AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sputnik V: ಶೀಘ್ರದಲ್ಲೇ ಬೆಂಗಳೂರು ಸೇರಿ 9 ನಗರಗಳಲ್ಲಿ ಲಭ್ಯವಾಗಲಿದೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ

ಭಾರತದಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಟೆಸ್ಟಿಂಗ್​ ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಬಳಕೆಗೆ ಸಿಗಲಿದೆ. ಪರೀಕ್ಷೆಗಳು ಮುಗಿದ ತಕ್ಷಣ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಮ್ಮ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ ಎಂದು ರೆಡ್ಡೀಸ್ ಲ್ಯಾಬೋರೇಟರಿ ತಿಳಿಸಿದೆ.

Sputnik V: ಶೀಘ್ರದಲ್ಲೇ ಬೆಂಗಳೂರು ಸೇರಿ 9 ನಗರಗಳಲ್ಲಿ ಲಭ್ಯವಾಗಲಿದೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 17, 2021 | 5:51 PM

Share

ದೆಹಲಿ: ರಷ್ಯನ್​ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ವಿ ಇನ್ನು ಕೆಲವೇ ದಿನಗಳಲ್ಲಿ ಒಟ್ಟು 9 ಮಹಾನಗರಗಳಲ್ಲಿ ಲಭ್ಯವಾಗಲಿದೆ ಎಂದು ಡಾ. ರೆಡ್ಡೀಸ್​ ಲ್ಯಾಬೋರೇಟರಿ ಇಂದು ತಿಳಿಸಿದೆ. ದೆಹಲಿ, ಬೆಂಗಳೂರು, ಮುಂಬೈ, ಕೋಲ್ಕತ್ತ, ಚೆನ್ನೈ, ವಿಶಾಖಪಟ್ಟಣಂ, ಬಡ್ಡಿ, ಕೊಲ್ಲಾಪುರ ಮತ್ತು ಮಿರಿಯಲಗುಡ ನಗರಗಳಲ್ಲಿ ವಾಣಿಜ್ಯಾತ್ಮಕ ಮಾರುಕಟ್ಟೆಗಳಲ್ಲಿ ಸಿಗಲಿದೆ ಎಂದು ಡಾ. ರೆಡ್ಡೀಸ್ ಲ್ಯಾಬೋರೇಟರಿ ಹೇಳಿದೆ.

ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಲು ರಷಿಯನ್​ ಡೈರೆಕ್ಟ್ ಇನ್​ವೆಸ್ಟ್​​ಮೆಂಟ್​ ಫಂಡ್​(RDIF)ನೊಂದಿಗೆ ಸಹಯೋಗಹೊಂದಿರುವ ಡಾ. ರೆಡ್ಡೀಸ್​ ಲ್ಯಾಬೋರೇಟರಿಸ್​, ಸ್ಪುಟ್ನಿಕ್​ ವಿ ಪ್ರಾರಂಭದಲ್ಲಿ ಹೈದರಾಬಾದ್​ನಲ್ಲಿ ಮಾತ್ರ ಸಿಗಲಿದೆ ಎಂದು ಹೇಳಿತ್ತು. ಇದೀಗ ಈ 9 ನಗರಗಳಲ್ಲಿ ಕೂಡ ಲಸಿಕೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ನಗರಗಳಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಸಿಗಲಿದೆ ಎಂಬುದನ್ನೂ ರೆಡ್ಡೀಸ್​ ಲ್ಯಾಬೋರೇಟರಿ ಹೇಳಿದೆ.

ಭಾರತದಲ್ಲಿ ಸ್ಪುಟ್ನಿಕ್​ ವಿ ಲಸಿಕೆ ಟೆಸ್ಟಿಂಗ್​ ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಬಳಕೆಗೆ ಸಿಗಲಿದೆ. ಪರೀಕ್ಷೆಗಳು ಮುಗಿದ ತಕ್ಷಣ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಮ್ಮ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ. ಹಾಗಂತ ಸದ್ಯಕ್ಕೇನೂ ಜನರಿಗೆ ಕೊವಿನ್ ಆ್ಯಪ್​​ನಲ್ಲಿ ಸ್ಪುಟ್ನಿಕ್ ವಿ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಲಸಿಕೆಯನ್ನು ವಾಣಿಜ್ಯಾತ್ಮಕವಾಗಿ ಬಿಡುಗಡೆ ಮಾಡುವವರೆಗೂ ನೋಂದಣಿಗೆ ಕಾಯಲೇಬೇಕಾಗುತ್ತದೆ ಎಂದು ಲ್ಯಾಬೋರೇಟರಿ ತಿಳಿಸಿದೆ.

ಸದ್ಯ ಕೇಂದ್ರ ಸರ್ಕಾರ ಸ್ಪುಟ್ನಿಕ್​ ವಿ ಲಸಿಕೆಯ ಬೆಲೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್​​ಗೆ 1410 ರೂ.ನಿಗದಿಪಡಿಸಿದೆ. ಈ ಲಸಿಕೆ ಕೊರೊನಾ ವಿರುದ್ಧ ಶೇ. 94.3ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿದೆ.

ಇದನ್ನೂ ಓದಿ: Tokyo Olympics: ಟೋಕಿಯೊ ಒಲಿಂಪಿಕ್ಸ್​ಗೆ ಭಾರತೀಯ ಮಹಿಳಾ ಹಾಕಿ ತಂಡ ಪ್ರಕಟ, 8 ಹೊಸ ಮುಖಗಳಿಗೆ ಅವಕಾಶ

Published On - 5:50 pm, Thu, 17 June 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?