AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಪೋರ್ಟ್​ನಲ್ಲಿ ಸಿಐಎಸ್​ಎಫ್​ ಅಧಿಕಾರಿ ಕೆನ್ನೆಗೆ ಬಾರಿಸಿದ ಸ್ಪೈಸ್​ಜೆಟ್ ಮಹಿಳಾ ಸಿಬ್ಬಂದಿ

ಏರ್​ಪೋರ್ಟ್​ನಲ್ಲಿ ಸ್ಪೈಸ್​ಜೆಟ್​ನ ಮಹಿಳಾ ಸಿಬ್ಬಂದಿ ಸಿಐಎಸ್​ಎಫ್​ ಅಧಿಕಾರಿ ಕೆನ್ನೆಗೆ ಬಾರಿಸಿರುವ ಘಟನೆ ಜೈಪುರ ಏರ್​ಪೋರ್ಟ್​ನಲ್ಲಿ ನಡೆದಿದೆ.

ಏರ್​ಪೋರ್ಟ್​ನಲ್ಲಿ ಸಿಐಎಸ್​ಎಫ್​ ಅಧಿಕಾರಿ ಕೆನ್ನೆಗೆ ಬಾರಿಸಿದ ಸ್ಪೈಸ್​ಜೆಟ್ ಮಹಿಳಾ ಸಿಬ್ಬಂದಿ
ಸ್ಪೈಸ್​ಜೆಟ್ ಸಿಬ್ಬಂದಿ
ನಯನಾ ರಾಜೀವ್
|

Updated on: Jul 12, 2024 | 8:17 AM

Share

ಜೈಪುರ ವಿಮಾನ ನಿಲ್ದಾಣದಲ್ಲಿ ಸ್ಪೈಸ್​ಜೆಟ್ ಮಹಿಳಾ ಸಿಬ್ಬಂದಿ ಸಿಐಎಸ್​ಎಫ್​ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿ ಅನುರಾಧಾ ರಾಣಿ ಅವರನ್ನು ಜೈಪುರ ವಿಮಾನ ನಿಲ್ದಾಣದ ಗೇಟ್‌ನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗಿರಿರಾಜ್ ಪ್ರಸಾದ್ ಅವರು ಬೆಳಗಿನ ಜಾವ 4 ಗಂಟೆ ಸುಮಾರಿಗೆ ತಡೆದರು. ವಾಹನದ ಗೇಟ್ ಬಳಸಲು ಅನುಮತಿ ಇಲ್ಲ ಎಂದು ಹೇಳಿದ್ದಾರೆ.

ಮತ್ತೊಂದು ಗೇಟ್ ಮೂಲಕ ಹೊರಹೋಗುವಂತೆ ವಿಮಾನಯಾನ ನೌಕರರನ್ನು ಕೇಳಿದಾಗ ಅವರು ಭದ್ರತಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಪೊಲೀಸರು ಮತ್ತು ಸಿಐಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ನಂತರ, ಅನುರಾಧಾ ರಾಣಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ

ಸಿಐಎಸ್‌ಎಫ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಮಾನಯಾನ ಸಂಸ್ಥೆ ತನ್ನ ಉದ್ಯೋಗಿಯ ರಕ್ಷಣೆಗೆ ನಿಂತಿದೆ.

ಏರ್​ಪೋರ್ಟ್​ನಲ್ಲಿ ಸ್ಕ್ರೀನಿಂಗ್ ಪ್ರದೇಶದ ಸುತ್ತಲೂ ಮಹಿಳಾ ಪೊಲೀಸರು ಇರಲಿಲ್ಲ, ಆ ಸಮಯದಲ್ಲಿ ಮಹಿಳಾ ಸಿಬ್ಬಂದಿಯನ್ನು ಸ್ಕ್ರೀನಿಂಗ್​ಗೆ ಬರುವಂತೆ ಗಿರಿರಾಜ್ ಕರೆದಿದ್ದರು ಆಗ ವಾಗ್ವಾದ ಶುರುವಾಗಿತ್ತು ಎನ್ನಲಾಗಿದೆ.

ಈ ಪ್ರಕರಣದಲ್ಲಿ, ಸ್ಪೈಸ್‌ಜೆಟ್ ತನ್ನ ಉದ್ಯೋಗಿಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಕೆಲಸ ಮುಗಿದ ಮೇಲೆ ಮನೆಗೆ ಬರುವಂತೆ ಕೇಳಿದ್ದಕ್ಕೆ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಉದ್ಯೋಗಿ ಪ್ರವೇಶಕ್ಕಾಗಿ ಮಾನ್ಯವಾದ ವಿಮಾನ ನಿಲ್ದಾಣ ಪ್ರವೇಶ ಪಾಸ್ ಅನ್ನು ಹೊಂದಿದ್ದರು, ಆದರೂ ಅಧಿಕಾರಿ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾರೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ