AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

28 ವರ್ಷಗಳ ನಂತರ.. ಸನ್ಯಾಸಿನಿ ಸಿಸ್ಟರ್​ ಅಭಯಾ ಸಾವಿಗೆ ದೊರಕಿತು ನ್ಯಾಯ

ಕೇರಳದ ಸಿಸ್ಟರ್​ ಅಭಯಾ ಕೊಲೆ ಪ್ರಕರಣದಲ್ಲಿ ಫಾದರ್ ಥಾಮಸ್ ಕೊಟ್ಟೂರ್ ಮತ್ತು ಸಿಸ್ಟರ್​ ಸೆಫಿ ತಪ್ಪಿತಸ್ಥರೆಂದು ತಿರುವನಂತಪುರಂನ ವಿಶೇಷ CBI ನ್ಯಾಯಾಲಯ ಇಂದು ತೀರ್ಪು ನೀಡಿದೆ.

28 ವರ್ಷಗಳ ನಂತರ.. ಸನ್ಯಾಸಿನಿ ಸಿಸ್ಟರ್​ ಅಭಯಾ ಸಾವಿಗೆ ದೊರಕಿತು ನ್ಯಾಯ
ಆರೋಪಿಗಳಾದ ಫಾದರ್ ಥಾಮಸ್ ಕೊಟ್ಟೂರ್, ಸಿಸ್ಟರ್​ ಸೆಫಿ ಮತ್ತು ಮೃತ ಸನ್ಯಾಸಿನಿ ಸಿಸ್ಟರ್​ ಅಭಯಾ
ಪೃಥ್ವಿಶಂಕರ
|

Updated on:Dec 22, 2020 | 4:49 PM

Share

ತಿರುವನಂತಪುರಂ: ಕೇರಳದ ಸಿಸ್ಟರ್​ ಅಭಯಾ ಕೊಲೆ ಪ್ರಕರಣದಲ್ಲಿ ಫಾದರ್ ಥಾಮಸ್ ಕೊಟ್ಟೂರ್ ಮತ್ತು ಸಿಸ್ಟರ್​ ಸೆಫಿ ತಪ್ಪಿತಸ್ಥರೆಂದು ತಿರುವನಂತಪುರಂನ ವಿಶೇಷ CBI ನ್ಯಾಯಾಲಯ ಇಂದು ತೀರ್ಪು ನೀಡಿದೆ.

28 ವರ್ಷಗಳ ನಂತರ ಹೊರಬಿದ್ದ ತೀರ್ಪು 1992ರಲ್ಲಿ ಕೇರಳದ ಕೊಟ್ಟಾಯಂನಲ್ಲಿರುವ ಕಾನ್ವೆಂಟ್‌ನಲ್ಲಿದ್ದ 19 ವರ್ಷದ ಕ್ರೈಸ್ತ ಸನ್ಯಾಸಿನಿ ಸಿಸ್ಟರ್ ಅಭಯಾಳನ್ನು ಕೊಲೆ ಮಾಡಿ ಆಕೆಯ ದೇಹವನ್ನು ಕಾನ್ವೆಂಟ್​ನ ಬಾವಿಗೆ ಎಸೆದಿದ್ದರು. ಇದೀಗ, ಸತತ 28 ವರ್ಷಗಳ ನಂತರ ಈ ಪ್ರಕರಣದ ತೀರ್ಪು ಹೊರಬಿದ್ದಿದೆ. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಸಿಸ್ಟರ್ ಅಭಯಾ ಮೃತದೇಹವು ಮಾರ್ಚ್ 27, 1992 ರಂದು ಕೊಟ್ಟಾಯಂನ ಸೇಂಟ್ ಪೈಯಸ್​ ಕಾನ್ವೆಂಟ್​ನ ಬಾವಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ, ಈ ಪ್ರಕರಣವನ್ನು ಸ್ಥಳೀಯ ಪೊಲೀಸರು ಮತ್ತು ರಾಜ್ಯದ ಅಪರಾಧ ವಿಭಾಗವು ತನಿಖೆ ನಡೆಸಿತ್ತು. ತನಿಖೆಯಲ್ಲಿ ಸಿಸ್ಟರ್ ಅಭಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ನೀಡಲಾಗಿತ್ತು. ಆದರೆ, ಪುಥೆನ್‌ಪುರಕಲ್ ಎಂಬುವವರು ಕಾನೂನು ಹೋರಾಟ ನಡೆಸಿದ ನಂತರ ಈ ಪ್ರಕರಣವನ್ನು ಮಾರ್ಚ್ 29, 1993 ರಂದು CBIಗೆ ವಹಿಸಲಾಗಿತ್ತು.

ತೀವ್ರ ತನಿಖೆಯ ನಂತರ CBI 2008 ರಲ್ಲಿ ಕೊಲೆ ಆರೋಪದಡಿ ಕೊತ್ತೂರು, ಪೂತ್ರಿಕ್ಕಾಯಿಲ್ ಮತ್ತು ಸೆಫಿಯನ್ನು ಬಂಧಿಸಿತ್ತು. ಆದರೆ ಎರಡು ವರ್ಷಗಳ ಹಿಂದೆ, ಪೂತ್ರಿಕ್ಕಾಯಿಲ್ ಅವರನ್ನು ವಿಶೇಷ CBI ನ್ಯಾಯಾಲಯ  ನಿರಪರಾಧಿ ಎಂದು ತೀರ್ಪು ನೀಡಿತ್ತು.

ಹತ್ರಾಸ್​ ಗ್ಯಾಂಗ್​ರೇಪ್: ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್

Published On - 4:40 pm, Tue, 22 December 20

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು