AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಲೆಟ್​ ಪ್ರೂಫ್​ ಕಾರು: ಭಾರತ-ಪಾಕ್​ ಉದ್ವಿಗ್ನತೆ ನಡುವೆ ವಿದೇಶಾಂಗ ಸಚಿವ ಜೈಶಂಕರ್​ಗೆ ಭದ್ರತೆ ಹೆಚ್ಚಳ

ವಿದೇಶಾಂಗ ಸಚಿವ ಎಸ್​ಜೈಶಂಕರ್​ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಏತನ್ಮಧ್ಯೆ, ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈಗಾಗಲೇ ಇರುವ ಝಡ್ ಭದ್ರತೆ ಜತೆಗೆ ಬುಲೆಟ್​ ಪ್ರೂಫ್​ ಕಾರು ಕೂಡ ಸರ್ಕಾರ ಒದಗಿಸಲಿದೆ. ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಎಸ್ ಜೈಶಂಕರ್ ಅವರಿಗೆ ಈಗಾಗಲೇ ಗೃಹ ಸಚಿವಾಲಯವು Z ವರ್ಗದ ಭದ್ರತೆಯನ್ನು ಒದಗಿಸಿದೆ.

ಬುಲೆಟ್​ ಪ್ರೂಫ್​ ಕಾರು: ಭಾರತ-ಪಾಕ್​ ಉದ್ವಿಗ್ನತೆ ನಡುವೆ ವಿದೇಶಾಂಗ ಸಚಿವ ಜೈಶಂಕರ್​ಗೆ ಭದ್ರತೆ ಹೆಚ್ಚಳ
ಜೈಶಂಕರ್ Image Credit source: MSN
ನಯನಾ ರಾಜೀವ್
|

Updated on: May 14, 2025 | 9:05 AM

Share

ನವದೆಹಲಿ, ಮೇ 14: ಭಾರತ ಮತ್ತು ಪಾಕಿಸ್ತಾನ(Pakistan)  ನಡುವೆ ಉದ್ವಿಗ್ನತೆ ಮುಂದುವರೆದಿದೆ. ಏತನ್ಮಧ್ಯೆ, ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈಗಾಗಲೇ ಇರುವ ಝಡ್ ಭದ್ರತೆ ಜತೆಗೆ ಬುಲೆಟ್​ ಪ್ರೂಫ್​ ಕಾರು ಕೂಡ ಸರ್ಕಾರ ಒದಗಿಸಲಿದೆ. ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಎಸ್ ಜೈಶಂಕರ್ ಅವರಿಗೆ ಈಗಾಗಲೇ ಗೃಹ ಸಚಿವಾಲಯವು Z ವರ್ಗದ ಭದ್ರತೆಯನ್ನು ಒದಗಿಸಿದೆ.

ವಿದೇಶಾಂಗ ಸಚಿವರಿಗೆ ಸಿಆರ್‌ಪಿಎಫ್ ಕಮಾಂಡೋಗಳು ಭದ್ರತೆ ಒದಗಿಸುತ್ತಾರೆ. ಇದರಲ್ಲಿ, 33 ಕಮಾಂಡೋಗಳು ಅವರ ಸುತ್ತಮುತ್ತಲಿರುತ್ತಾರೆ. ಅಕ್ಟೋಬರ್ 2023 ರಲ್ಲಿ ಅವರ ಭದ್ರತೆಯನ್ನು Y-ವರ್ಗದಿಂದ Z-ವರ್ಗಕ್ಕೆ ಭದ್ರತೆ ಹೆಚ್ಚಿಸಲಾಗಿತ್ತು.

ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಿರುವ ಸಮಯದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಷ್ಟೇ ಅಲ್ಲ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಿಒಕೆ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು .

ಇದನ್ನೂ ಓದಿ
Image
ಭಾರತ ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ: ಜೈಶಂಕರ್
Image
ಭಾರತ-ಪಾಕ್​ ಉದ್ವಿಗ್ನತೆ ಶಮನಕ್ಕೆ ಜೈಶಂಕರ್ ಜತೆ ಮಾತುಕತೆ
Image
ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಭೇಟಿಯಾದ ನಟ ಜಾನ್ ಅಬ್ರಹಾಂ
Image
ಚೀನಾದ ಜತೆ ಭಾರತದ ಸಂಬಂಧ ಹೇಗಿದೆ? ವಿವರಿಸಿದ ಸಚಿವ ಎಸ್ ಜೈಶಂಕರ್

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ವಿದೇಶಾಂಗ ಸಚಿವರ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿತು.

ಮತ್ತಷ್ಟು ಓದಿ: ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲ ನಿಲ್ಲುವವರೆಗೆ ಸಿಂಧೂ ಜಲ ಒಪ್ಪಂದ ಸ್ಥಗಿತ

Z- ವರ್ಗದ ಭದ್ರತೆ ಎಂದರೇನು? ವಾಸ್ತವವಾಗಿ, Z- ವರ್ಗದ ಭದ್ರತೆಯು ಭಾರತದಲ್ಲಿ ಮೂರನೇ ಅತ್ಯುನ್ನತ ಭದ್ರತೆಯಾಗಿದೆ. ಅದರಲ್ಲಿ 22 ಸೈನಿಕರಿದ್ದಾರೆ. ಇವರಲ್ಲಿ 4 ರಿಂದ 6 ಎನ್‌ಎಸ್‌ಜಿ ಕಮಾಂಡೋಗಳು ಮತ್ತು ಸ್ಥಳೀಯ ಪೊಲೀಸರು ಸೇರಿದ್ದಾರೆ. ಇದು ಬುಲೆಟ್​ ಪ್ರೂಫ್​ ಕಾರನ್ನು ಸಹ ಹೊಂದಿದೆ. ಹೆಚ್ಚುವರಿಯಾಗಿ, ಬೆಂಗಾವಲು ಪಡೆಗಳನ್ನು ಸಹ ಒದಗಿಸಲಾಗುತ್ತದೆ. ಈ ಭದ್ರತೆಯನ್ನು ಹೆಚ್ಚಿನ ಭದ್ರತೆಯ ಅಗತ್ಯವಿರುವ ದೊಡ್ಡ ನಾಯಕರು ಮತ್ತು ಸೆಲೆಬ್ರಿಟಿಗಳಿಗೆ ನೀಡಲಾಗುತ್ತದೆ. ಅಕ್ಟೋಬರ್ 2023 ರಲ್ಲಿ, ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಈ ಹಿಂದೆ ಅವರಿಗೆ ವೈ-ಕೆಟಗರಿ ಭದ್ರತೆಯನ್ನು ಒದಗಿಸಲಾಗಿತ್ತು.

ಐಬಿ ವರದಿಯ ನಂತರ ಭದ್ರತೆ ಹೆಚ್ಚಿಸಲಾಗಿದೆ

ವಿದೇಶಾಂಗ ಸಚಿವರಿಗೆ ಇರುವ ಬೆದರಿಕೆಯನ್ನು ನಿರ್ಣಯಿಸಿದ ನಂತರ ಗುಪ್ತಚರ ಬ್ಯೂರೋ (ಐಬಿ) ಭದ್ರತೆಯನ್ನು ಹೆಚ್ಚಿಸುವಂತೆ ಶಿಫಾರಸು ಮಾಡಿತ್ತು. ಆ ಸಮಯದಲ್ಲಿ ಕೇಂದ್ರ ಸಚಿವ ಜೈಶಂಕರ್ ಅವರ ಮನೆಯಲ್ಲಿ ಭದ್ರತೆಗಾಗಿ 12 ಸಶಸ್ತ್ರ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆರು ಮಂದಿ ವೈಯಕ್ತಿಕ ಭದ್ರತಾ ಅಧಿಕಾರಿಗಳೂ (ಪಿಎಸ್‌ಒ) ಇದ್ದರು. ಮೂರು ಪಾಳಿಗಳಲ್ಲಿ 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ನಿಯೋಜಿಸಲಾಗಿತ್ತು. ಮೂವರು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ