AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಪೋರ್ಟ್​ನಲ್ಲಿ ಸಿಐಎಸ್​ಎಫ್​ ಅಧಿಕಾರಿ ಕೆನ್ನೆಗೆ ಬಾರಿಸಿದ ಸ್ಪೈಸ್​ಜೆಟ್ ಮಹಿಳಾ ಸಿಬ್ಬಂದಿ

ಏರ್​ಪೋರ್ಟ್​ನಲ್ಲಿ ಸ್ಪೈಸ್​ಜೆಟ್​ನ ಮಹಿಳಾ ಸಿಬ್ಬಂದಿ ಸಿಐಎಸ್​ಎಫ್​ ಅಧಿಕಾರಿ ಕೆನ್ನೆಗೆ ಬಾರಿಸಿರುವ ಘಟನೆ ಜೈಪುರ ಏರ್​ಪೋರ್ಟ್​ನಲ್ಲಿ ನಡೆದಿದೆ.

ಏರ್​ಪೋರ್ಟ್​ನಲ್ಲಿ ಸಿಐಎಸ್​ಎಫ್​ ಅಧಿಕಾರಿ ಕೆನ್ನೆಗೆ ಬಾರಿಸಿದ ಸ್ಪೈಸ್​ಜೆಟ್ ಮಹಿಳಾ ಸಿಬ್ಬಂದಿ
ಸ್ಪೈಸ್​ಜೆಟ್ ಸಿಬ್ಬಂದಿ
ನಯನಾ ರಾಜೀವ್
|

Updated on: Jul 12, 2024 | 8:17 AM

Share

ಜೈಪುರ ವಿಮಾನ ನಿಲ್ದಾಣದಲ್ಲಿ ಸ್ಪೈಸ್​ಜೆಟ್ ಮಹಿಳಾ ಸಿಬ್ಬಂದಿ ಸಿಐಎಸ್​ಎಫ್​ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿ ಅನುರಾಧಾ ರಾಣಿ ಅವರನ್ನು ಜೈಪುರ ವಿಮಾನ ನಿಲ್ದಾಣದ ಗೇಟ್‌ನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗಿರಿರಾಜ್ ಪ್ರಸಾದ್ ಅವರು ಬೆಳಗಿನ ಜಾವ 4 ಗಂಟೆ ಸುಮಾರಿಗೆ ತಡೆದರು. ವಾಹನದ ಗೇಟ್ ಬಳಸಲು ಅನುಮತಿ ಇಲ್ಲ ಎಂದು ಹೇಳಿದ್ದಾರೆ.

ಮತ್ತೊಂದು ಗೇಟ್ ಮೂಲಕ ಹೊರಹೋಗುವಂತೆ ವಿಮಾನಯಾನ ನೌಕರರನ್ನು ಕೇಳಿದಾಗ ಅವರು ಭದ್ರತಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಪೊಲೀಸರು ಮತ್ತು ಸಿಐಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ನಂತರ, ಅನುರಾಧಾ ರಾಣಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ

ಸಿಐಎಸ್‌ಎಫ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಮಾನಯಾನ ಸಂಸ್ಥೆ ತನ್ನ ಉದ್ಯೋಗಿಯ ರಕ್ಷಣೆಗೆ ನಿಂತಿದೆ.

ಏರ್​ಪೋರ್ಟ್​ನಲ್ಲಿ ಸ್ಕ್ರೀನಿಂಗ್ ಪ್ರದೇಶದ ಸುತ್ತಲೂ ಮಹಿಳಾ ಪೊಲೀಸರು ಇರಲಿಲ್ಲ, ಆ ಸಮಯದಲ್ಲಿ ಮಹಿಳಾ ಸಿಬ್ಬಂದಿಯನ್ನು ಸ್ಕ್ರೀನಿಂಗ್​ಗೆ ಬರುವಂತೆ ಗಿರಿರಾಜ್ ಕರೆದಿದ್ದರು ಆಗ ವಾಗ್ವಾದ ಶುರುವಾಗಿತ್ತು ಎನ್ನಲಾಗಿದೆ.

ಈ ಪ್ರಕರಣದಲ್ಲಿ, ಸ್ಪೈಸ್‌ಜೆಟ್ ತನ್ನ ಉದ್ಯೋಗಿಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಕೆಲಸ ಮುಗಿದ ಮೇಲೆ ಮನೆಗೆ ಬರುವಂತೆ ಕೇಳಿದ್ದಕ್ಕೆ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಉದ್ಯೋಗಿ ಪ್ರವೇಶಕ್ಕಾಗಿ ಮಾನ್ಯವಾದ ವಿಮಾನ ನಿಲ್ದಾಣ ಪ್ರವೇಶ ಪಾಸ್ ಅನ್ನು ಹೊಂದಿದ್ದರು, ಆದರೂ ಅಧಿಕಾರಿ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾರೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?