AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕೆ ಭಾರತೀಯ ಸೇನೆಯ ವಿವರಗಳನ್ನು ಹಂಚಿಕೊಳ್ಳುತ್ತಿದ್ದ ಗುಜರಾತ್ ವ್ಯಕ್ತಿಯ ಬಂಧನ

ಪಾಕಿಸ್ತಾನಕ್ಕೆ ಭಾರತೀಯ ಸೇನೆಯ ವಿವರಗಳನ್ನು ಹಂಚಿಕೊಳ್ಳುತ್ತಿದ್ದ ಗುಜರಾತ್​ ವ್ಯಕ್ತಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಆನಂದ್ ಜಿಲ್ಲೆಯ ತಾಪುರ್ ಪಟ್ಟಣದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರ್ಮಿ ಪಬ್ಲಿಕ್ ಸ್ಕೂಲ್‌ನ ಅಧಿಕಾರಿಯಾಗಿ ಪೋಸ್ ನೀಡಿದ ಮಹೇಶ್ವರಿ ಎಂಬುವವರು ಹರ್​ ಘರ್ ತಿರಂಗಾ ಅಭಿಯಾನದ ಭಾಗ ಎಂದು ಹೇಳಿ ಸ್ಪರ್ಧೆಯಲ್ಲಿ ಭಾಗವಹಿಸಲು ತಮ್ಮ ಮಕ್ಕಳ ಫೋಟೋಗಳನ್ನು ರಾಷ್ಟ್ರಧ್ವಜದೊಂದಿಗೆ ಅಪ್‌ಲೋಡ್ ಮಾಡಲು ಪ್ರೋತ್ಸಾಹಿಸಿದರು.

ಪಾಕಿಸ್ತಾನಕ್ಕೆ ಭಾರತೀಯ ಸೇನೆಯ ವಿವರಗಳನ್ನು ಹಂಚಿಕೊಳ್ಳುತ್ತಿದ್ದ ಗುಜರಾತ್ ವ್ಯಕ್ತಿಯ ಬಂಧನ
ATSImage Credit source: India Today
ನಯನಾ ರಾಜೀವ್
|

Updated on: Oct 20, 2023 | 3:56 PM

Share

ಪಾಕಿಸ್ತಾನ(Pakistan)ಕ್ಕೆ ಭಾರತೀಯ ಸೇನೆ(Indian Army)ಯ ವಿವರಗಳನ್ನು ಹಂಚಿಕೊಳ್ಳುತ್ತಿದ್ದ ಗುಜರಾತ್​ ವ್ಯಕ್ತಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಆನಂದ್ ಜಿಲ್ಲೆಯ ತಾಪುರ್ ಪಟ್ಟಣದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರ್ಮಿ ಪಬ್ಲಿಕ್ ಸ್ಕೂಲ್‌ನ ಅಧಿಕಾರಿಯಾಗಿ ಪೋಸ್ ನೀಡಿದ ಮಹೇಶ್ವರಿ ಎಂಬುವವರು ಹರ್​ ಘರ್ ತಿರಂಗಾ ಅಭಿಯಾನದ ಭಾಗ ಎಂದು ಹೇಳಿ ಸ್ಪರ್ಧೆಯಲ್ಲಿ ಭಾಗವಹಿಸಲು ತಮ್ಮ ಮಕ್ಕಳ ಫೋಟೋಗಳನ್ನು ರಾಷ್ಟ್ರಧ್ವಜದೊಂದಿಗೆ ಅಪ್‌ಲೋಡ್ ಮಾಡಲು ಪ್ರೋತ್ಸಾಹಿಸಿದರು.

ಆರೋಪಿಗಳು ನಿರ್ದಿಷ್ಟವಾಗಿ ದೇಶಾದ್ಯಂತ ವಿವಿಧ ಸೇನಾ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳನ್ನು ಗುರಿಯಾಗಿಸಿಕೊಂಡಿದ್ದಾರೆ. ಆರ್ಮಿ ಪಬ್ಲಿಕ್ ಸ್ಕೂಲ್‌ನ ಅಧಿಕಾರಿ ಎಂದು ಹೇಳಿ ಮಹೇಶ್ವರಿ ನಂತರ ತನ್ನ ನಂಬರ್​ಗೆ ಸಂದೇಶಗಳನ್ನು ಕಳುಹಿಸುವಂತೆ ಕೇಳಿದ್ದಾರೆ, ಸ್ಪರ್ಧೆಯಲ್ಲಿ ಭಾಗವಹಿಸಲು ತಮ್ಮ ಮಕ್ಕಳ ಫೋಟೋಗಳನ್ನು ರಾಷ್ಟ್ರಧ್ವಜದೊಂದಿಗೆ ಅಪ್‌ಲೋಡ್ ಮಾಡುವಂತೆ ಕೇಳಿದ್ದರು.

ಮಿಲಿಟರಿ ಇಂಟೆಲಿಜೆನ್ಸ್‌ನ ಅಧಿಕಾರಿಗಳು ಗುಜರಾತ್‌ಗೆ ಈ ಮೊಬೈಲ್ ಸಂಖ್ಯೆ ಇರುವ ಸ್ಥಳವನ್ನು ಪತ್ತೆಹಚ್ಚಿದರು ಮತ್ತು ಆರೋಪಿಯನ್ನು ಹಿಡಿಯಲು ಎಟಿಎಸ್‌ನ ಸಹಾಯವನ್ನು ಕೋರಿದರು.

ಮಹೇಶ್ವರಿ ಅವರು ಭಾರತೀಯ ರಕ್ಷಣಾ ಸಿಬ್ಬಂದಿಗೆ ಸಂಬಂಧಿಸಿದ ಸಂಪರ್ಕ ಸಂಖ್ಯೆಗಳನ್ನು ಪಾಕಿಸ್ತಾನಿ ಏಜೆನ್ಸಿಗೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ.

ಮತ್ತಷ್ಟು ಓದಿ:ಪಾಕಿಸ್ತಾನ: ಪಠಾಣ್​ಕೋಟ್​ ದಾಳಿಯ ಮಾಸ್ಟರ್​ಮೈಂಡ್​ ಶಾಹಿದ್ ಲತೀಫ್​ ಹತ್ಯೆ

ಆತನ ಬಂಧನದ ನಂತರ, ಪಾಕಿಸ್ತಾನಿ ಗುಪ್ತಚರ ಸಂಸ್ಥೆಯೊಂದಿಗೆ ಆತನ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಲು ತನಿಖೆಗಳು ನಡೆಯುತ್ತಿವೆ. ಎಟಿಎಸ್ ಕೂಡ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕೋರುವ ನಿರೀಕ್ಷೆ ಇದೆ. ಮಹೇಶ್ವರಿ, ಮೂಲತಃ ಪಾಕಿಸ್ತಾನಿ ಹಿಂದೂ ಆಗಿದ್ದು, 1999 ರಲ್ಲಿ ತನ್ನ ಪತ್ನಿಯೊಂದಿಗೆ ಭಾರತಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ತಾರಾಪುರದಲ್ಲಿ ತಮ್ಮ ಅತ್ತೆಯ ಮನೆಯಲ್ಲಿ ಉಳಿದುಕೊಂಡರು ಮತ್ತು ದೀರ್ಘಾವಧಿಯ ಭಾರತೀಯ ವೀಸಾಗೆ ಅರ್ಜಿ ಸಲ್ಲಿಸಿದರು. ನಂತರ ಅವರಿಗೆ 2006 ರಲ್ಲಿ ಭಾರತೀಯ ಪೌರತ್ವವನ್ನು ನೀಡಲಾಯಿತು. ಕಳೆದ ವರ್ಷ ಮಹೇಶ್ವರಿ ಪಾಕಿಸ್ತಾನದಲ್ಲಿರುವ ತನ್ನ ಪೋಷಕರನ್ನು ಭೇಟಿ ಮಾಡಿದಾಗ, ಅವರು ಪಾಕಿಸ್ತಾನದ ಗುಪ್ತಚರ ಸಂಸ್ಥೆಯೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್