AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀ ರಂಗನಾಥಸ್ವಾಮಿ ದೇವಸ್ಥಾನದಿಂದ ನೀಡಿದ ‘ವಿಶೇಷ ಉಡುಗೊರೆ’ಯನ್ನು ರಾಮಲಲ್ಲಾಗೆ ಸಮರ್ಪಿಸಿದ ಮೋದಿ

ತಿರುಚಿರಾಪಳ್ಳಿಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿದ್ದಾರೆ vನರೇಂದ್ರ ಮೋದಿ. ಈ ಭೇಟಿ ವೇಳೆ ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ದೇವರ ಪರವಾಗಿ ಪ್ರಧಾನಿಗೆ ಉಡುಗೊರೆ, ಒಂದು ಸೆಟ್ ಸೀರೆಗಳು ಮತ್ತು ಇತರ ವಸ್ತುಗಳನ್ನು ನೀಡಲಾಗಿತ್ತು.

ಶ್ರೀ ರಂಗನಾಥಸ್ವಾಮಿ ದೇವಸ್ಥಾನದಿಂದ ನೀಡಿದ ‘ವಿಶೇಷ ಉಡುಗೊರೆ’ಯನ್ನು ರಾಮಲಲ್ಲಾಗೆ ಸಮರ್ಪಿಸಿದ ಮೋದಿ
ವಿಶೇಷ ಉಡುಗೊರೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 23, 2024 | 4:55 PM

Share

ತಿರುಚಿರಾಪಲ್ಲಿ: ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ (Ram lalla) ಪ್ರಾಣ ಪ್ರತಿಷ್ಠೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಶ್ರೀರಂಗಂನ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ(Sri Ranganathaswamy Temple) ಆಗಮಿಸಿ ಪೂಜೆ ಸಲ್ಲಿಸಿದ್ದರು. ದೇವಾಲಯಕ್ಕೆ ಆಗಮಿಸಿದ ಪ್ರಧಾನಿಗೆ ಅಲ್ಲಿನ ಅರ್ಚಕರು ಪೂರ್ಣಕುಂಭ ಸ್ವಾಗತ ನೀಡಿದ್ದರು. ತಿರುಚ್ಚಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಶ್ರೀರಂಗಂ ದೇವಸ್ಥಾನದಲ್ಲಿ ಕಂಬ ರಾಮಾಯಣದ ಶ್ಲೋಕಗಳನ್ನು ಆಲಿಸಿದರು. ರಾಮಾಯಣದ ಅತ್ಯಂತ ಹಳೆಯ ಆವೃತ್ತಿಗಳಲ್ಲಿ, ಕಂಬ ರಾಮಾಯಣವನ್ನು ತಮಿಳು ಕವಿ ಕಂಬನ್ ರಚಿಸಿದ್ದಾರೆ.

ತಿರುಚಿರಾಪಳ್ಳಿಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿದ್ದಾರೆ ಮೋದಿ. ಈ ಭೇಟಿ ವೇಳೆ ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ದೇವರ ಪರವಾಗಿ ಪ್ರಧಾನಿಗೆ ಉಡುಗೊರೆ, ಒಂದು ಸೆಟ್ ಸೀರೆಗಳು ಮತ್ತು ಇತರ ವಸ್ತುಗಳನ್ನು ನೀಡಲಾಗಿತ್ತು. ಅಯೋಧ್ಯೆಯಲ್ಲಿರುವ ರಾಮಮಂದಿರಕ್ಕೆ ಕೊಂಡೊಯ್ಯಲಿರುವ ವಿಶೇಷ ಉಡುಗೊರೆಯಾಗಿತ್ತು ಇದು.

ನಿನ್ನೆ (ಜನವರಿ 22) ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಮೋದಿಯವರು ಈ ಉಡುಗೊರೆಯನ್ನು ರಾಮಲಲ್ಲಾನಿಗೆ ಸಮರ್ಪಿಸಿದ್ದಾರೆ.

ಶ್ರೀರಂಗಂ ದೇವಾಲಯ ಬಗ್ಗೆ

ಶ್ರೀರಂಗಂ ದೇವಾಲಯವು ಶ್ರೀ ರಂಗನಾಥರಿಗೆ ಸಮರ್ಪಿತವಾದ ಹಿಂದೂ ದೇವಾಲಯವಾಗಿದೆ. ಶ್ರೀರಂಗಂ ದೇವಾಲಯವು ಭಾರತದ ಅತಿದೊಡ್ಡ ದೇವಾಲಯ ಹಾಗೂ ವಿಶ್ವದ ಶ್ರೇಷ್ಠ ಧಾರ್ಮಿಕ ಸಂಕೀರ್ಣಗಳಲ್ಲಿ ಒಂದಾಗಿದೆ. ರಂಗನಾಥಸ್ವಾಮಿ ದೇವಾಲಯವನ್ನು ವಿಜಯನಗರ ಕಾಲದಲ್ಲಿ (1336-1565) ನಿರ್ಮಿಸಲಾಗಿದೆ ಎಂದು ನಂಬಲಾಗಿದೆ. ತಮಿಳಿನಲ್ಲಿ “ನಮ್ಮ ದೇವರು” ಮತ್ತು “ಸುಂದರ ವರ” ಎಂದು ಕರೆಯಲ್ಪಡುವ ನಮ್ಮ ಪೆರುಮಾಳ್ ಮತ್ತು ಅಝಗಿಯ ಮಣವಾಳನ್ ಎಂದು ಕರೆಯಲ್ಪಡುವ ದೇವತೆಯ ವಾಸಸ್ಥಾನ, ಭವ್ಯವಾದ ರಂಗನಾಥಸ್ವಾಮಿ ದೇವಾಲಯವು ಭಗವಾನ್ ವಿಷ್ಣುವಿನ ಒರಗಿರುವ ಭಂಗಿಯಲ್ಲಿರುವ ಭಗವಾನ್ ರಂಗನಾಥನ ನೆಲೆಯಾಗಿದೆ.

ಈ ದೇವಾಲಯವು ಭಗವಾನ್ ರಾಮನೊಂದಿಗೆ ಸಂಪರ್ಕವನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ಶ್ರೀರಂಗದಲ್ಲಿ ಪೂಜಿಸಲ್ಪಡುವ ದೇವರು ವಿಷ್ಣುವಿನ ರೂಪವಾದ ಶ್ರೀ ರಂಗನಾಥ ಸ್ವಾಮಿ. ಶ್ರೀರಂಗಂನಲ್ಲಿರುವ ವಿಗ್ರಹವನ್ನು ಮೂಲತಃ ಭಗವಾನ್ ರಾಮ ಮತ್ತು ಅವನ ಪೂರ್ವಜರು ಪೂಜಿಸುತ್ತಿದ್ದರು ಎಂದು ನಂಬಲಾಗಿದೆ. ಇದನ್ನು ಬ್ರಹ್ಮನು ರಾಮನ ಪೂರ್ವಜರಿಗೆ ಕೊಟ್ಟನು ಎಂಬ ನಂಬಿಕೆ ಇದೆ.

ತಮಿಳುನಾಡಿನ ಈ ಪುರಾತನ ದೇಗುಲಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಧೋತಿ ಮತ್ತು ಶಾಲು ಧರಿಸಿದ್ದರು. ಅಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ದೇವಸ್ಥಾನದ ಆನೆಗೆ ಆಹಾರ ನೀಡಿ ಆಶೀರ್ವಾದ ಪಡೆದರು. ದ್ವೀಪವೊಂದರಲ್ಲಿ ನೆಲೆಸಿರುವ, ಕಾವೇರಿ ಮತ್ತು ಕೊಳ್ಳಿಡಂ ನದಿಗಳ ಸಂಗಮದಲ್ಲಿರುವ ಶ್ರೀರಂಗಂ ದೇವಾಲಯವು ತಮಿಳುನಾಡಿನ ಪುರಾತನ ವೈಷ್ಣವ ದೇವಾಲಯವಾಗಿದೆ. ಇದು ಸಂಗಮ್ ಯುಗದ ಹಿಂದಿನದು. ಈ ದೇವಾಲಯವನ್ನು ‘ಬೂಲೋಗ ವೈಕುಂಠಂ’ ಅಥವಾ ‘ಭೂಮಿಯ ಮೇಲಿನ ವೈಕುಂಠಂ’ ಎಂದೂ ಕರೆಯಲಾಗುತ್ತದೆ. ವೈಕುಂಠ ವಿಷ್ಣುವಿನ ಶಾಶ್ವತ ನಿವಾಸವಾಗಿದೆ.

ಇದನ್ನೂ ಓದಿ: ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: ತಮಿಳುನಾಡಿನ ಈ ಪುರಾತನ ದೇಗುಲಕ್ಕಿದೆ ಶ್ರೀರಾಮನ ನಂಟು

ಆನೆಯಿಂದ ಆಶೀರ್ವಾದ

ಮೋದಿ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದಾಗ ದೇವಾಲಯದ ಆನೆ ಪ್ರಧಾನಿ ಅವರನ್ನು ಆಶೀರ್ವದಿಸಿದ್ದು ಮಾತ್ರವಲ್ಲದೆ ಮೌತ್ ಆರ್ಗನ್ ಕೂಡಾ ನುಡಿಸಿದೆ. ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಳೆದ ನಂತರ ಪ್ರಧಾನಿ ಶ್ರೀ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲು ರಾಮೇಶ್ವರಂಗೆ ತೆರಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ