AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಾಸಾಗರ ಪ್ರವೇಶಿಸಿದ ಚೀನಾದ ಬೇಹುಗಾರಿಕಾ ಹಡಗು

ಚೀನಾದ ಶಕ್ತಿಶಾಲಿ ಬೇಹುಗಾರಿಕಾ ಹಡಗು ಶಿ ಯಾನ್ 6 ಹಿಂದೂ ಮಹಾಸಾಗರವನ್ನು ಪ್ರವೇಶಿಸಿ ಭಾರತದತ್ತ ಸಾಗುತ್ತಿದೆ. ಮಿಶ್ರ ಸಂದೇಶವನ್ನು ಕಳುಹಿಸುವ ಮೂಲಕ ಶ್ರೀಲಂಕಾ ಈ ಮಾಹಿತಿ ಹಂಚಿಕೊಂಡಿದೆ. ಪ್ರಸ್ತುತ ಈ ಹಡಗು ಹಿಂದೂ ಮಹಾಸಾಗರದ ಮಧ್ಯದಲ್ಲಿ 90 ಡಿಗ್ರಿ ಪೂರ್ವ ರೇಖಾಂಶದ ತುದಿಯಲ್ಲಿದೆ ಮತ್ತು ನಿರಂತರವಾಗಿ ಶ್ರೀಲಂಕಾ ಕಡೆ ಚವಲಿಸುತ್ತಿದೆ. ಶಿ ಯಾನ್ 6 ಹಡಗು ವಿಜ್ಞಾನ ಮತ್ತು ಶಿಕ್ಷಣ ಮೂಲಸೌಕರ್ಯವನ್ನು ಸ್ಥಾಪಿಸಲು ಚೀನಾದ 13 ನೇ ಪಂಚವಾರ್ಷಿಕ ಯೋಜನೆಯ ಪ್ರಮುಖ ಯೋಜನೆ ಇದಾಗಿದೆ.

ಹಿಂದೂ ಮಹಾಸಾಗರ ಪ್ರವೇಶಿಸಿದ ಚೀನಾದ ಬೇಹುಗಾರಿಕಾ ಹಡಗು
ಹಡಗುImage Credit source: Hindustan Times
ನಯನಾ ರಾಜೀವ್
|

Updated on: Sep 27, 2023 | 9:51 AM

Share

ಚೀನಾ(China)ದ ಶಕ್ತಿಶಾಲಿ ಬೇಹುಗಾರಿಕಾ ಹಡಗು ಶಿ ಯಾನ್ 6 ಹಿಂದೂ ಮಹಾಸಾಗರವನ್ನು ಪ್ರವೇಶಿಸಿ ಭಾರತದತ್ತ ಸಾಗುತ್ತಿದೆ. ಮಿಶ್ರ ಸಂದೇಶವನ್ನು ಕಳುಹಿಸುವ ಮೂಲಕ ಶ್ರೀಲಂಕಾ ಈ ಮಾಹಿತಿ ಹಂಚಿಕೊಂಡಿದೆ. ಪ್ರಸ್ತುತ ಈ ಹಡಗು ಹಿಂದೂ ಮಹಾಸಾಗರದ ಮಧ್ಯದಲ್ಲಿ 90 ಡಿಗ್ರಿ ಪೂರ್ವ ರೇಖಾಂಶದ ತುದಿಯಲ್ಲಿದೆ ಮತ್ತು ನಿರಂತರವಾಗಿ ಶ್ರೀಲಂಕಾ ಕಡೆ ಚವಲಿಸುತ್ತಿದೆ. ಶಿ ಯಾನ್ 6 ಹಡಗು ವಿಜ್ಞಾನ ಮತ್ತು ಶಿಕ್ಷಣ ಮೂಲಸೌಕರ್ಯವನ್ನು ಸ್ಥಾಪಿಸಲು ಚೀನಾದ 13 ನೇ ಪಂಚವಾರ್ಷಿಕ ಯೋಜನೆಯ ಪ್ರಮುಖ ಯೋಜನೆ ಇದಾಗಿದೆ.

ಉದ್ಘಾಟನೆಯ ಎರಡು ವರ್ಷಗಳ ಬಳಿಕ ಹಡಗು 2022ರಲ್ಲಿ ಪೂರ್ವ ಹಿಂದೂ ಮಹಾಸಾಗರದಲ್ಲಿ ತನ್ನ ಮೊದಲ ಪ್ರಯಾಣವನ್ನು ಯಶಸ್ವಿಯಾಗಿ ಮಾಡಿತ್ತು. ಅಕ್ಟೋಬರ್​ನಲ್ಲಿ ಕೊಲಂಬೊ ಬಂದರಿನಲ್ಲಿ ಚೀನಾದ ಈ ಸಂಶೋಧನಾ ಹಡಗನ್ನು ನಿಲುಗಡೆ ಮಾಡಲು ಶ್ರೀಲಂಕಾದ ವಿಕ್ರಮಸಿಂಘೆ ಸರ್ಕಾರ ಅನುಮತಿ ನೀಡಿದೆ.

ಚೀನಾ 2019ರಿಂದ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸುಮಾರು 48 ವೈಜ್ಞಾನಿಕ ಸಂಶೋಧನಾ ಹಡಗುಗಳನ್ನು ನಿಯೋಜಿಸಿದೆ. ಈ ಎಲ್ಲಾ ಹಡಗುಗಳ ನಿಯೋಜನೆಯು ಬಂಗಾಳಕೊಲ್ಲಿಯಿಂದ ಅರಬ್ಬಿ ಸಮುದ್ರ ಹಾಗೂ ಪರ್ಷಿಯನ್ನು ಕೊಲ್ಲಿಯವರೆಗೆ ಇರಲಿದೆ.

ಮತ್ತಷ್ಟು ಓದಿ: ಭಾರತೀಯರ ಕಾಳಜಿ ಮುಖ್ಯ, ಚೀನಾದ ಸಂಶೋಧನಾ ಹಡಗು ನಿಲುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಲಂಕಾ

ಚೀನಾದ ಹಡಗು ಶಿ ಯಾನ್ 6 ಸೆಪ್ಟೆಂಬರ್ 23 ರಂದು ಮಲಕ್ಕಾ ಜಲಸಂಧಿಯ ಮೂಲಕ ಹಿಂದೂ ಮಹಾಸಾಗರವನ್ನು ಪ್ರವೇಶಿಸಿತು ಮತ್ತು ಸೆಪ್ಟೆಂಬರ್ 10 ರಂದು ಹೋಮ್‌ಪೋರ್ಟ್ ಗುವಾಂಗ್‌ಝೌವನ್ನು ತೊರೆದ ನಂತರ ಸೆಪ್ಟೆಂಬರ್ 14 ರಂದು ಸಿಂಗಾಪುರದಲ್ಲಿ ಕಾಣಿಸಿಕೊಂಡಿತು.

ಈ ಮೊದಲು ಚೀನಾ ಸಂಶೋಧನಾ ಹಡಗು ಶ್ರೀಲಂಕಾಗೆ ಬಂದಿರುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಶ್ರೀಲಂಕಾವು ನಮಗೆ ಭಾರತದ ಕಾಳಜಿ ಮುಖ್ಯ, ಚೀನಾದ ಹಡಗಿನ ನಿಲುಗಡೆಗೆ ಇಲ್ಲಿ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?