AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sputnik V: ಶೀಘ್ರದಲ್ಲೇ ಬೆಂಗಳೂರು ಸೇರಿ 9 ನಗರಗಳಲ್ಲಿ ಲಭ್ಯವಾಗಲಿದೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ

ಭಾರತದಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಟೆಸ್ಟಿಂಗ್​ ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಬಳಕೆಗೆ ಸಿಗಲಿದೆ. ಪರೀಕ್ಷೆಗಳು ಮುಗಿದ ತಕ್ಷಣ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಮ್ಮ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ ಎಂದು ರೆಡ್ಡೀಸ್ ಲ್ಯಾಬೋರೇಟರಿ ತಿಳಿಸಿದೆ.

Sputnik V: ಶೀಘ್ರದಲ್ಲೇ ಬೆಂಗಳೂರು ಸೇರಿ 9 ನಗರಗಳಲ್ಲಿ ಲಭ್ಯವಾಗಲಿದೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 17, 2021 | 5:51 PM

Share

ದೆಹಲಿ: ರಷ್ಯನ್​ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ವಿ ಇನ್ನು ಕೆಲವೇ ದಿನಗಳಲ್ಲಿ ಒಟ್ಟು 9 ಮಹಾನಗರಗಳಲ್ಲಿ ಲಭ್ಯವಾಗಲಿದೆ ಎಂದು ಡಾ. ರೆಡ್ಡೀಸ್​ ಲ್ಯಾಬೋರೇಟರಿ ಇಂದು ತಿಳಿಸಿದೆ. ದೆಹಲಿ, ಬೆಂಗಳೂರು, ಮುಂಬೈ, ಕೋಲ್ಕತ್ತ, ಚೆನ್ನೈ, ವಿಶಾಖಪಟ್ಟಣಂ, ಬಡ್ಡಿ, ಕೊಲ್ಲಾಪುರ ಮತ್ತು ಮಿರಿಯಲಗುಡ ನಗರಗಳಲ್ಲಿ ವಾಣಿಜ್ಯಾತ್ಮಕ ಮಾರುಕಟ್ಟೆಗಳಲ್ಲಿ ಸಿಗಲಿದೆ ಎಂದು ಡಾ. ರೆಡ್ಡೀಸ್ ಲ್ಯಾಬೋರೇಟರಿ ಹೇಳಿದೆ.

ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ರಷಿಯನ್​ ಡೈರೆಕ್ಟ್ ಇನ್​ವೆಸ್ಟ್​​ಮೆಂಟ್​ ಫಂಡ್​(RDIF)ನೊಂದಿಗೆ ಸಹಯೋಗಹೊಂದಿರುವ ಡಾ. ರೆಡ್ಡೀಸ್​ ಲ್ಯಾಬೋರೇಟರಿಸ್​, ಸ್ಪುಟ್ನಿಕ್​ ವಿ ಪ್ರಾರಂಭದಲ್ಲಿ ಹೈದರಾಬಾದ್​ನಲ್ಲಿ ಮಾತ್ರ ಸಿಗಲಿದೆ ಎಂದು ಹೇಳಿತ್ತು. ಇದೀಗ ಈ 9 ನಗರಗಳಲ್ಲಿ ಕೂಡ ಲಸಿಕೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ನಗರಗಳಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಸಿಗಲಿದೆ ಎಂಬುದನ್ನೂ ರೆಡ್ಡೀಸ್​ ಲ್ಯಾಬೋರೇಟರಿ ಹೇಳಿದೆ.

ಭಾರತದಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಟೆಸ್ಟಿಂಗ್​ ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಬಳಕೆಗೆ ಸಿಗಲಿದೆ. ಪರೀಕ್ಷೆಗಳು ಮುಗಿದ ತಕ್ಷಣ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಮ್ಮ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ. ಹಾಗಂತ ಸದ್ಯಕ್ಕೇನೂ ಜನರಿಗೆ ಕೊವಿನ್ ಆ್ಯಪ್​​ನಲ್ಲಿ ಸ್ಪುಟ್ನಿಕ್ ವಿ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಲಸಿಕೆಯನ್ನು ವಾಣಿಜ್ಯಾತ್ಮಕವಾಗಿ ಬಿಡುಗಡೆ ಮಾಡುವವರೆಗೂ ನೋಂದಣಿಗೆ ಕಾಯಲೇಬೇಕಾಗುತ್ತದೆ ಎಂದು ಲ್ಯಾಬೋರೇಟರಿ ತಿಳಿಸಿದೆ.

ಸದ್ಯ ಕೇಂದ್ರ ಸರ್ಕಾರ ಸ್ಪುಟ್ನಿಕ್​ ವಿ ಲಸಿಕೆಯ ಬೆಲೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್​​ಗೆ 1410 ರೂ.ನಿಗದಿಪಡಿಸಿದೆ. ಈ ಲಸಿಕೆ ಕೊರೊನಾ ವಿರುದ್ಧ ಶೇ. 94.3ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿದೆ.

ಇದನ್ನೂ ಓದಿ: Tokyo Olympics: ಟೋಕಿಯೊ ಒಲಿಂಪಿಕ್ಸ್​ಗೆ ಭಾರತೀಯ ಮಹಿಳಾ ಹಾಕಿ ತಂಡ ಪ್ರಕಟ, 8 ಹೊಸ ಮುಖಗಳಿಗೆ ಅವಕಾಶ

Published On - 5:50 pm, Thu, 17 June 21

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ