AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಆಸ್ಪತ್ರೆಗಳಲ್ಲಿ ಇಂದಿನಿಂದ ಲಭ್ಯ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ; ಒಂದು ಡೋಸ್​ಗೆ ದರವೆಷ್ಟು?

Sputnik V: ಮೂರೂ ಲಸಿಕೆಗಳೂ ಹೆಚ್ಚು-ಕಡಿಮೆ ಒಂದೇ ರೀತಿಯಲ್ಲಿ ಪರಿಣಾಮಕಾರಿಯಾಗಿದ್ದು, ಜನರು ತಮ್ಮ ಏರಿಯಾಗಳಲ್ಲಿ ಯಾವುದು ಸಿಗುತ್ತಿದೆಯೋ ಅದನ್ನು ಪಡೆಯಬೇಕು ಎದು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ತಿಳಿಸಿದ್ದಾರೆ.

ದೆಹಲಿಯ ಆಸ್ಪತ್ರೆಗಳಲ್ಲಿ ಇಂದಿನಿಂದ ಲಭ್ಯ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ; ಒಂದು ಡೋಸ್​ಗೆ ದರವೆಷ್ಟು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 9:05 AM

Share

ದೆಹಲಿ: ರಷ್ಯಾದ ಕೊವಿಡ್​ 19 ಲಸಿಕೆ ಸ್ಪುಟ್ನಿಕ್​ ವಿ ಲಸಿಕೆ ಇಂದಿನಿಂದ ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಲಸಿಕೆಯನ್ನು ರಷ್ಯಾದ ಗಮಲೇಯ ನ್ಯಾಷನಲ್ ರಿಸರ್ಚ್ ಇನ್​​ಸ್ಟಿಟ್ಯೂಟ್​ ಆಫ್ ಎಪಿಡೆಮಿಯಾಲಜಿ ಆ್ಯಂಡ್​ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದೆ. ಕೊವಿಡ್​ 19 ವಿರುದ್ಧ ಶೇ. 91.6ರಷ್ಟು ಪರಿಣಾಮಕಾರಿ ಎನ್ನಲಾಗಿದ್ದು, ಭಾರತದಲ್ಲಿ ಲಭ್ಯವಾಗುತ್ತಿರುವ ಕೊವಿಡ್​ 19 ಲಸಿಕೆಗಳಲ್ಲೇ ಇದು ಹೆಚ್ಚು ಪರಿಣಾಮಕಾರಿಯಾಗಿದೆ. ಸ್ಪುಟ್ನಿಕ್​ ವಿ ಲಸಿಕೆಯನ್ನು ಕಳೆದ ತಿಂಗಳು ಮೊದಲ ಹಂತದಲ್ಲಿ ಹೈದರಾಬಾದ್​​ಗೆ ತರಲಾಗಿತ್ತು.

ಈ ಬಾರಿ ದೆಹಲಿಗೆ ತರಿಸಲಾಗಿದ್ದು, ಅಪೋಲೋ, ಮಧುಕರ್​ ರೇನ್​ಬೋ ಮಕ್ಕಳ ಆಸ್ಪತ್ರೆಗಳಲ್ಲಿ ರಷ್ಯನ್​ ಲಸಿಕೆ ಸ್ಪುಟ್ನಿಕ್​ ವಿ ನೀಡಲಾಗುವುದು ಎಂದು ಹೇಳಲಾಗಿದೆ. ಈ ವ್ಯಾಕ್ಸಿನ್​​ಗೆ ಒಂದು ಡೋಸ್​​ಗೆ 1,145 ರೂ.ವನ್ನು ಸರ್ಕಾರ ನಿಗದಿಪಡಿಸಿದೆ

ಹೆಚ್ಚು-ಕಡಿಮೆ ಎಲ್ಲವೂ ಒಂದೇ ಇನ್ನು ಮೂರು ಲಸಿಕೆಗಳು ಎಷ್ಟು ಪರಿಣಾಮಕಾರಿ ಎಂಬ ಬಗ್ಗೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ಅದು ಹೆಚ್ಚು ಪರಿಣಾಮಕಾರಿ..ಇದು ಕಡಿಮೆ ಎಂಬ ಗಾಳಿಸುದ್ದಿಗಳೂ ಹರಡುತ್ತಿವೆ. ಆದರೆ ಮೂರೂ ಲಸಿಕೆಗಳೂ ಹೆಚ್ಚು-ಕಡಿಮೆ ಒಂದೇ ರೀತಿಯಲ್ಲಿ ಪರಿಣಾಮಕಾರಿಯಾಗಿದ್ದು, ಜನರು ತಮ್ಮ ಏರಿಯಾಗಳಲ್ಲಿ ಯಾವುದು ಸಿಗುತ್ತಿದೆಯೋ ಅದನ್ನು ಪಡೆಯಬೇಕು. ಯಾಕೆಂದರೆ ಮೂರೂ ಲಸಿಕೆಗಳೂ ಕೊರೊನಾದಿಂದ ನಿಮ್ಮನ್ನು ಸುರಕ್ಷಿತರನ್ನಾಗಿ ಮಾಡುತ್ತವೆ ಎಂದು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್​ ಹೆಸರಿನಲ್ಲಿ ಸುಳ್ಳು ಪತ್ರ ತೋರಿಸಿ ಬೆಂಗಳೂರಿನ ಮಹಿಳೆಗೆ 80 ಲಕ್ಷ ರೂಪಾಯಿ ವಂಚಿಸಿದ ನಕಲಿ ವೈದ್ಯ

Sputnik V Likely to be Available at Delhi hospitals from today

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​