AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಆಸ್ಪತ್ರೆಗಳಲ್ಲಿ ಇಂದಿನಿಂದ ಲಭ್ಯ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ; ಒಂದು ಡೋಸ್​ಗೆ ದರವೆಷ್ಟು?

Sputnik V: ಮೂರೂ ಲಸಿಕೆಗಳೂ ಹೆಚ್ಚು-ಕಡಿಮೆ ಒಂದೇ ರೀತಿಯಲ್ಲಿ ಪರಿಣಾಮಕಾರಿಯಾಗಿದ್ದು, ಜನರು ತಮ್ಮ ಏರಿಯಾಗಳಲ್ಲಿ ಯಾವುದು ಸಿಗುತ್ತಿದೆಯೋ ಅದನ್ನು ಪಡೆಯಬೇಕು ಎದು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ತಿಳಿಸಿದ್ದಾರೆ.

ದೆಹಲಿಯ ಆಸ್ಪತ್ರೆಗಳಲ್ಲಿ ಇಂದಿನಿಂದ ಲಭ್ಯ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ; ಒಂದು ಡೋಸ್​ಗೆ ದರವೆಷ್ಟು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 9:05 AM

Share

ದೆಹಲಿ: ರಷ್ಯಾದ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ವಿ ಲಸಿಕೆ ಇಂದಿನಿಂದ ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಲಸಿಕೆಯನ್ನು ರಷ್ಯಾದ ಗಮಲೇಯ ನ್ಯಾಷನಲ್ ರಿಸರ್ಚ್ ಇನ್​​ಸ್ಟಿಟ್ಯೂಟ್​ ಆಫ್ ಎಪಿಡೆಮಿಯಾಲಜಿ ಆ್ಯಂಡ್​ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದೆ. ಕೊವಿಡ್​ 19 ವಿರುದ್ಧ ಶೇ. 91.6ರಷ್ಟು ಪರಿಣಾಮಕಾರಿ ಎನ್ನಲಾಗಿದ್ದು, ಭಾರತದಲ್ಲಿ ಲಭ್ಯವಾಗುತ್ತಿರುವ ಕೊವಿಡ್​ 19 ಲಸಿಕೆಗಳಲ್ಲೇ ಇದು ಹೆಚ್ಚು ಪರಿಣಾಮಕಾರಿಯಾಗಿದೆ. ಸ್ಪುಟ್ನಿಕ್​ ವಿ ಲಸಿಕೆಯನ್ನು ಕಳೆದ ತಿಂಗಳು ಮೊದಲ ಹಂತದಲ್ಲಿ ಹೈದರಾಬಾದ್​​ಗೆ ತರಲಾಗಿತ್ತು.

ಈ ಬಾರಿ ದೆಹಲಿಗೆ ತರಿಸಲಾಗಿದ್ದು, ಅಪೋಲೋ, ಮಧುಕರ್​ ರೇನ್​ಬೋ ಮಕ್ಕಳ ಆಸ್ಪತ್ರೆಗಳಲ್ಲಿ ರಷ್ಯನ್​ ಲಸಿಕೆ ಸ್ಪುಟ್ನಿಕ್​ ವಿ ನೀಡಲಾಗುವುದು ಎಂದು ಹೇಳಲಾಗಿದೆ. ಈ ವ್ಯಾಕ್ಸಿನ್​​ಗೆ ಒಂದು ಡೋಸ್​​ಗೆ 1,145 ರೂ.ವನ್ನು ಸರ್ಕಾರ ನಿಗದಿಪಡಿಸಿದೆ

ಹೆಚ್ಚು-ಕಡಿಮೆ ಎಲ್ಲವೂ ಒಂದೇ ಇನ್ನು ಮೂರು ಲಸಿಕೆಗಳು ಎಷ್ಟು ಪರಿಣಾಮಕಾರಿ ಎಂಬ ಬಗ್ಗೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ಅದು ಹೆಚ್ಚು ಪರಿಣಾಮಕಾರಿ..ಇದು ಕಡಿಮೆ ಎಂಬ ಗಾಳಿಸುದ್ದಿಗಳೂ ಹರಡುತ್ತಿವೆ. ಆದರೆ ಮೂರೂ ಲಸಿಕೆಗಳೂ ಹೆಚ್ಚು-ಕಡಿಮೆ ಒಂದೇ ರೀತಿಯಲ್ಲಿ ಪರಿಣಾಮಕಾರಿಯಾಗಿದ್ದು, ಜನರು ತಮ್ಮ ಏರಿಯಾಗಳಲ್ಲಿ ಯಾವುದು ಸಿಗುತ್ತಿದೆಯೋ ಅದನ್ನು ಪಡೆಯಬೇಕು. ಯಾಕೆಂದರೆ ಮೂರೂ ಲಸಿಕೆಗಳೂ ಕೊರೊನಾದಿಂದ ನಿಮ್ಮನ್ನು ಸುರಕ್ಷಿತರನ್ನಾಗಿ ಮಾಡುತ್ತವೆ ಎಂದು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್​ ಹೆಸರಿನಲ್ಲಿ ಸುಳ್ಳು ಪತ್ರ ತೋರಿಸಿ ಬೆಂಗಳೂರಿನ ಮಹಿಳೆಗೆ 80 ಲಕ್ಷ ರೂಪಾಯಿ ವಂಚಿಸಿದ ನಕಲಿ ವೈದ್ಯ

Sputnik V Likely to be Available at Delhi hospitals from today

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ