AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾನ ಗಾರುಡಿಗ SPB ಆರೋಗ್ಯದಲ್ಲಿ ತುಸು ಚೇತರಿಕೆ, ಕೃತಕ ಉಸಿರಾಟದ ಪ್ರಮಾಣ ತಗ್ಗಿಸಿದ ವೈದ್ಯರು

ಚೆನ್ನೈ:ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಗಾನಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದ್ದು, ಇಂದು ಬೆಳಗ್ಗೆ SPB ಕಣ್ಣು ತೆರೆದಿದ್ದಾರೆ ಅನ್ನೋ ಮಾಹಿತಿ ಬಂದಿದೆ. ಕೊರೊನಾ ಸೋಂಕು ದೃಢಪಟ್ಟಮೇಲೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ SPBಯವರ ಆರೋಗ್ಯ ತೀರಾ ಹದಗೆಟ್ಟಿತ್ತು. ಹೀಗಾಗಿ, ಆಸ್ಪತ್ರೆ ವೈದ್ಯರು ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲ ಎಂದಿದ್ದರು. ಆದರೆ ಇಂದು SPB ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದ್ದು, ಐಸಿಯುನಲ್ಲಿ ಎಕ್ಮೋ ಮೆಷಿನ್ […]

ಗಾನ ಗಾರುಡಿಗ SPB ಆರೋಗ್ಯದಲ್ಲಿ ತುಸು ಚೇತರಿಕೆ, ಕೃತಕ ಉಸಿರಾಟದ ಪ್ರಮಾಣ ತಗ್ಗಿಸಿದ ವೈದ್ಯರು
ಸಾಧು ಶ್ರೀನಾಥ್​
| Edited By: |

Updated on: Aug 16, 2020 | 11:58 AM

Share

ಚೆನ್ನೈ:ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಗಾನಗಾರುಡಿಗ SP ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದ್ದು, ಇಂದು ಬೆಳಗ್ಗೆ SPB ಕಣ್ಣು ತೆರೆದಿದ್ದಾರೆ ಅನ್ನೋ ಮಾಹಿತಿ ಬಂದಿದೆ.

ಕೊರೊನಾ ಸೋಂಕು ದೃಢಪಟ್ಟಮೇಲೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ SPBಯವರ ಆರೋಗ್ಯ ತೀರಾ ಹದಗೆಟ್ಟಿತ್ತು. ಹೀಗಾಗಿ, ಆಸ್ಪತ್ರೆ ವೈದ್ಯರು ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲ ಎಂದಿದ್ದರು.

ಆದರೆ ಇಂದು SPB ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದ್ದು, ಐಸಿಯುನಲ್ಲಿ ಎಕ್ಮೋ ಮೆಷಿನ್ ಮುಖಾಂತರ ಚಿಕಿತ್ಸೆ ನೀಡಲಾಗುತ್ತಿದೆ. ಎಕ್ಮೋ ಮೆಷಿನ್​ನ್ನು ಅಳವಡಿಸಿದ 24 ಗಂಟೆಗಳ ತನಕ ಅವರ ದೇಹದ ವೈಟಲ್ಸ್ ಯಾವುದೇ ಏರಿಳಿತಗಳಿಲ್ಲದೆ ಸಮತೋಲನದಲ್ಲಿರುವುದರಿಂದ ಕೃತಕ ಉಸಿರಾಟದಿಂದ ನೀಡಲ್ಪಟ್ಟ ಆಮ್ಲಜನಕ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ.

ಈ ಮೂಲಕ ಅವರ ಶ್ವಾಸಕೋಶಗಳು ಕಾರ್ಯನಿರ್ವಹಿಸುತ್ತಿವೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಜೊತೆಗೆ ಹೆಚ್ಚಿನ ಚಿಕಿತ್ಸೆಗಾಗಿ ಗಾಯಕರನ್ನು ಆಸ್ಪತ್ರೆಯ ಮೂರನೇ ಮಹಡಿಯಿಂದ 6ನೇ ಮಹಡಿಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ವೈದ್ಯರ ದೃಷ್ಟಿಯಲ್ಲಿ ಚಲನೆಯ ಹೊರತಾಗಿಯೂ ಶ್ವಾಸಕೋಶಕ್ಕೆ ತೀವ್ರ ಹಾನಿಯಿಂದಾಗಿ ಗಾಯಕ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ