AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶ್ರಾತ್​ ಜಹಾನ್​ ಎನ್​ಕೌಂಟರ್​ ಕೇಸ್: ಮೂವರು ಪೊಲೀಸ್ ಅಧಿಕಾರಿಗಳನ್ನು ಬಿಡುಗಡೆ ಮಾಡಿದ ಸಿಬಿಐ ವಿಶೇಷ ನ್ಯಾಯಾಲಯ

2004ರಲ್ಲಿ ಪೊಲೀಸ್​ ಎನ್​ಕೌಂಟರ್​ಗೆ ಬಲಿಯಾದ ಇಶ್ರಾತ್ ಜಹಾನ್ ಕೇಸ್​​ನಲ್ಲಿ ಆರೋಪಿಗಳೆನಿಸಿದ್ದ ಮೂವರು ಪೊಲೀಸ್​ ಅಧಿಕಾರಿಗಳಾದ ಜಿ.ಎಲ್​.ಸಿಂಘಾಲ್​, ತರುಣ್​ ಬಾರೋತ್​ ಮತ್ತು ಅನಾಜು ಚೌಧರಿ ಅವರನ್ನು ಇಂದು ಅಹ್ಮದಾಬಾದ್​ನ ಸಿಬಿಐ ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ. ಅಂದು ನಡೆದಿದ್ದು ನಕಲಿ ಎನ್​ಕೌಂಟರ್​ ಎಂದು ಆರೋಪ ಬಂದು, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು. ಮಾರ್ಚ್​ 30ರಂದು ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದ ವಿಮೋಚನಾ ಪತ್ರಕ್ಕೆ ಇಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಆರ್​.ರಾವಲ್ ಅನುಮೋದಿಸಿದರು. 2004ರ ಜೂನ್​ 15ರಂದು ಮುಂಬೈನ ಮುಂಬ್ರಾ ನಿವಾಸಿ […]

ಇಶ್ರಾತ್​ ಜಹಾನ್​ ಎನ್​ಕೌಂಟರ್​ ಕೇಸ್: ಮೂವರು ಪೊಲೀಸ್ ಅಧಿಕಾರಿಗಳನ್ನು ಬಿಡುಗಡೆ ಮಾಡಿದ ಸಿಬಿಐ ವಿಶೇಷ ನ್ಯಾಯಾಲಯ
ಇಶ್ರಾತ್​ ಜಹಾನ್​
Lakshmi Hegde
|

Updated on: Mar 31, 2021 | 5:19 PM

Share

2004ರಲ್ಲಿ ಪೊಲೀಸ್​ ಎನ್​ಕೌಂಟರ್​ಗೆ ಬಲಿಯಾದ ಇಶ್ರಾತ್ ಜಹಾನ್ ಕೇಸ್​​ನಲ್ಲಿ ಆರೋಪಿಗಳೆನಿಸಿದ್ದ ಮೂವರು ಪೊಲೀಸ್​ ಅಧಿಕಾರಿಗಳಾದ ಜಿ.ಎಲ್​.ಸಿಂಘಾಲ್​, ತರುಣ್​ ಬಾರೋತ್​ ಮತ್ತು ಅನಾಜು ಚೌಧರಿ ಅವರನ್ನು ಇಂದು ಅಹ್ಮದಾಬಾದ್​ನ ಸಿಬಿಐ ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಿದೆ. ಅಂದು ನಡೆದಿದ್ದು ನಕಲಿ ಎನ್​ಕೌಂಟರ್​ ಎಂದು ಆರೋಪ ಬಂದು, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು. ಮಾರ್ಚ್​ 30ರಂದು ಪೊಲೀಸ್ ಅಧಿಕಾರಿಗಳು ಸಲ್ಲಿಸಿದ್ದ ವಿಮೋಚನಾ ಪತ್ರಕ್ಕೆ ಇಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಆರ್​.ರಾವಲ್ ಅನುಮೋದಿಸಿದರು.

2004ರ ಜೂನ್​ 15ರಂದು ಮುಂಬೈನ ಮುಂಬ್ರಾ ನಿವಾಸಿ ಇಶ್ರಾತ್​ ಜಹಾನ್​ (19)ಳನ್ನು ಗುಜರಾತ್​ ಪೊಲೀಸರು ಹತ್ಯೆ ಮಾಡಿದ್ದರು. ಇವಳಷ್ಟೇ ಅಲ್ಲದೆ, ಜಾವೇದ್​ ಶೇಖ್​ ಅಲಿಯಾಸ್ ಪ್ರಾಣೇಶ್​ ಪಿಲ್ಲೈ, ಅಮ್ಜಾದಲಿ ಅಕ್ಬರಲಿ ರಾಣಾ, ಝೀಶಾನ್​ ಜೋಹಾರ್​ ಕೂಡ ಅಂದು ಇಶ್ರಾತ್ ಜತೆ ಪೊಲೀಸ್​ ಎನ್​ಕೌಂಟರ್​ಗೆ ಬಲಿಯಾಗಿದ್ದರು. ಈ ನಾಲ್ವರೂ ಉಗ್ರರಾಗಿದ್ದು, ಮುಖ್ಯಮಂತ್ರಿ ನರೇಂದ್ರ ಮೋದಿಯವರ (ಆಗಿನ್ನೂ ನರೇಂದ್ರ ಮೋದಿಯವರು ಗುಜರಾತ್​ನ ಮುಖ್ಯಮಂತ್ರಿ ಆಗಿದ್ದರು) ಹತ್ಯೆಗೆ ಯೋಜನೆ ರೂಪಿಸಿದ್ದರು. ಹಾಗಾಗಿ ಎನ್​ಕೌಂಟರ್ ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು.

ಆದರೆ ಈ ಪ್ರಕರಣ ಪೊಲೀಸರ ಪಾಲಿಗೆ ಸಂಕಷ್ಟವನ್ನೇ ತಂದೊಡ್ಡಿತು. ಹೈಕೋರ್ಟ್​ ರಚನೆ ಮಾಡಿದ್ದ ವಿಶೇಷ ತನಿಖಾ ತಂಡ ಇದೊಂದು ನಕಲಿ ಎನ್​ಕೌಂಟರ್​ ಎಂದು ವರದಿ ಸಲ್ಲಿಸಿದ ಪರಿಣಾಮ ಸಿಬಿಐ ತನಿಖೆ ಕೈಗೆತ್ತಿಕೊಂಡು ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ಅವರಲ್ಲಿ ಸಿಂಘಾಲ್​, ಬಾರೋಟ್​, ಚೌಧರಿ ಮತ್ತು ಜೆ.ಜಿ. ಪಾರ್ಮರ್​ ವಿಚಾರಣೆ ಸಿಬಿಐ ಕೋರ್ಟ್​ನಲ್ಲಿ ನಡೆಯುತ್ತಿತ್ತು. ಜೆ.ಜಿ.ಪಾರ್ಮರ್ ಈಗಾಗಲೇ ಮೃತಪಟ್ಟಿದ್ದು, ಉಳಿದ ಮೂವರನ್ನು ಕೋರ್ಟ್ ಬಿಡುಗಡೆ ಮಾಡಿದೆ. ಇನ್ನು ಈ ಮೂವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸಲು ಗುಜರಾತ್ ಸರ್ಕಾರ ನಿರಾಕರಿಸಿದೆ ಎಂದು ಸಿಬಿಐ ಮಾರ್ಚ್​ 20ರಂದು ಕೋರ್ಟ್​ಗೆ ಹೇಳಿತ್ತು.

ಇದನ್ನೂ ಓದಿ: Tamil Nadu Assembly Elections 2021: ಬಿಜೆಪಿ ಚುನಾವಣಾ ಪ್ರೊಮೊದಲ್ಲಿ ಕಾರ್ತಿ ಚಿದಂಬರಂ ಪತ್ನಿಯ ಭರತನಾಟ್ಯದ ವಿಡಿಯೊ

ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದ ಹಾವೇರಿ ಯುವಕ

Follow Us
Lakshmi Hegde
Lakshmi Hegde
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ