AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶ್ರಾತ್​ ಜಹಾನ್​ ಎನ್​ಕೌಂಟರ್​ ಕೇಸ್: ಮೂವರು ಪೊಲೀಸ್ ಅಧಿಕಾರಿಗಳನ್ನು ಬಿಡುಗಡೆ ಮಾಡಿದ ಸಿಬಿಐ ವಿಶೇಷ ನ್ಯಾಯಾಲಯ

2004ರಲ್ಲಿ ಪೊಲೀಸ್​ ಎನ್​ಕೌಂಟರ್​ಗೆ ಬಲಿಯಾದ ಇಶ್ರಾತ್ ಜಹಾನ್ ಕೇಸ್​​ನಲ್ಲಿ ಆರೋಪಿಗಳೆನಿಸಿದ್ದ ಮೂವರು ಪೊಲೀಸ್​ ಅಧಿಕಾರಿಗಳಾದ ಜಿ.ಎಲ್​.ಸಿಂಘಾಲ್​, ತರುಣ್​ ಬಾರೋತ್​ ಮತ್ತು ಅನಾಜು ಚೌಧರಿ ಅವರನ್ನು ಇಂದು ಅಹ್ಮದಾಬಾದ್​ನ ಸಿಬಿಐ ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ. ಅಂದು ನಡೆದಿದ್ದು ನಕಲಿ ಎನ್​ಕೌಂಟರ್​ ಎಂದು ಆರೋಪ ಬಂದು, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು. ಮಾರ್ಚ್​ 30ರಂದು ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದ ವಿಮೋಚನಾ ಪತ್ರಕ್ಕೆ ಇಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಆರ್​.ರಾವಲ್ ಅನುಮೋದಿಸಿದರು. 2004ರ ಜೂನ್​ 15ರಂದು ಮುಂಬೈನ ಮುಂಬ್ರಾ ನಿವಾಸಿ […]

ಇಶ್ರಾತ್​ ಜಹಾನ್​ ಎನ್​ಕೌಂಟರ್​ ಕೇಸ್: ಮೂವರು ಪೊಲೀಸ್ ಅಧಿಕಾರಿಗಳನ್ನು ಬಿಡುಗಡೆ ಮಾಡಿದ ಸಿಬಿಐ ವಿಶೇಷ ನ್ಯಾಯಾಲಯ
ಇಶ್ರಾತ್​ ಜಹಾನ್​
Lakshmi Hegde
|

Updated on: Mar 31, 2021 | 5:19 PM

Share

2004ರಲ್ಲಿ ಪೊಲೀಸ್​ ಎನ್​ಕೌಂಟರ್​ಗೆ ಬಲಿಯಾದ ಇಶ್ರಾತ್ ಜಹಾನ್ ಕೇಸ್​​ನಲ್ಲಿ ಆರೋಪಿಗಳೆನಿಸಿದ್ದ ಮೂವರು ಪೊಲೀಸ್​ ಅಧಿಕಾರಿಗಳಾದ ಜಿ.ಎಲ್​.ಸಿಂಘಾಲ್​, ತರುಣ್​ ಬಾರೋತ್​ ಮತ್ತು ಅನಾಜು ಚೌಧರಿ ಅವರನ್ನು ಇಂದು ಅಹ್ಮದಾಬಾದ್​ನ ಸಿಬಿಐ ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ. ಅಂದು ನಡೆದಿದ್ದು ನಕಲಿ ಎನ್​ಕೌಂಟರ್​ ಎಂದು ಆರೋಪ ಬಂದು, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು. ಮಾರ್ಚ್​ 30ರಂದು ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದ ವಿಮೋಚನಾ ಪತ್ರಕ್ಕೆ ಇಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಆರ್​.ರಾವಲ್ ಅನುಮೋದಿಸಿದರು.

2004ರ ಜೂನ್​ 15ರಂದು ಮುಂಬೈನ ಮುಂಬ್ರಾ ನಿವಾಸಿ ಇಶ್ರಾತ್​ ಜಹಾನ್​ (19)ಳನ್ನು ಗುಜರಾತ್​ ಪೊಲೀಸರು ಹತ್ಯೆ ಮಾಡಿದ್ದರು. ಇವಳಷ್ಟೇ ಅಲ್ಲದೆ, ಜಾವೇದ್​ ಶೇಖ್​ ಅಲಿಯಾಸ್ ಪ್ರಾಣೇಶ್​ ಪಿಲ್ಲೈ, ಅಮ್ಜಾದಲಿ ಅಕ್ಬರಲಿ ರಾಣಾ, ಝೀಶಾನ್​ ಜೋಹಾರ್​ ಕೂಡ ಅಂದು ಇಶ್ರಾತ್ ಜತೆ ಪೊಲೀಸ್​ ಎನ್​ಕೌಂಟರ್​ಗೆ ಬಲಿಯಾಗಿದ್ದರು. ಈ ನಾಲ್ವರೂ ಉಗ್ರರಾಗಿದ್ದು, ಮುಖ್ಯಮಂತ್ರಿ ನರೇಂದ್ರ ಮೋದಿಯವರ (ಆಗಿನ್ನೂ ನರೇಂದ್ರ ಮೋದಿಯವರು ಗುಜರಾತ್​ನ ಮುಖ್ಯಮಂತ್ರಿ ಆಗಿದ್ದರು) ಹತ್ಯೆಗೆ ಯೋಜನೆ ರೂಪಿಸಿದ್ದರು. ಹಾಗಾಗಿ ಎನ್​ಕೌಂಟರ್ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

ಆದರೆ ಈ ಪ್ರಕರಣ ಪೊಲೀಸರ ಪಾಲಿಗೆ ಸಂಕಷ್ಟವನ್ನೇ ತಂದೊಡ್ಡಿತು. ಹೈಕೋರ್ಟ್​ ರಚನೆ ಮಾಡಿದ್ದ ವಿಶೇಷ ತನಿಖಾ ತಂಡ ಇದೊಂದು ನಕಲಿ ಎನ್​ಕೌಂಟರ್​ ಎಂದು ವರದಿ ಸಲ್ಲಿಸಿದ ಪರಿಣಾಮ ಸಿಬಿಐ ತನಿಖೆ ಕೈಗೆತ್ತಿಕೊಂಡು ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ಅವರಲ್ಲಿ ಸಿಂಘಾಲ್​, ಬಾರೋಟ್​, ಚೌಧರಿ ಮತ್ತು ಜೆ.ಜಿ. ಪಾರ್ಮರ್​ ವಿಚಾರಣೆ ಸಿಬಿಐ ಕೋರ್ಟ್​ನಲ್ಲಿ ನಡೆಯುತ್ತಿತ್ತು. ಜೆ.ಜಿ.ಪಾರ್ಮರ್ ಈಗಾಗಲೇ ಮೃತಪಟ್ಟಿದ್ದು, ಉಳಿದ ಮೂವರನ್ನು ಕೋರ್ಟ್ ಬಿಡುಗಡೆ ಮಾಡಿದೆ. ಇನ್ನು ಈ ಮೂವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸಲು ಗುಜರಾತ್ ಸರ್ಕಾರ ನಿರಾಕರಿಸಿದೆ ಎಂದು ಸಿಬಿಐ ಮಾರ್ಚ್​ 20ರಂದು ಕೋರ್ಟ್​ಗೆ ಹೇಳಿತ್ತು.

ಇದನ್ನೂ ಓದಿ: Tamil Nadu Assembly Elections 2021: ಬಿಜೆಪಿ ಚುನಾವಣಾ ಪ್ರೊಮೊದಲ್ಲಿ ಕಾರ್ತಿ ಚಿದಂಬರಂ ಪತ್ನಿಯ ಭರತನಾಟ್ಯದ ವಿಡಿಯೊ

ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದ ಹಾವೇರಿ ಯುವಕ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!