AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರಕ್ಕೆ ‘ಹಿಂದೂ ಉಗ್ರ ಸಂಘಟನೆ’ ಎಂಬ ಹಣೆಪಟ್ಟಿ ಕಟ್ಟಿ ವಿವಾದ ಸೃಷ್ಟಿಸಿದ ಎಸ್‌ಪಿ ಶಾಸಕ

ಬಿಜೆಪಿ ಸರ್ಕಾರವನ್ನು ಹಿಂದೂ ಭಯೋತ್ಪಾದಕ ಸಂಘಟನೆ ಎಂದು ಆರೋಪಿಸಿದ ಎಸ್‌ಪಿ ಶಾಸಕ ಸುರೇಶ್ ಯಾದವ್ ಬಿಜೆಪಿ ದೇಶವನ್ನು ನಾಶ ಮಾಡುವತ್ತ ಗಮನಹರಿಸಿದೆ. ಇಂತಹ ಕ್ರಮಗಳನ್ನು ಸಮಾಜವಾದಿ ಪಕ್ಷ (ಎಸ್​ಪಿ) ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಎಸ್‌ಪಿ ಯಾವಾಗಲೂ ಬಡವರು ಮತ್ತು ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ನಿಂತಿದೆ, ಅವರಿಗಾಗಿ ಹೋರಾಟವನ್ನು ಮುಂದುವರಿಸುತ್ತದೆ ಎಂದು ಸುರೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ‘ಹಿಂದೂ ಉಗ್ರ ಸಂಘಟನೆ’ ಎಂಬ ಹಣೆಪಟ್ಟಿ ಕಟ್ಟಿ ವಿವಾದ ಸೃಷ್ಟಿಸಿದ ಎಸ್‌ಪಿ ಶಾಸಕ
Mla Suresh Yadav
ಸುಷ್ಮಾ ಚಕ್ರೆ
|

Updated on: Dec 22, 2024 | 1:06 PM

Share

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಸದರ್ ಶಾಸಕ ಸುರೇಶ್ ಯಾದವ್ ಬಾರಾಬಂಕಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರವನ್ನು “ಹಿಂದೂ ಭಯೋತ್ಪಾದಕ ಸಂಘಟನೆ” ಎಂದು ಹೇಳುವ ಮಾಡುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಬಾಬಾ ಸಾಹೇಬ್ ಡಾ. ಬಿ.ಆರ್​. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಸರ್ಕಾರವು ಸರ್ಕಾರವಲ್ಲ, ಅದೊಂದು ಹಿಂದೂ ಭಯೋತ್ಪಾದಕ ಸಂಘಟನೆ” ಎಂದು ಹೇಳಿದ ಸುರೇಶ್ ಯಾದವ್, ಬಿಜೆಪಿ ದೇಶವನ್ನು ನಾಶ ಮಾಡಲು ಹೊರಟಿದೆ. ಸಮಾಜವಾದಿ ಪಕ್ಷ ಇದನ್ನು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಸಮಾಜವಾದಿ ಪಕ್ಷವು ಬಡವರು ಮತ್ತು ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡುತ್ತಿದೆ ಮತ್ತು ಅದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಸರ್ಕಾರವು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಾಳು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ವಿವಾದ; ಅಮಿತ್ ಶಾ ವಿರುದ್ಧ ಸಂಸತ್​ನಲ್ಲಿ ವಿಶೇಷ ಹಕ್ಕು ನೋಟಿಸ್ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಇದಕ್ಕೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಪಕ್ಷದ ನಾಯಕರು ಯಾದವ್ ಅವರ ಹೇಳಿಕೆಯನ್ನು ಬೇಜವಾಬ್ದಾರಿ ಎಂದು ಖಂಡಿಸಿದ್ದಾರೆ. ಇದು ಸಮಾಜವಾದಿ ಪಕ್ಷದ ಹತಾಶೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಸಮಾಜವಾದಿ ಪಕ್ಷದ ಜನಪ್ರತಿನಿಧಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಬಗ್ಗೆ ನೀಡಿರುವ ಹೇಳಿಕೆಗೆ ಸಮಾಜವಾದಿ ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತಿಯಾಗಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ಎಸ್ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ