AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಾಸಾಗರ ಪ್ರವೇಶಿಸಿದ ಚೀನಾದ ಬೇಹುಗಾರಿಕಾ ಹಡಗು

ಚೀನಾದ ಶಕ್ತಿಶಾಲಿ ಬೇಹುಗಾರಿಕಾ ಹಡಗು ಶಿ ಯಾನ್ 6 ಹಿಂದೂ ಮಹಾಸಾಗರವನ್ನು ಪ್ರವೇಶಿಸಿ ಭಾರತದತ್ತ ಸಾಗುತ್ತಿದೆ. ಮಿಶ್ರ ಸಂದೇಶವನ್ನು ಕಳುಹಿಸುವ ಮೂಲಕ ಶ್ರೀಲಂಕಾ ಈ ಮಾಹಿತಿ ಹಂಚಿಕೊಂಡಿದೆ. ಪ್ರಸ್ತುತ ಈ ಹಡಗು ಹಿಂದೂ ಮಹಾಸಾಗರದ ಮಧ್ಯದಲ್ಲಿ 90 ಡಿಗ್ರಿ ಪೂರ್ವ ರೇಖಾಂಶದ ತುದಿಯಲ್ಲಿದೆ ಮತ್ತು ನಿರಂತರವಾಗಿ ಶ್ರೀಲಂಕಾ ಕಡೆ ಚವಲಿಸುತ್ತಿದೆ. ಶಿ ಯಾನ್ 6 ಹಡಗು ವಿಜ್ಞಾನ ಮತ್ತು ಶಿಕ್ಷಣ ಮೂಲಸೌಕರ್ಯವನ್ನು ಸ್ಥಾಪಿಸಲು ಚೀನಾದ 13 ನೇ ಪಂಚವಾರ್ಷಿಕ ಯೋಜನೆಯ ಪ್ರಮುಖ ಯೋಜನೆ ಇದಾಗಿದೆ.

ಹಿಂದೂ ಮಹಾಸಾಗರ ಪ್ರವೇಶಿಸಿದ ಚೀನಾದ ಬೇಹುಗಾರಿಕಾ ಹಡಗು
ಹಡಗುImage Credit source: Hindustan Times
Follow us
ನಯನಾ ರಾಜೀವ್
|

Updated on: Sep 27, 2023 | 9:51 AM

ಚೀನಾ(China)ದ ಶಕ್ತಿಶಾಲಿ ಬೇಹುಗಾರಿಕಾ ಹಡಗು ಶಿ ಯಾನ್ 6 ಹಿಂದೂ ಮಹಾಸಾಗರವನ್ನು ಪ್ರವೇಶಿಸಿ ಭಾರತದತ್ತ ಸಾಗುತ್ತಿದೆ. ಮಿಶ್ರ ಸಂದೇಶವನ್ನು ಕಳುಹಿಸುವ ಮೂಲಕ ಶ್ರೀಲಂಕಾ ಈ ಮಾಹಿತಿ ಹಂಚಿಕೊಂಡಿದೆ. ಪ್ರಸ್ತುತ ಈ ಹಡಗು ಹಿಂದೂ ಮಹಾಸಾಗರದ ಮಧ್ಯದಲ್ಲಿ 90 ಡಿಗ್ರಿ ಪೂರ್ವ ರೇಖಾಂಶದ ತುದಿಯಲ್ಲಿದೆ ಮತ್ತು ನಿರಂತರವಾಗಿ ಶ್ರೀಲಂಕಾ ಕಡೆ ಚವಲಿಸುತ್ತಿದೆ. ಶಿ ಯಾನ್ 6 ಹಡಗು ವಿಜ್ಞಾನ ಮತ್ತು ಶಿಕ್ಷಣ ಮೂಲಸೌಕರ್ಯವನ್ನು ಸ್ಥಾಪಿಸಲು ಚೀನಾದ 13 ನೇ ಪಂಚವಾರ್ಷಿಕ ಯೋಜನೆಯ ಪ್ರಮುಖ ಯೋಜನೆ ಇದಾಗಿದೆ.

ಉದ್ಘಾಟನೆಯ ಎರಡು ವರ್ಷಗಳ ಬಳಿಕ ಹಡಗು 2022ರಲ್ಲಿ ಪೂರ್ವ ಹಿಂದೂ ಮಹಾಸಾಗರದಲ್ಲಿ ತನ್ನ ಮೊದಲ ಪ್ರಯಾಣವನ್ನು ಯಶಸ್ವಿಯಾಗಿ ಮಾಡಿತ್ತು. ಅಕ್ಟೋಬರ್​ನಲ್ಲಿ ಕೊಲಂಬೊ ಬಂದರಿನಲ್ಲಿ ಚೀನಾದ ಈ ಸಂಶೋಧನಾ ಹಡಗನ್ನು ನಿಲುಗಡೆ ಮಾಡಲು ಶ್ರೀಲಂಕಾದ ವಿಕ್ರಮಸಿಂಘೆ ಸರ್ಕಾರ ಅನುಮತಿ ನೀಡಿದೆ.

ಚೀನಾ 2019ರಿಂದ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸುಮಾರು 48 ವೈಜ್ಞಾನಿಕ ಸಂಶೋಧನಾ ಹಡಗುಗಳನ್ನು ನಿಯೋಜಿಸಿದೆ. ಈ ಎಲ್ಲಾ ಹಡಗುಗಳ ನಿಯೋಜನೆಯು ಬಂಗಾಳಕೊಲ್ಲಿಯಿಂದ ಅರಬ್ಬಿ ಸಮುದ್ರ ಹಾಗೂ ಪರ್ಷಿಯನ್ನು ಕೊಲ್ಲಿಯವರೆಗೆ ಇರಲಿದೆ.

ಮತ್ತಷ್ಟು ಓದಿ: ಭಾರತೀಯರ ಕಾಳಜಿ ಮುಖ್ಯ, ಚೀನಾದ ಸಂಶೋಧನಾ ಹಡಗು ನಿಲುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಲಂಕಾ

ಚೀನಾದ ಹಡಗು ಶಿ ಯಾನ್ 6 ಸೆಪ್ಟೆಂಬರ್ 23 ರಂದು ಮಲಕ್ಕಾ ಜಲಸಂಧಿಯ ಮೂಲಕ ಹಿಂದೂ ಮಹಾಸಾಗರವನ್ನು ಪ್ರವೇಶಿಸಿತು ಮತ್ತು ಸೆಪ್ಟೆಂಬರ್ 10 ರಂದು ಹೋಮ್‌ಪೋರ್ಟ್ ಗುವಾಂಗ್‌ಝೌವನ್ನು ತೊರೆದ ನಂತರ ಸೆಪ್ಟೆಂಬರ್ 14 ರಂದು ಸಿಂಗಾಪುರದಲ್ಲಿ ಕಾಣಿಸಿಕೊಂಡಿತು.

ಈ ಮೊದಲು ಚೀನಾ ಸಂಶೋಧನಾ ಹಡಗು ಶ್ರೀಲಂಕಾಗೆ ಬಂದಿರುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಶ್ರೀಲಂಕಾವು ನಮಗೆ ಭಾರತದ ಕಾಳಜಿ ಮುಖ್ಯ, ಚೀನಾದ ಹಡಗಿನ ನಿಲುಗಡೆಗೆ ಇಲ್ಲಿ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ