ಸಂಸತ್ತಿನಿಂದ ರಾಜದಂಡ ತೆರವುಗೊಳಿಸುವಂತೆ ಎಸ್​ಪಿ ಸಂಸದ ಬರೆದ ಪತ್ರಕ್ಕೆ ತಿರುಗೇಟು ಕೊಟ್ಟ ಬಿಜೆಪಿ

ರಾಜದಂಡವನ್ನು ಸಂಸತ್ತಿನಿಂದ ತೆರವುಗೊಳಿಸುವಂತೆ ಕೋರಿ ಸಮಾಜವಾದಿ ಪಕ್ಷದ ಸಂಸದ ಚೌಧರಿ ಬರೆದಿದ್ದ ಪತ್ರಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ.

ಸಂಸತ್ತಿನಿಂದ ರಾಜದಂಡ ತೆರವುಗೊಳಿಸುವಂತೆ ಎಸ್​ಪಿ ಸಂಸದ ಬರೆದ ಪತ್ರಕ್ಕೆ ತಿರುಗೇಟು ಕೊಟ್ಟ ಬಿಜೆಪಿ
ರಾಜದಂಡ
Image Credit source: Firstpost

Updated on: Jun 27, 2024 | 12:40 PM

ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದರ ಆರ್​ಕೆ ಚೌಧರಿ ಅವರು ಸಂಸತ್ತಿನಿಂದ ರಾಜದಂಡವನ್ನು ತೆರವುಗೊಳಿಸುವಂತೆ ಬರೆದಿದ್ದ ಪತ್ರಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಇದು ರಾಜಪ್ರಭುತ್ವದ ಸಂಕೇತವಾಗಿದ್ದರೆ ಮೊದಲ ಪ್ರಧಾನಿ ನೆಹರು ಅವರು ಏಕೆ ಇದನ್ನು ಒಪ್ಪಿಕೊಂಡರು ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಚೌಧರಿ ಅವರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜದಂಡದ ಮುಂದೆ ತಲೆಬಾಗಲಿಲ್ಲ ಎಂದು ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಕಳೆದ ವರ್ಷ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ ಲೋಕಸಭೆಯಲ್ಲಿ ಸ್ಥಾಪಿಸಲಾದ ರಾಜದಂಡ, ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರದ ಹಸ್ತಾಂತರವನ್ನು ಸೂಚಿಸುತ್ತದೆ ಎಂದು ಚೌಧರಿ ಹೇಳಿದ್ದರು.

ಮತ್ತಷ್ಟು ಓದಿ: ಐತಿಹಾಸಿಕ ನಾಡು ಬಾಗಲಕೋಟೆ ಜಿಲ್ಲೆಗೆ ವ್ಯಾಪಿಸಿದ ಸೆಂಗೋಲ್​ ನಂಟು: ವಿರುಪಾಕ್ಷ ದೇವಾಲಯದಲ್ಲಿ ರಾಜದಂಡ ಕಲಾಕೃತಿ

ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್‌ಗೆ ಬರೆದ ಪತ್ರದಲ್ಲಿ, ಆರ್‌ಕೆ ಚೌಧರಿ ಸೆಂಗೋಲ್ ಅನ್ನು ಪ್ರಜಾಪ್ರಭುತ್ವ ಭಾರತದಲ್ಲಿ ರಾಜಪ್ರಭುತ್ವದ ಅನಾಕ್ರೊನಿಸ್ಟಿಕ್ ಸಂಕೇತ ಎಂದು ಕರೆದಿದ್ದಾರೆ.
ರಾಜಪ್ರಭುತ್ವವನ್ನು ಕೊನೆಗೊಳಿಸಿದ ನಂತರ ದೇಶವು ದ್ವತಂತ್ರವಾಯಿತು, ಹಾಗಾಗಿ ರಾಜದಂಡದ ಅಗತ್ಯವಿಲ್ಲ, ಸಂವಿಧಾನವನ್ನು ಉಳಿಸಲು ರಾಜದಂಡವನ್ನು ತೆರವುಗೊಳಿಸಬೇಕು, ಅಷ್ಟೇ ಅಲ್ಲ ಆ ಜಾಗದಲ್ಲಿ ಸಂವಿಧಾನದ ದೈತ್ಯ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ವಿನಂತಿಸುತ್ತೇನೆ ಎಂದಿದ್ದರು.

ಆಗಸ್ಟ್ 1947 ರಲ್ಲಿ ಅಧಿಕಾರದ ಹಸ್ತಾಂತರವನ್ನು ಸಂಕೇತಿಸಲು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ನೀಡಲಾದ ವಿಧ್ಯುಕ್ತ ರಾಜದಂಡವನ್ನು (ಸೆಂಗೊಲ್) ಅಲಹಾಬಾದ್ ಮ್ಯೂಸಿಯಂನ ನೆಹರು ಗ್ಯಾಲರಿಯಲ್ಲಿ ಇರಿಸಲಾಗಿತ್ತು ಮತ್ತು ಹೊಸ ಸಂಸತ್ ಭವನದಲ್ಲಿ ಸ್ಥಾಪಿಸಲು ದೆಹಲಿಗೆ ತರಲಾಯಿತು.
ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us