AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾನ ಗಾರುಡಿಗ SPB ಆರೋಗ್ಯದಲ್ಲಿ ತುಸು ಚೇತರಿಕೆ, ಕೃತಕ ಉಸಿರಾಟದ ಪ್ರಮಾಣ ತಗ್ಗಿಸಿದ ವೈದ್ಯರು

ಚೆನ್ನೈ:ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಗಾನಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದ್ದು, ಇಂದು ಬೆಳಗ್ಗೆ SPB ಕಣ್ಣು ತೆರೆದಿದ್ದಾರೆ ಅನ್ನೋ ಮಾಹಿತಿ ಬಂದಿದೆ. ಕೊರೊನಾ ಸೋಂಕು ದೃಢಪಟ್ಟಮೇಲೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ SPBಯವರ ಆರೋಗ್ಯ ತೀರಾ ಹದಗೆಟ್ಟಿತ್ತು. ಹೀಗಾಗಿ, ಆಸ್ಪತ್ರೆ ವೈದ್ಯರು ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲ ಎಂದಿದ್ದರು. ಆದರೆ ಇಂದು SPB ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದ್ದು, ಐಸಿಯುನಲ್ಲಿ ಎಕ್ಮೋ ಮೆಷಿನ್ […]

ಗಾನ ಗಾರುಡಿಗ SPB ಆರೋಗ್ಯದಲ್ಲಿ ತುಸು ಚೇತರಿಕೆ, ಕೃತಕ ಉಸಿರಾಟದ ಪ್ರಮಾಣ ತಗ್ಗಿಸಿದ ವೈದ್ಯರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 16, 2020 | 11:58 AM

Share

ಚೆನ್ನೈ:ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಗಾನಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದ್ದು, ಇಂದು ಬೆಳಗ್ಗೆ SPB ಕಣ್ಣು ತೆರೆದಿದ್ದಾರೆ ಅನ್ನೋ ಮಾಹಿತಿ ಬಂದಿದೆ.

ಕೊರೊನಾ ಸೋಂಕು ದೃಢಪಟ್ಟಮೇಲೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ SPBಯವರ ಆರೋಗ್ಯ ತೀರಾ ಹದಗೆಟ್ಟಿತ್ತು. ಹೀಗಾಗಿ, ಆಸ್ಪತ್ರೆ ವೈದ್ಯರು ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲ ಎಂದಿದ್ದರು.

ಆದರೆ ಇಂದು SPB ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದ್ದು, ಐಸಿಯುನಲ್ಲಿ ಎಕ್ಮೋ ಮೆಷಿನ್ ಮುಖಾಂತರ ಚಿಕಿತ್ಸೆ ನೀಡಲಾಗುತ್ತಿದೆ. ಎಕ್ಮೋ ಮೆಷಿನ್​ನ್ನು ಅಳವಡಿಸಿದ 24 ಗಂಟೆಗಳ ತನಕ ಅವರ ದೇಹದ ವೈಟಲ್ಸ್ ಯಾವುದೇ ಏರಿಳಿತಗಳಿಲ್ಲದೆ ಸಮತೋಲನದಲ್ಲಿರುವುದರಿಂದ ಕೃತಕ ಉಸಿರಾಟದಿಂದ ನೀಡಲ್ಪಟ್ಟ ಆಮ್ಲಜನಕ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ.

ಈ ಮೂಲಕ ಅವರ ಶ್ವಾಸಕೋಶಗಳು ಕಾರ್ಯನಿರ್ವಹಿಸುತ್ತಿವೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಜೊತೆಗೆ ಹೆಚ್ಚಿನ ಚಿಕಿತ್ಸೆಗಾಗಿ ಗಾಯಕರನ್ನು ಆಸ್ಪತ್ರೆಯ ಮೂರನೇ ಮಹಡಿಯಿಂದ 6ನೇ ಮಹಡಿಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ವೈದ್ಯರ ದೃಷ್ಟಿಯಲ್ಲಿ ಚಲನೆಯ ಹೊರತಾಗಿಯೂ ಶ್ವಾಸಕೋಶಕ್ಕೆ ತೀವ್ರ ಹಾನಿಯಿಂದಾಗಿ ಗಾಯಕ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು