AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sputnik V: ಶೀಘ್ರದಲ್ಲೇ ಬೆಂಗಳೂರು ಸೇರಿ 9 ನಗರಗಳಲ್ಲಿ ಲಭ್ಯವಾಗಲಿದೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ

ಭಾರತದಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಟೆಸ್ಟಿಂಗ್​ ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಬಳಕೆಗೆ ಸಿಗಲಿದೆ. ಪರೀಕ್ಷೆಗಳು ಮುಗಿದ ತಕ್ಷಣ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಮ್ಮ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ ಎಂದು ರೆಡ್ಡೀಸ್ ಲ್ಯಾಬೋರೇಟರಿ ತಿಳಿಸಿದೆ.

Sputnik V: ಶೀಘ್ರದಲ್ಲೇ ಬೆಂಗಳೂರು ಸೇರಿ 9 ನಗರಗಳಲ್ಲಿ ಲಭ್ಯವಾಗಲಿದೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 17, 2021 | 5:51 PM

Share

ದೆಹಲಿ: ರಷ್ಯನ್​ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ವಿ ಇನ್ನು ಕೆಲವೇ ದಿನಗಳಲ್ಲಿ ಒಟ್ಟು 9 ಮಹಾನಗರಗಳಲ್ಲಿ ಲಭ್ಯವಾಗಲಿದೆ ಎಂದು ಡಾ. ರೆಡ್ಡೀಸ್​ ಲ್ಯಾಬೋರೇಟರಿ ಇಂದು ತಿಳಿಸಿದೆ. ದೆಹಲಿ, ಬೆಂಗಳೂರು, ಮುಂಬೈ, ಕೋಲ್ಕತ್ತ, ಚೆನ್ನೈ, ವಿಶಾಖಪಟ್ಟಣಂ, ಬಡ್ಡಿ, ಕೊಲ್ಲಾಪುರ ಮತ್ತು ಮಿರಿಯಲಗುಡ ನಗರಗಳಲ್ಲಿ ವಾಣಿಜ್ಯಾತ್ಮಕ ಮಾರುಕಟ್ಟೆಗಳಲ್ಲಿ ಸಿಗಲಿದೆ ಎಂದು ಡಾ. ರೆಡ್ಡೀಸ್ ಲ್ಯಾಬೋರೇಟರಿ ಹೇಳಿದೆ.

ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ರಷಿಯನ್​ ಡೈರೆಕ್ಟ್ ಇನ್​ವೆಸ್ಟ್​​ಮೆಂಟ್​ ಫಂಡ್​(RDIF)ನೊಂದಿಗೆ ಸಹಯೋಗಹೊಂದಿರುವ ಡಾ. ರೆಡ್ಡೀಸ್​ ಲ್ಯಾಬೋರೇಟರಿಸ್​, ಸ್ಪುಟ್ನಿಕ್​ ವಿ ಪ್ರಾರಂಭದಲ್ಲಿ ಹೈದರಾಬಾದ್​ನಲ್ಲಿ ಮಾತ್ರ ಸಿಗಲಿದೆ ಎಂದು ಹೇಳಿತ್ತು. ಇದೀಗ ಈ 9 ನಗರಗಳಲ್ಲಿ ಕೂಡ ಲಸಿಕೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ನಗರಗಳಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಸಿಗಲಿದೆ ಎಂಬುದನ್ನೂ ರೆಡ್ಡೀಸ್​ ಲ್ಯಾಬೋರೇಟರಿ ಹೇಳಿದೆ.

ಭಾರತದಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಟೆಸ್ಟಿಂಗ್​ ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಬಳಕೆಗೆ ಸಿಗಲಿದೆ. ಪರೀಕ್ಷೆಗಳು ಮುಗಿದ ತಕ್ಷಣ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಮ್ಮ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ. ಹಾಗಂತ ಸದ್ಯಕ್ಕೇನೂ ಜನರಿಗೆ ಕೊವಿನ್ ಆ್ಯಪ್​​ನಲ್ಲಿ ಸ್ಪುಟ್ನಿಕ್ ವಿ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಲಸಿಕೆಯನ್ನು ವಾಣಿಜ್ಯಾತ್ಮಕವಾಗಿ ಬಿಡುಗಡೆ ಮಾಡುವವರೆಗೂ ನೋಂದಣಿಗೆ ಕಾಯಲೇಬೇಕಾಗುತ್ತದೆ ಎಂದು ಲ್ಯಾಬೋರೇಟರಿ ತಿಳಿಸಿದೆ.

ಸದ್ಯ ಕೇಂದ್ರ ಸರ್ಕಾರ ಸ್ಪುಟ್ನಿಕ್​ ವಿ ಲಸಿಕೆಯ ಬೆಲೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್​​ಗೆ 1410 ರೂ.ನಿಗದಿಪಡಿಸಿದೆ. ಈ ಲಸಿಕೆ ಕೊರೊನಾ ವಿರುದ್ಧ ಶೇ. 94.3ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿದೆ.

ಇದನ್ನೂ ಓದಿ: Tokyo Olympics: ಟೋಕಿಯೊ ಒಲಿಂಪಿಕ್ಸ್​ಗೆ ಭಾರತೀಯ ಮಹಿಳಾ ಹಾಕಿ ತಂಡ ಪ್ರಕಟ, 8 ಹೊಸ ಮುಖಗಳಿಗೆ ಅವಕಾಶ

Published On - 5:50 pm, Thu, 17 June 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು