AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Isro Chief: ಚಂದ್ರಯಾನ್ 2 ರಾಕೆಟ್ ಲಾಂಚರ್ ಪ್ರಾಜೆಕ್ಟ್ ನಿರ್ವಹಿಸಿದ್ದ ಎಸ್ ಸೋಮನಾಥ್ ಇಸ್ರೊದ ಹೊಸ ಮುಖ್ಯಸ್ಥ

ಪ್ರಸ್ತುತ ಇಸ್ರೋ ಅಧ್ಯಕ್ಷರಾಗಿರುವ ಕೆ.ಶಿವನ್ ಅವರ ಸ್ಥಾನಕ್ಕೆ ಸೋಮನಾಥ್ ಬರಲಿದ್ದಾರೆ. ಅವರು ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ ಜನವರಿ 22, 2018ರಿಂದ ಕಾರ್ಯನಿರ್ವಹಿಸುತ್ತಿದ್ದರು.

Isro Chief: ಚಂದ್ರಯಾನ್ 2 ರಾಕೆಟ್ ಲಾಂಚರ್ ಪ್ರಾಜೆಕ್ಟ್ ನಿರ್ವಹಿಸಿದ್ದ ಎಸ್ ಸೋಮನಾಥ್ ಇಸ್ರೊದ ಹೊಸ ಮುಖ್ಯಸ್ಥ
ಇಸ್ರೋ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಾಹ್ಯಾಕಾಶ ವಿಜ್ಞಾನಿ ಎಸ್.ಸೋಮನಾಥ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 12, 2022 | 9:33 PM

Share

ದೆಹಲಿ: ಹಿರಿಯ ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ಅವರನ್ನು ಭಾರತ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (Indian Space & Research Organisation – Isro) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಜಿಎಸ್​ಎಲ್​ವಿ ಮಾರ್ಕ್ 3 (GSLV Mk-III) ಲಾಂಚರ್ ರೂಪಿಸುವಲ್ಲಿ ಸೋಮನಾಥ್ ಮುಖ್ಯಪಾತ್ರ ವಹಿಸಿದ್ದರು. ತಮ್ಮ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಪಿಎಸ್​ಎಲ್​ವಿ (Polar Satellite Launch Vehicle – PSLV) ಉಡಾವಣಾ ವಾಹನ ರೂಪಿಸುವ ತಂಡದಲ್ಲಿ ಟೀಂ ಲೀಡರ್ ಆಗಿ ಕಾರ್ಯನಿರ್ವಹಿಸಿದ್ದರು.

ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಮೂರು ವರ್ಷ ಕೆಲಸ ಮಾಡಿದ್ದರು. ಬಾಹ್ಯಾಕಾಶ ಆಯೋಗದಲ್ಲಿ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿದ್ದರು. ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ ಜನವರಿ 22, 2018ರಿಂದ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಇಸ್ರೋ ಅಧ್ಯಕ್ಷರಾಗಿರುವ ಕೆ.ಶಿವನ್ ಅವರ ಸ್ಥಾನಕ್ಕೆ ಸೋಮನಾಥ್ ಬರಲಿದ್ದಾರೆ.

ಹೈ ಥ್ರಸ್ಟ್ ಸೆಮಿ ಕ್ರಯೊಜೆನಿಕ್ ಎಂಜಿನ್ ಅಭಿವೃದ್ಧಿ ಚಟುವಟಿಕೆ ನಿರ್ವಹಿಸಿದ ತಂಡದಲ್ಲಿ ಸೋಮನಾಥ್ ಶ್ರಮಿಸಿದ್ದರು. ಈ ಯಂತ್ರಗಳನ್ನು ಸುರಕ್ಷಿತ ವಾತಾವರಣದಲ್ಲಿ ಪರಿಶೀಲಿಸಲು ಬೇಕಿರುವ ವ್ಯವಸ್ಥೆಯನ್ನೂ ಅವರು ರೂಪಿಸಿದ್ದರು. ಇಸ್ರೋದ ಮಹತ್ವಾಕಾಂಕ್ಷಿ ಪ್ರಯತ್ನವಾಗಿದ್ದ ಚಂದ್ರಾಯಣ-2 ಬಾಹ್ಯಾಕಾಶ ನೌಕೆಯ ಲ್ಯಾಂಡರ್​ಗೆ ಬಳಸಿದ್ದ ಎಂಜಿನ್​ಗಳ ಅಭಿವೃದ್ಧಿ ಮತ್ತು ಜಿಸ್ಯಾಟ್-9ರಲ್ಲಿ ಬಳಕೆಯಾದ ಎಲೆಕ್ಟ್ರಿಕ್ ಪ್ರೊಪಲ್ಷನ್ ವ್ಯವಸ್ಥೆಯನ್ನು ರೂಪಿಸಿದ ಶ್ರೇಯವೂ ಸೋಮನಾಥ್ ಅವರಿಗೆ ಸೇರುತ್ತದೆ.

ಉಡಾವಣಾ ವಾಹನಗಳ ಆಕೃತಿ ರೂಪಿಸುವುದು, ಚಲನೆಯ ಲೆಕ್ಕಾಚಾರಗಳು, ಯಾಂತ್ರಿಕತೆ ಮತ್ತು ಉಡಾವಣಾ ವಾಹನಗಳ ಸಂಯೋಜನೆಯಲ್ಲಿ ಸೋಮನಾಥ್ ಅವರ ಪರಿಶ್ರಮ ಸಾಕಷ್ಟಿದೆ. ಪಿಎಸ್​ಎಲ್​ವಿ ಉಪಗ್ರಹ ಉಡಾವಣಾ ವಾಹನದ ವಿನ್ಯಾಸಕ್ಕೆ ಅಗತ್ಯವಿದ್ದ ಹಲವು ಮೆಕ್ಯಾನಿಕಲ್ ಸಂಯೋಜನೆಗಳನ್ನು ಸೋಮನಾಥ್ ಅಚ್ಚುಕಟ್ಟಾಗಿ ರೂಪಿಸಿದರು. ಈ ಬೆಳವಣಿಗೆಯ ನಂತರ ಪಿಎಸ್​ಎಲ್​ವಿ ವಿಶ್ವದ ನೆಚ್ಚಿನ ಉಪಗ್ರಹ ಉಡಾವಣಾ ವಾಹನ ಎನಿಸಿತು.

ಕೇರಳದ ಕೊಲ್ಲಂನಲ್ಲಿರುವ ಟಿಕೆಂಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿರುವ ಸೋಮನಾಥ್, ಬೆಂಗಳೂರಿನ ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್ ಸೈನ್ಸ್​ನಲ್ಲಿ ಏರೊಸ್ಪೇಸ್ ಎಂಜಿನಿಯರಿಂಗ್​ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ 1985ರಲ್ಲಿ ಸೇರಿದರು.

ಇದನ್ನೂ ಓದಿ: ನೋಕ್ಕು ಕೂಲಿಗಾಗಿ ಇಸ್ರೊ ಟ್ರಕ್ ತಡೆದರು: ಕೇರಳಕ್ಕೆ ಕಳಂಕ ತರುತ್ತಿರುವ ನೊಕ್ಕು ಕೂಲಿ ಬಗ್ಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆ ಇದನ್ನೂ ಓದಿ: ಇಸ್ರೋ ಸಾಧಕಿ ರೂಪಾಗೆ ಟಿವಿ9 ಪ್ರಶಸ್ತಿ ಪ್ರಧಾನ; ವಿಡಿಯೋ ನೋಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ