AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SpiceJet: ಗಗನಸಖಿ ಜೊತೆಗೆ ಅನುಚಿತ ವರ್ತನೆ ವಿಮಾನದಿಂದ ಪ್ರಯಾಣಿಕರನ್ನು ಕೆಳಗಿಳಿಸಿದ ಸ್ಪೈಸ್​ಜೆಟ್

ಗಗನಸಖಿಯೊಬ್ಬರಿಗೆ ಹಿಂಸೆಯಾಗುವ ರೀತಿಯಲ್ಲಿ ಆರೋಪಿ ಪ್ರಯಾಣಿಕ ಅಂಗಾಂಗ ಸ್ಪರ್ಶ ಮಾಡಿದ್ದ ಎಂದು ಸಿಬ್ಬಂದಿ ಆರೋಪಿಸಿದ್ದಾರೆ

SpiceJet: ಗಗನಸಖಿ ಜೊತೆಗೆ ಅನುಚಿತ ವರ್ತನೆ ವಿಮಾನದಿಂದ ಪ್ರಯಾಣಿಕರನ್ನು ಕೆಳಗಿಳಿಸಿದ ಸ್ಪೈಸ್​ಜೆಟ್
ಸ್ಪೈಸ್​ಜೆಟ್ ವಿಮಾನದಲ್ಲಿ ಸಿಬ್ಬಂದಿ ಮತ್ತು ಪ್ರಯಾಣಿಕರ ವಾಗ್ವಾದ
TV9 Web
| Edited By: |

Updated on:Jan 24, 2023 | 8:35 AM

Share

ದೆಹಲಿ: ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು ಸ್ಪೈಸ್​ಜೆಟ್ ವಿಮಾನಯಾನ (SpiceJet) ಸಂಸ್ಥೆಯು ಕೆಳಗಿಳಿಸಿದ ಘಟನೆ ಸೋಮವಾರ ನಡೆದಿದೆ. ಈ ಕುರಿತು ಸ್ಪೈಸ್​ಜೆಟ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಘಟನೆ ಕುರಿತ ವಿಡಿಯೊ ತುಣುಕೊಂದನ್ನು ಎಎನ್​ಐ ಸಂಸ್ಥೆಯು ಟ್ವೀಟ್ ಮಾಡಿದ್ದು, ಪುರುಷ ಪ್ರಯಾಣಿಕರೊಬ್ಬರು ಮಹಿಳಾ ಸಿಬ್ಬಂದಿ (Female Crew Member) ಜೊತೆಗೆ ಅನುಚಿತವಾಗಿ ವರ್ತಿಸಿದರೆಂದು ಆರೋಪಿಸಲಾದ ಬೆಳವಣಿಗೆಯ ನಂತರ ನಡೆದ ಜಗಳ ಇದರಲ್ಲಿ ದಾಖಲಾಗಿದೆ.

‘ಜನವರಿ 23, 2023ರಂದು ದೆಹಲಿ-ಹೈದರಾಬಾದ್ ಸ್ಪೈಸ್​ಜೆಟ್ ವಿಮಾನದಲ್ಲಿ ಘಟನೆ ನಡೆದಿದೆ. ವಿಮಾನದ ಬೋರ್ಡಿಂಗ್ (ಪ್ರಯಾಣಿಕರ ಪ್ರವೇಶ) ವೇಳೆ ಒಬ್ಬ ಪ್ರಯಾಣಿಕರು ಸಿಬ್ಬಂದಿಯೊಂದು ಅನುಚಿತವಾಗಿ ವರ್ತಿಸಿದರು, ಹಿಂಸೆ ನೀಡಿದರು. ಅವರು ತಕ್ಷಣ ಈ ಕುರಿತು ಭದ್ರತಾ ದಳ ಹಾಗೂ ಇತರ ಸಿಬ್ಬಂದಿಗೆ ಮಾಹಿತಿ ನೀಡಿದರು. ನಂತರ ಆರೋಪಿ ಪ್ರಯಾಣಿಕ ಹಾಗೂ ಸಹಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ, ಭದ್ರತಾ ಸಿಬ್ಬಂದಿಯ ವಶಕ್ಕೆ ಒಪ್ಪಿಸಲಾಯಿತು’ ಎಂದು ಸ್ಪೈಸ್​ಜೆಟ್​ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಗಗನಸಖಿಯೊಬ್ಬರಿಗೆ ಹಿಂಸೆಯಾಗುವ ರೀತಿಯಲ್ಲಿ ಆರೋಪಿ ಪ್ರಯಾಣಿಕ ಅಂಗಾಂಗ ಸ್ಪರ್ಶ ಮಾಡಿದ್ದ ಎಂದು ಸಿಬ್ಬಂದಿ ಆರೋಪಿಸಿದ್ದಾರೆ. ಆರೋಪಿ ಪ್ರಯಾಣಿಕನು ತಾನು ಅಂಥ ದುಷ್ಕೃತ್ಯ ಎಸಗಿಲ್ಲ. ಅಚಾನಕ್​ ಆಗಿ ನನ್ನ ಕೈ ಅವರನ್ನು ಮುಟ್ಟಿತು. ವಿಮಾನದಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ಹೀಗಾಯಿತೇ ವಿನಃ ಇದು ಉದ್ದೇಶಪೂರ್ವಕ ಕೃತ್ಯ ಅಲ್ಲ ಎಂದು ಸಮರ್ಥಿಸಿಕೊಂಡರು. ಸಿಬ್ಬಂದಿಯ ಪರವಾಗಿ ವಿಮಾನಸಂಸ್ಥೆಯು ಗಟ್ಟಿಯಾಗಿ ನಿಂತ ನಂತರ ಆರೋಪಿ ಪ್ರಯಾಣಿಕನು ಲಿಖಿತ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟು ಕ್ಷಮೆಯಾಚಿಸಿದ. ಆದರೆ ಪ್ರಯಾಣದಲ್ಲಿ ಮುಂದೆಯೂ ತೊಂದರೆಯಾಗಬಹುದು ಎಂದು ಅಂದಾಜಿಸಿದ ಸ್ಪೈಸ್​ಜೆಟ್​ ವ್ಯವಸ್ಥಾಪಕರು ಆರೋಪಿ ಪ್ರಯಾಣಿಕನನ್ನು ಕೆಳಗಿಳಿಸಲು ನಿರ್ಧರಿಸಿದರು.

ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಇದೇ ಮೊದಲಲ್ಲ

ಏರ್​ ಇಂಡಿಯಾದಲ್ಲಿ ಪ್ರಯಾಣಿಕರು ಅನುಚಿತವಾಗಿ ವರ್ತಿಸಿದ ಎರಡು ಘಟನೆಗಳು ಒಂದಾದಮೇಲೊಂದರಂತೆ ವರದಿಯಾದ ನಂತರ ನಾಗರಿಕ ವಿಮಾನಯಾನದ ಮಹಾನಿರ್ದೇಶಕರು (ಡಿಜಿಸಿಎ) ಏರ್ ​ಇಂಡಿಯಾದ ವ್ಯವಸ್ಥಾಪಕರಿಗೆ ಕಟುವಾಗಿ ನೊಟೀಸ್ ಜಾರಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಏರ್​ ಇಂಡಿಯಾದ ಓರ್ವ ಪ್ರಯಾಣಿಕ ಶೌಚಾಲಯದಲ್ಲಿ ಸಿಗರೇಟ್ ಸೇದುತ್ತಿದ್ದ. ನಿಲ್ಲಿಸುವಂತೆ ಹೇಳಿದ ಸಿಬ್ಬಂದಿಯ ಮಾತಿಗೆ ಬೆಲೆ ಕೊಟ್ಟಿರಲಿಲ್ಲ. ಮತ್ತೋರ್ವ ಪ್ರಯಾಣಿಕ ಮಹಿಳಾ ಸಹಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಎರಡೂ ಪ್ರಕರಣಗಳನ್ನು ಡಿಜಿಸಿಎ ಗಂಭೀರವಾಗಿ ಪರಿಗಣಿಸಿತ್ತು.

ಪ್ರಯಾಣಿಕರಲ್ಲಿ ಶಿಸ್ತು ಕಾಪಾಡುವ ಜವಾಬ್ದಾರಿಯನ್ನೂ ವಿಮಾನಯಾನ ಸಂಸ್ಥೆಗಳು ನಿರ್ವಹಿಸಬೇಕು. ನಿಯಮ ಉಲ್ಲಂಘಿಸುವ ಪ್ರಯಾಣಿಕರ ಬಗ್ಗೆ ಭದ್ರತಾ ಸಿಬ್ಬಂದಿಗೆ ಮಾಹಿತಿ ಕೊಟ್ಟು, ಮುಂದಿನ ಕ್ರಮಕ್ಕೆ ನೆರವಾಗಬೇಕು ಎಂದು ಪರೋಕ್ಷವಾಗಿ ಡಿಜಿಸಿಎ ಎಚ್ಚರಿಸಿತ್ತು. ಈ ನೊಟೀಸ್ ನಂತರ ಪ್ರಯಾಣಿಕರ ಬಗ್ಗೆ ವೈಮಾನಿಕ ಕಂಪನಿಗಳ ಧೋರಣೆಯೂ ಬದಲಾಗಿದೆ.

ಇದನ್ನೂ ಓದಿ: Air India: ತಾಂತ್ರಿಕ ದೋಷ: ಮಸ್ಕತ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಿರುವನಂತಪುರಂಗೆ ವಾಪಸ್

ಮತ್ತಷ್ಟು ರಾಷ್ಟ್ರೀಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 am, Tue, 24 January 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!