AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sputnik V: ಶೀಘ್ರದಲ್ಲೇ ಬೆಂಗಳೂರು ಸೇರಿ 9 ನಗರಗಳಲ್ಲಿ ಲಭ್ಯವಾಗಲಿದೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ

ಭಾರತದಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಟೆಸ್ಟಿಂಗ್​ ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಬಳಕೆಗೆ ಸಿಗಲಿದೆ. ಪರೀಕ್ಷೆಗಳು ಮುಗಿದ ತಕ್ಷಣ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಮ್ಮ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ ಎಂದು ರೆಡ್ಡೀಸ್ ಲ್ಯಾಬೋರೇಟರಿ ತಿಳಿಸಿದೆ.

Sputnik V: ಶೀಘ್ರದಲ್ಲೇ ಬೆಂಗಳೂರು ಸೇರಿ 9 ನಗರಗಳಲ್ಲಿ ಲಭ್ಯವಾಗಲಿದೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 17, 2021 | 5:51 PM

Share

ದೆಹಲಿ: ರಷ್ಯನ್​ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ವಿ ಇನ್ನು ಕೆಲವೇ ದಿನಗಳಲ್ಲಿ ಒಟ್ಟು 9 ಮಹಾನಗರಗಳಲ್ಲಿ ಲಭ್ಯವಾಗಲಿದೆ ಎಂದು ಡಾ. ರೆಡ್ಡೀಸ್​ ಲ್ಯಾಬೋರೇಟರಿ ಇಂದು ತಿಳಿಸಿದೆ. ದೆಹಲಿ, ಬೆಂಗಳೂರು, ಮುಂಬೈ, ಕೋಲ್ಕತ್ತ, ಚೆನ್ನೈ, ವಿಶಾಖಪಟ್ಟಣಂ, ಬಡ್ಡಿ, ಕೊಲ್ಲಾಪುರ ಮತ್ತು ಮಿರಿಯಲಗುಡ ನಗರಗಳಲ್ಲಿ ವಾಣಿಜ್ಯಾತ್ಮಕ ಮಾರುಕಟ್ಟೆಗಳಲ್ಲಿ ಸಿಗಲಿದೆ ಎಂದು ಡಾ. ರೆಡ್ಡೀಸ್ ಲ್ಯಾಬೋರೇಟರಿ ಹೇಳಿದೆ.

ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ರಷಿಯನ್​ ಡೈರೆಕ್ಟ್ ಇನ್​ವೆಸ್ಟ್​​ಮೆಂಟ್​ ಫಂಡ್​(RDIF)ನೊಂದಿಗೆ ಸಹಯೋಗಹೊಂದಿರುವ ಡಾ. ರೆಡ್ಡೀಸ್​ ಲ್ಯಾಬೋರೇಟರಿಸ್​, ಸ್ಪುಟ್ನಿಕ್​ ವಿ ಪ್ರಾರಂಭದಲ್ಲಿ ಹೈದರಾಬಾದ್​ನಲ್ಲಿ ಮಾತ್ರ ಸಿಗಲಿದೆ ಎಂದು ಹೇಳಿತ್ತು. ಇದೀಗ ಈ 9 ನಗರಗಳಲ್ಲಿ ಕೂಡ ಲಸಿಕೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ನಗರಗಳಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಸಿಗಲಿದೆ ಎಂಬುದನ್ನೂ ರೆಡ್ಡೀಸ್​ ಲ್ಯಾಬೋರೇಟರಿ ಹೇಳಿದೆ.

ಭಾರತದಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಟೆಸ್ಟಿಂಗ್​ ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಬಳಕೆಗೆ ಸಿಗಲಿದೆ. ಪರೀಕ್ಷೆಗಳು ಮುಗಿದ ತಕ್ಷಣ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಮ್ಮ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ. ಹಾಗಂತ ಸದ್ಯಕ್ಕೇನೂ ಜನರಿಗೆ ಕೊವಿನ್ ಆ್ಯಪ್​​ನಲ್ಲಿ ಸ್ಪುಟ್ನಿಕ್ ವಿ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಲಸಿಕೆಯನ್ನು ವಾಣಿಜ್ಯಾತ್ಮಕವಾಗಿ ಬಿಡುಗಡೆ ಮಾಡುವವರೆಗೂ ನೋಂದಣಿಗೆ ಕಾಯಲೇಬೇಕಾಗುತ್ತದೆ ಎಂದು ಲ್ಯಾಬೋರೇಟರಿ ತಿಳಿಸಿದೆ.

ಸದ್ಯ ಕೇಂದ್ರ ಸರ್ಕಾರ ಸ್ಪುಟ್ನಿಕ್​ ವಿ ಲಸಿಕೆಯ ಬೆಲೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್​​ಗೆ 1410 ರೂ.ನಿಗದಿಪಡಿಸಿದೆ. ಈ ಲಸಿಕೆ ಕೊರೊನಾ ವಿರುದ್ಧ ಶೇ. 94.3ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿದೆ.

ಇದನ್ನೂ ಓದಿ: Tokyo Olympics: ಟೋಕಿಯೊ ಒಲಿಂಪಿಕ್ಸ್​ಗೆ ಭಾರತೀಯ ಮಹಿಳಾ ಹಾಕಿ ತಂಡ ಪ್ರಕಟ, 8 ಹೊಸ ಮುಖಗಳಿಗೆ ಅವಕಾಶ

Published On - 5:50 pm, Thu, 17 June 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!