲ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಎಸ್​ಪಿಬಿ ನಿವಾಸದಲ್ಲಿ ಕುಟುಂಬಸ್ಥರೆಲ್ಲ ಸೇರಿದ್ದಾರೆ. ಕಣ್ಣೀರು ಸುರಿಸುತ್ತಿದ್ದಾರೆ. ಎಸ್​ಪಿಬಿ ಮನೆಯ ಸುತ್ತ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ನಿವಾಸಕ್ಕೆ ಆಗಮಿಸೋರಿಗೆ ಕುರ್ಚಿ ವ್ಯವಸ್ಥೆ ಮಾಡಲಾಗಿದೆ.

ಎಸ್​ಪಿಬಿ ಅವರು ಯಾವತ್ತೂ ನನ್ನನ್ನ ಡ್ರೈವರ್ ಅಂತಾ ನೋಡ್ಲಿಲ್ಲ: ಎಸ್​ಪಿ ಬಾಲಸುಬ್ರಹ್ಮಣ್ಯಂ ನಮಗೆ ದೇವರಿದ್ದಂತೆ. ಆದ್ರೆ ನಾವೀಗ ಭಗವಂತನ ಮೇಲೆಯೇ ಭಾರ ಹಾಕಿದ್ದೇವೆ ಎಂದು ಎಂಜಿಎಂ ಆಸ್ಪತ್ರೆ ಎದುರು ಎಸ್​ಪಿಬಿ ಡ್ರೈವರ್ ದುಃಖ ಹಂಚಿಕೊಂಡಿದ್ದಾರೆ. ಎಸ್​ಪಿಬಿ ಅವರು ಯಾವತ್ತೂ ನನ್ನನ್ನ ಡ್ರೈವರ್ ಅಂತಾ ನೋಡ್ಲಿಲ್ಲ. ಅವರ ಜೊತೆ ಊಟ ಮಾಡಿದ್ದೀನಿ, ಅವರ ಜೊತೆ ಓಡಾಡಿದ್ದೀನಿ. ಅವರ ಮನೆಯ ಮಗನ ರೀತಿ ನಮ್ಮನ್ನ ನೋಡಿಕೊಳ್ತಿದ್ರು .

ಅವರು ಹಾಡಿರೋ ದೇವರು ಹಾಡುಗಳು ದೇವರಿಗೆ ತಲುಪಿವೆ. ಈಗ ಆ ದೇವರೇ ಅವರನ್ನ ಬದುಕಿಸ್ತಾರೆ ಅನ್ನೋ ನಂಬಿಕೆ ಇದೆ. ತಿರುವಣ್ಣಾಮಲೈಗೆ ಎಸ್​ಪಿಬಿ ಜಾಸ್ತಿ ಹೋಗ್ತಾ ಇದ್ರು. ಪೂಜೆ ಮುಗಿಯೋ ವರೆಗೂ ಎಸ್​ಪಿಬಿ ಹನಿ ನೀರು ಕುಡಿಯುತ್ತಿರಲಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಎಸ್​ಪಿಬಿ ಹಣ ನೀಡಿದ್ರು . ನನಗೆ ಬೈಪಾಸ್ ಸರ್ಜರಿ ಆದಾಗಲೂ ಅವರೇ ಹಣ ನೀಡಿ ನನ್ನನ್ನ ಬದುಕಿಸಿದ್ರು . ಅವರು ವಾಪಸ್ ಬರ್ತಾರೆ ಅನ್ನೋ ನಂಬಿಕೆ ಇದೆ. ವಾಪಸ್ ಬಂದು ಹಾಡು ಹಾಡದೇ ಇದ್ರೂ ನಮ್ಮ ಜೊತೆ ಇದ್ರೆ ಸಾಕು ಎಂದು ಡ್ರೈವರ್ ಷಣ್ಮುಗಂ ದುಃಖದಿಂದ ತಮ್ಮ ನೋವನ್ನು ಹೊರಹಾಕಿದ್ದಾರೆ.

Published On - 12:20 pm, Fri, 25 September 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!