ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು, ಒಂದೇ ಕುಟುಂಬದ ಐವರ ಜಲಸಮಾಧಿ

ಹೈದರಾಬಾದ್‌: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಕೊತ್ತಪಲ್ಲಿ ಬಳಿ ಈ ದುರಂತ ನಡೆದಿದೆ. ಕೊತ್ತಪಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಕಾರು ನಿಯಂತ್ರಣ ತಪ್ಪಿದಾಗ ಈ ಘಟನೆ ನಡೆದಿದೆ. ರಸ್ತೆ ಪಕ್ಕದ‌ ಕಾಲುವೆಗೆ‌ ಬಿದ್ದ ಕಾರಣ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ. ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮತ್ತು ಒಂದು‌ ಮಗು ಮೃತಪಟ್ಟವರು. ಘಟನೆಯಲ್ಲಿ‌ ಚಾಲಕ‌ನಿಗೆ‌ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲ ಒಡಿಶಾ ಮೂಲದವರೆಂದು ಗುರುತಿಸಲಾಗಿದೆ.

ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು, ಒಂದೇ ಕುಟುಂಬದ ಐವರ ಜಲಸಮಾಧಿ
ಸಾಧು ಶ್ರೀನಾಥ್​

Updated on: Jan 04, 2020 | 1:58 PM

ಹೈದರಾಬಾದ್‌: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಕೊತ್ತಪಲ್ಲಿ ಬಳಿ ಈ ದುರಂತ ನಡೆದಿದೆ.

ಕೊತ್ತಪಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಕಾರು ನಿಯಂತ್ರಣ ತಪ್ಪಿದಾಗ ಈ ಘಟನೆ ನಡೆದಿದೆ. ರಸ್ತೆ ಪಕ್ಕದ‌ ಕಾಲುವೆಗೆ‌ ಬಿದ್ದ ಕಾರಣ ಒಂದೇ ಕುಟುಂಬದ ಐವರು ಸಾವಿಗೀಡಾಗಿದ್ದಾರೆ. ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮತ್ತು ಒಂದು‌ ಮಗು ಮೃತಪಟ್ಟವರು. ಘಟನೆಯಲ್ಲಿ‌ ಚಾಲಕ‌ನಿಗೆ‌ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲ ಒಡಿಶಾ ಮೂಲದವರೆಂದು ಗುರುತಿಸಲಾಗಿದೆ.

Published On - 1:55 pm, Sat, 4 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us