AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶ್ರಾತ್​ ಜಹಾನ್​ ಎನ್​ಕೌಂಟರ್​ ಕೇಸ್: ಮೂವರು ಪೊಲೀಸ್ ಅಧಿಕಾರಿಗಳನ್ನು ಬಿಡುಗಡೆ ಮಾಡಿದ ಸಿಬಿಐ ವಿಶೇಷ ನ್ಯಾಯಾಲಯ

2004ರಲ್ಲಿ ಪೊಲೀಸ್​ ಎನ್​ಕೌಂಟರ್​ಗೆ ಬಲಿಯಾದ ಇಶ್ರಾತ್ ಜಹಾನ್ ಕೇಸ್​​ನಲ್ಲಿ ಆರೋಪಿಗಳೆನಿಸಿದ್ದ ಮೂವರು ಪೊಲೀಸ್​ ಅಧಿಕಾರಿಗಳಾದ ಜಿ.ಎಲ್​.ಸಿಂಘಾಲ್​, ತರುಣ್​ ಬಾರೋತ್​ ಮತ್ತು ಅನಾಜು ಚೌಧರಿ ಅವರನ್ನು ಇಂದು ಅಹ್ಮದಾಬಾದ್​ನ ಸಿಬಿಐ ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ. ಅಂದು ನಡೆದಿದ್ದು ನಕಲಿ ಎನ್​ಕೌಂಟರ್​ ಎಂದು ಆರೋಪ ಬಂದು, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು. ಮಾರ್ಚ್​ 30ರಂದು ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದ ವಿಮೋಚನಾ ಪತ್ರಕ್ಕೆ ಇಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಆರ್​.ರಾವಲ್ ಅನುಮೋದಿಸಿದರು. 2004ರ ಜೂನ್​ 15ರಂದು ಮುಂಬೈನ ಮುಂಬ್ರಾ ನಿವಾಸಿ […]

ಇಶ್ರಾತ್​ ಜಹಾನ್​ ಎನ್​ಕೌಂಟರ್​ ಕೇಸ್: ಮೂವರು ಪೊಲೀಸ್ ಅಧಿಕಾರಿಗಳನ್ನು ಬಿಡುಗಡೆ ಮಾಡಿದ ಸಿಬಿಐ ವಿಶೇಷ ನ್ಯಾಯಾಲಯ
ಇಶ್ರಾತ್​ ಜಹಾನ್​
Lakshmi Hegde
|

Updated on: Mar 31, 2021 | 5:19 PM

Share

2004ರಲ್ಲಿ ಪೊಲೀಸ್​ ಎನ್​ಕೌಂಟರ್​ಗೆ ಬಲಿಯಾದ ಇಶ್ರಾತ್ ಜಹಾನ್ ಕೇಸ್​​ನಲ್ಲಿ ಆರೋಪಿಗಳೆನಿಸಿದ್ದ ಮೂವರು ಪೊಲೀಸ್​ ಅಧಿಕಾರಿಗಳಾದ ಜಿ.ಎಲ್​.ಸಿಂಘಾಲ್​, ತರುಣ್​ ಬಾರೋತ್​ ಮತ್ತು ಅನಾಜು ಚೌಧರಿ ಅವರನ್ನು ಇಂದು ಅಹ್ಮದಾಬಾದ್​ನ ಸಿಬಿಐ ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ. ಅಂದು ನಡೆದಿದ್ದು ನಕಲಿ ಎನ್​ಕೌಂಟರ್​ ಎಂದು ಆರೋಪ ಬಂದು, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು. ಮಾರ್ಚ್​ 30ರಂದು ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದ ವಿಮೋಚನಾ ಪತ್ರಕ್ಕೆ ಇಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಆರ್​.ರಾವಲ್ ಅನುಮೋದಿಸಿದರು.

2004ರ ಜೂನ್​ 15ರಂದು ಮುಂಬೈನ ಮುಂಬ್ರಾ ನಿವಾಸಿ ಇಶ್ರಾತ್​ ಜಹಾನ್​ (19)ಳನ್ನು ಗುಜರಾತ್​ ಪೊಲೀಸರು ಹತ್ಯೆ ಮಾಡಿದ್ದರು. ಇವಳಷ್ಟೇ ಅಲ್ಲದೆ, ಜಾವೇದ್​ ಶೇಖ್​ ಅಲಿಯಾಸ್ ಪ್ರಾಣೇಶ್​ ಪಿಲ್ಲೈ, ಅಮ್ಜಾದಲಿ ಅಕ್ಬರಲಿ ರಾಣಾ, ಝೀಶಾನ್​ ಜೋಹಾರ್​ ಕೂಡ ಅಂದು ಇಶ್ರಾತ್ ಜತೆ ಪೊಲೀಸ್​ ಎನ್​ಕೌಂಟರ್​ಗೆ ಬಲಿಯಾಗಿದ್ದರು. ಈ ನಾಲ್ವರೂ ಉಗ್ರರಾಗಿದ್ದು, ಮುಖ್ಯಮಂತ್ರಿ ನರೇಂದ್ರ ಮೋದಿಯವರ (ಆಗಿನ್ನೂ ನರೇಂದ್ರ ಮೋದಿಯವರು ಗುಜರಾತ್​ನ ಮುಖ್ಯಮಂತ್ರಿ ಆಗಿದ್ದರು) ಹತ್ಯೆಗೆ ಯೋಜನೆ ರೂಪಿಸಿದ್ದರು. ಹಾಗಾಗಿ ಎನ್​ಕೌಂಟರ್ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

ಆದರೆ ಈ ಪ್ರಕರಣ ಪೊಲೀಸರ ಪಾಲಿಗೆ ಸಂಕಷ್ಟವನ್ನೇ ತಂದೊಡ್ಡಿತು. ಹೈಕೋರ್ಟ್​ ರಚನೆ ಮಾಡಿದ್ದ ವಿಶೇಷ ತನಿಖಾ ತಂಡ ಇದೊಂದು ನಕಲಿ ಎನ್​ಕೌಂಟರ್​ ಎಂದು ವರದಿ ಸಲ್ಲಿಸಿದ ಪರಿಣಾಮ ಸಿಬಿಐ ತನಿಖೆ ಕೈಗೆತ್ತಿಕೊಂಡು ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ಅವರಲ್ಲಿ ಸಿಂಘಾಲ್​, ಬಾರೋಟ್​, ಚೌಧರಿ ಮತ್ತು ಜೆ.ಜಿ. ಪಾರ್ಮರ್​ ವಿಚಾರಣೆ ಸಿಬಿಐ ಕೋರ್ಟ್​ನಲ್ಲಿ ನಡೆಯುತ್ತಿತ್ತು. ಜೆ.ಜಿ.ಪಾರ್ಮರ್ ಈಗಾಗಲೇ ಮೃತಪಟ್ಟಿದ್ದು, ಉಳಿದ ಮೂವರನ್ನು ಕೋರ್ಟ್ ಬಿಡುಗಡೆ ಮಾಡಿದೆ. ಇನ್ನು ಈ ಮೂವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸಲು ಗುಜರಾತ್ ಸರ್ಕಾರ ನಿರಾಕರಿಸಿದೆ ಎಂದು ಸಿಬಿಐ ಮಾರ್ಚ್​ 20ರಂದು ಕೋರ್ಟ್​ಗೆ ಹೇಳಿತ್ತು.

ಇದನ್ನೂ ಓದಿ: Tamil Nadu Assembly Elections 2021: ಬಿಜೆಪಿ ಚುನಾವಣಾ ಪ್ರೊಮೊದಲ್ಲಿ ಕಾರ್ತಿ ಚಿದಂಬರಂ ಪತ್ನಿಯ ಭರತನಾಟ್ಯದ ವಿಡಿಯೊ

ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದ ಹಾವೇರಿ ಯುವಕ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು