AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಆಸ್ಪತ್ರೆಗಳಲ್ಲಿ ಇಂದಿನಿಂದ ಲಭ್ಯ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ; ಒಂದು ಡೋಸ್​ಗೆ ದರವೆಷ್ಟು?

Sputnik V: ಮೂರೂ ಲಸಿಕೆಗಳೂ ಹೆಚ್ಚು-ಕಡಿಮೆ ಒಂದೇ ರೀತಿಯಲ್ಲಿ ಪರಿಣಾಮಕಾರಿಯಾಗಿದ್ದು, ಜನರು ತಮ್ಮ ಏರಿಯಾಗಳಲ್ಲಿ ಯಾವುದು ಸಿಗುತ್ತಿದೆಯೋ ಅದನ್ನು ಪಡೆಯಬೇಕು ಎದು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ತಿಳಿಸಿದ್ದಾರೆ.

ದೆಹಲಿಯ ಆಸ್ಪತ್ರೆಗಳಲ್ಲಿ ಇಂದಿನಿಂದ ಲಭ್ಯ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ; ಒಂದು ಡೋಸ್​ಗೆ ದರವೆಷ್ಟು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 9:05 AM

Share

ದೆಹಲಿ: ರಷ್ಯಾದ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ವಿ ಲಸಿಕೆ ಇಂದಿನಿಂದ ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಲಸಿಕೆಯನ್ನು ರಷ್ಯಾದ ಗಮಲೇಯ ನ್ಯಾಷನಲ್ ರಿಸರ್ಚ್ ಇನ್​​ಸ್ಟಿಟ್ಯೂಟ್​ ಆಫ್ ಎಪಿಡೆಮಿಯಾಲಜಿ ಆ್ಯಂಡ್​ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದೆ. ಕೊವಿಡ್​ 19 ವಿರುದ್ಧ ಶೇ. 91.6ರಷ್ಟು ಪರಿಣಾಮಕಾರಿ ಎನ್ನಲಾಗಿದ್ದು, ಭಾರತದಲ್ಲಿ ಲಭ್ಯವಾಗುತ್ತಿರುವ ಕೊವಿಡ್​ 19 ಲಸಿಕೆಗಳಲ್ಲೇ ಇದು ಹೆಚ್ಚು ಪರಿಣಾಮಕಾರಿಯಾಗಿದೆ. ಸ್ಪುಟ್ನಿಕ್​ ವಿ ಲಸಿಕೆಯನ್ನು ಕಳೆದ ತಿಂಗಳು ಮೊದಲ ಹಂತದಲ್ಲಿ ಹೈದರಾಬಾದ್​​ಗೆ ತರಲಾಗಿತ್ತು.

ಈ ಬಾರಿ ದೆಹಲಿಗೆ ತರಿಸಲಾಗಿದ್ದು, ಅಪೋಲೋ, ಮಧುಕರ್​ ರೇನ್​ಬೋ ಮಕ್ಕಳ ಆಸ್ಪತ್ರೆಗಳಲ್ಲಿ ರಷ್ಯನ್​ ಲಸಿಕೆ ಸ್ಪುಟ್ನಿಕ್​ ವಿ ನೀಡಲಾಗುವುದು ಎಂದು ಹೇಳಲಾಗಿದೆ. ಈ ವ್ಯಾಕ್ಸಿನ್​​ಗೆ ಒಂದು ಡೋಸ್​​ಗೆ 1,145 ರೂ.ವನ್ನು ಸರ್ಕಾರ ನಿಗದಿಪಡಿಸಿದೆ

ಹೆಚ್ಚು-ಕಡಿಮೆ ಎಲ್ಲವೂ ಒಂದೇ ಇನ್ನು ಮೂರು ಲಸಿಕೆಗಳು ಎಷ್ಟು ಪರಿಣಾಮಕಾರಿ ಎಂಬ ಬಗ್ಗೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ಅದು ಹೆಚ್ಚು ಪರಿಣಾಮಕಾರಿ..ಇದು ಕಡಿಮೆ ಎಂಬ ಗಾಳಿಸುದ್ದಿಗಳೂ ಹರಡುತ್ತಿವೆ. ಆದರೆ ಮೂರೂ ಲಸಿಕೆಗಳೂ ಹೆಚ್ಚು-ಕಡಿಮೆ ಒಂದೇ ರೀತಿಯಲ್ಲಿ ಪರಿಣಾಮಕಾರಿಯಾಗಿದ್ದು, ಜನರು ತಮ್ಮ ಏರಿಯಾಗಳಲ್ಲಿ ಯಾವುದು ಸಿಗುತ್ತಿದೆಯೋ ಅದನ್ನು ಪಡೆಯಬೇಕು. ಯಾಕೆಂದರೆ ಮೂರೂ ಲಸಿಕೆಗಳೂ ಕೊರೊನಾದಿಂದ ನಿಮ್ಮನ್ನು ಸುರಕ್ಷಿತರನ್ನಾಗಿ ಮಾಡುತ್ತವೆ ಎಂದು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್​ ಹೆಸರಿನಲ್ಲಿ ಸುಳ್ಳು ಪತ್ರ ತೋರಿಸಿ ಬೆಂಗಳೂರಿನ ಮಹಿಳೆಗೆ 80 ಲಕ್ಷ ರೂಪಾಯಿ ವಂಚಿಸಿದ ನಕಲಿ ವೈದ್ಯ

Sputnik V Likely to be Available at Delhi hospitals from today

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್