AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಮನೆಯ ಬೆಡ್​ರೂಂ, ಬಾತ್​ರೂಂನಲ್ಲೂ ಕ್ಯಾಮೆರಾ ಇಟ್ಟಿದ್ದ ಮನೆ ಮಾಲೀಕನ ಮಗ, ಸಿಕ್ಕಿಬಿದ್ದಿದ್ಹೇಗೆ?

ಯುಪಿಎಸ್​ಸಿ ಪರೀಕ್ಷೆಗೆ ತಯಾರಿ ನಡೆಸಲು ವಿದ್ಯಾರ್ಥಿನಿಯೊಬ್ಬಳು ದೆಹಲಿಗೆ ಬಂದಿದ್ದಳು. ಅಲ್ಲಿನ ಶಕರ್​ಪುರದಲ್ಲಿ ಬಾಡಿಗೆ ಮನೆಯೊಂದಕ್ಕೆ ಬಾಡಿಗೆಗೆಂದು ಹೋಗಿದ್ದಳು. ಅದೇ ಕಟ್ಟಡದ ಎರಡನೇ ಮಹಡಿಯಲ್ಲಿ ಮನೆ ಮಾಲೀಕನ ಮಗ ವಾಸವಾಗಿದ್ದ. ಒಂದು ಬಾರಿ ಆಕೆ ಉತ್ತರ ಪ್ರದೇಶದಲ್ಲಿರುವ ತನ್ನ ಮನೆಗೆ ಹೋಗುವಾಗ ಮನೆಯ ಕೀಗಳನ್ನು ಆತನಿಗೆ ಕೊಟ್ಟಿದ್ದಳು.

ಬಾಡಿಗೆ ಮನೆಯ ಬೆಡ್​ರೂಂ, ಬಾತ್​ರೂಂನಲ್ಲೂ ಕ್ಯಾಮೆರಾ ಇಟ್ಟಿದ್ದ ಮನೆ ಮಾಲೀಕನ ಮಗ, ಸಿಕ್ಕಿಬಿದ್ದಿದ್ಹೇಗೆ?
ಕ್ಯಾಮೆರಾ
ನಯನಾ ರಾಜೀವ್
|

Updated on: Sep 25, 2024 | 10:51 AM

Share

ಯುಪಿಎಸ್​ಸಿ ಪರೀಕ್ಷೆಗೆ ತಯಾರಿ ನಡೆಸಲು ವಿದ್ಯಾರ್ಥಿನಿಯೊಬ್ಬಳು ದೆಹಲಿಗೆ ಬಂದಿದ್ದಳು. ಅಲ್ಲಿನ ಶಕರ್​ಪುರದಲ್ಲಿ  ಮನೆಯೊಂದಕ್ಕೆ ಬಾಡಿಗೆಗೆಂದು ಹೋಗಿದ್ದಳು. ಅದೇ ಕಟ್ಟಡದ ಎರಡನೇ ಮಹಡಿಯಲ್ಲಿ ಮನೆ ಮಾಲೀಕನ ಮಗ ವಾಸವಾಗಿದ್ದ. ಒಂದು ಬಾರಿ ಆಕೆ ಉತ್ತರ ಪ್ರದೇಶದಲ್ಲಿರುವ ತನ್ನ ಮನೆಗೆ ಹೋಗುವಾಗ ಮನೆಯ ಕೀಗಳನ್ನು ಆತನಿಗೆ ಕೊಟ್ಟಿದ್ದಳು. ವಾಪಸ್ ಬಂದಾಗ ತನ್ನ ವಾಟ್ಸಾಪ್​ ಬೇರೊಂದು ಲ್ಯಾಪ್​ಟಾಪ್​ನಲ್ಲೂ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಅರಿತು ದಂಗಾಗಿದ್ದಳು. ತಕ್ಷಣವೇ ಆಕೆ ಲಾಗ್​ಔಟ್ ಆಗಿದ್ದಳು.

ನಂತರ ಜಾಗೃತಳಾದ ಆಕೆ ತನ್ನ ಮೇಲೆ ಯಾರೋ ಕಣ್ಣಿಟ್ಟಿದ್ದಾರೆ ಎಂಬುದನ್ನು ಅರಿತಳು, ಯಾವುದೇ ಸಾಧನದ ಮೂಲಕ ತನ್ನ ಮೇಲೆ ನಿಗಾ ಇರಿಸಿರುಬಹುದು ಎಂದು ಕೊಠಡಿ ತುಂಬಾ ಹುಡುಕಾಟ ನಡೆಸಿದ್ದಾಳೆ. ಹೀಗಾಗಿ ಈ ವೇಳೆ ಕೊಠಡಿಯ ಬಾತ್ ರೂಂನ ಬಲ್ಬ್ ಹೋಲ್ಡರ್ ನಲ್ಲಿ ಕ್ಯಾಮೆರಾ ಅಳವಡಿಸಿರುವುದು ಕಂಡು ಪಿಸಿಆರ್ ಕರೆ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ.

ಮಹಿಳಾ ಸಬ್ ಇನ್ಸ್‌ಪೆಕ್ಟರ್ ನಿರುಪಮಾ ಅವರ ಮನೆಗೆ ಆಗಮಿಸಿ ಮತ್ತೆ ಮನೆಯನ್ನು ಹುಡುಕಿದಾಗ ಅವರ ಮಲಗುವ ಕೋಣೆಯ ಬಲ್ಬ್ ಹೋಲ್ಡರ್‌ನಲ್ಲಿ ಮತ್ತೊಂದು ಕ್ಯಾಮೆರಾ ಅಳವಡಿಸಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆಕೆಯ ಕೋಣೆಗೆ ಬೇರೆ ಯಾರಾದರೂ ಬಂದಿದ್ದಾರೆಯೇ ಎಂದು ಪೊಲೀಸರು ಕೇಳಿದಾಗ, ಅವಳು ಮನೆಯಿಂದ ಹೊರಗೆ ಹೋದಾಗಲೆಲ್ಲಾ ಕೋಣೆಯ ಕೀಲಿಗಳನ್ನು ಮನೆ ಮಾಲೀಕನ ಮಗನಿಗೆ ನೀಡುತ್ತಿರುವುದಾಗಿ ತಿಳಿಸಿದ್ದಾಳೆ. ಈ ವಿಚಾರವಾಗಿ ಕರಣ್​ ಎಂಬಾತನನ್ನು ವಿಚಾರಿಸಿದಾಗ, ಒಂದು ತಿಂಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ, ಕೀಗಳನ್ನು ಕೊಟ್ಟಿದ್ದಳು, ಆ ಸಂದರ್ಭವನ್ನೇ ಬಳಸಿಕೊಂಡು ಹಿಡನ್ ಕ್ಯಾಮರಾಗಳನ್ನು ತಂದು ಬಾತ್​ರೂಂ ಹಾಗೂ ಕೋಣೆಯಲ್ಲಿ ಅಳವಡಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Viral: ಇದು ಡಿಜಿಟಲ್ ಇಂಡಿಯಾ ಕಣ್ರೀ; ಸ್ಮಾರ್ಟ್ ವಾಚ್ ಕ್ಯೂಆರ್ ಕೋಡ್ ಮೂಲಕ ಹಣ ಸ್ವೀಕರಿಸುತ್ತಾರೆ ಬೆಂಗಳೂರಿನ ಈ ಆಟೋ ಚಾಲಕ

ಆ ಕ್ಯಾಮರಾಗಳಲ್ಲಿ ಮೆಮೊರಿ ಚಿಪ್​ ಕೂಡ ಇತ್ತು, ಇದರಿಂದಾಗಿ ಆನ್​ಲೈನ್ ಮೂಲಕ ವೀಕ್ಷಿಸುತ್ತಿದ್ದ, ಚಿಪ್‌ಗಳನ್ನು ಪಡೆಯಲು ಆರೋಪಿ ಕರಣ್ ವಿದ್ಯುತ್ ರಿಪೇರಿ ಮಾಡುವ ನೆಪದಲ್ಲಿ ಆಕೆಯ ಕೋಣೆಗೆ ಹೋಗಲು ಪದೇ ಪದೇ ಕೀ ಕೇಳುತ್ತಿದ್ದ.ಇದರಿಂದ ರೆಕಾರ್ಡ್ ಮಾಡಿದ ವೀಡಿಯೊಗಳನ್ನು ತನ್ನ ಲ್ಯಾಪ್‌ಟಾಪ್‌ಗೆ ವರ್ಗಾಯಿಸಬಹುದು.

ಲ್ಯಾಪ್‌ಟಾಪ್‌ಗಳಲ್ಲಿ ಇರಿಸಿದ್ದ ಸ್ಪೈ ಕ್ಯಾಮೆರಾ ಮತ್ತು ರೆಕಾರ್ಡ್ ಮಾಡಿದ ವಿಡಿಯೋ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಕಾಯಿದೆಯಡಿ ಅಂಗವಿಕಲ ವ್ಯಕ್ತಿಯಾಗಿರುವ 30 ವರ್ಷದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕಾನೂನಿನ ಪ್ರಕಾರ ಕನಿಷ್ಠ ಒಂದು ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ