AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಶಕ್ತಿಯೊಂದಿಗೆ ಸಹಕರಿಸುವ ಮೊದಲು ಭಾರತದ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳಲು ಒಪ್ಪಿದ ಶ್ರೀಲಂಕಾ ಅಧ್ಯಕ್ಷ

2022 ರ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಚೀನಾ ಸೇರಿದಂತೆ ಜಗತ್ತು ಹಿಂಜರಿಯುತ್ತಿರುವಾಗ,  ರಾಜಕೀಯ ಬಿಕ್ಕಟ್ಟಿನಿಂದ ದ್ವೀಪ ರಾಷ್ಟ್ರವನ್ನು ರಕ್ಷಿಸಲು ಭಾರತವು ಸಂಪೂರ್ಣ ಆರ್ಥಿಕ, ಆಹಾರ ಮತ್ತು ತೈಲ ಬೆಂಬಲವನ್ನು ನೀಡಿತ್ತು.

ಮೂರನೇ ಶಕ್ತಿಯೊಂದಿಗೆ ಸಹಕರಿಸುವ ಮೊದಲು ಭಾರತದ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳಲು ಒಪ್ಪಿದ ಶ್ರೀಲಂಕಾ ಅಧ್ಯಕ್ಷ
ಶ್ರೀಲಂಕಾ ಅಧ್ಯಕ್ಷರ ಜತೆ ಪ್ರಧಾನಿ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 22, 2023 | 7:56 PM

Share

ದೆಹಲಿ ಜುಲೈ 22: ಶುಕ್ರವಾರ ಶ್ರೀಲಂಕಾ (Srilanka) ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರೊಂದಿಗಿನ ಚರ್ಚೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 2022 ರಲ್ಲಿ ದ್ವೀಪ ರಾಷ್ಟ್ರವನ್ನು ನಾಶಪಡಿಸಿದ ಆರ್ಥಿಕ ಬಿಕ್ಕಟ್ಟಿಗೆ ಮೊದಲ ಪ್ರತಿಸ್ಪಂದಕರಲ್ಲಿ ಭಾರತವೂ ಸೇರಿದೆ ಎಂದು ನೆನಪಿಸಿದ್ದಾರೆ. ಅದೇ ವೇಳೆ ಕೊಲಂಬೊ ಮೂರನೇ ಶಕ್ತಿಯೊಂದಿಗೆ ಸಹಕರಿಸುವ ಮೊದಲು ಭಾರತದ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ. ಭಾರತದ ಕಾರ್ಯತಂತ್ರ ಮತ್ತು ಭದ್ರತಾ ಕಾಳಜಿಗಳಿಗೆ ಶ್ರೀಲಂಕಾ ಸಂವೇದನಾಶೀಲವಾಗಿರುತ್ತದೆ ಎಂದು ಅಧ್ಯಕ್ಷ ವಿಕ್ರಮಸಿಂಘೆ ಒಪ್ಪಿಕೊಂಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ವಿಕ್ರಮಸಿಂಘೆ ಅವರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.

2022 ರ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಚೀನಾ ಸೇರಿದಂತೆ ಜಗತ್ತು ಹಿಂಜರಿಯುತ್ತಿರುವಾಗ,  ರಾಜಕೀಯ ಬಿಕ್ಕಟ್ಟಿನಿಂದ ದ್ವೀಪ ರಾಷ್ಟ್ರವನ್ನು ರಕ್ಷಿಸಲು ಭಾರತವು ಸಂಪೂರ್ಣ ಆರ್ಥಿಕ, ಆಹಾರ ಮತ್ತು ತೈಲ ಬೆಂಬಲವನ್ನು ನೀಡಿತ್ತು.

ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ಶ್ರೀಲಂಕಾಕ್ಕೆ ಸಹಾಯ ಮಾಡುವಲ್ಲಿ ಭಾರತ ಇದ್ದೇ ಇರುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದು, ಉಭಯ ನಾಯಕರು ಭವಿಷ್ಯದಲ್ಲಿ ಡಿಜಿಟಲ್, ತೈಲ, ವಿದ್ಯುತ್, ರಸ್ತೆ ಮತ್ತು ಬಹುಶಃ ರೈಲ್ರೋಡ್ ಸಂಪರ್ಕದ ಮೇಲೆ ಕೇಂದ್ರೀಕರಿಸುವ ಮೂಲಕ ದ್ವಿಪಕ್ಷೀಯ ಸಂಬಂಧದ ದೀರ್ಘಾವಧಿಯ ದೃಷ್ಟಿಕೋನವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಅಧ್ಯಕ್ಷ ವಿಕ್ರಮಸಿಂಘೆ ಅವರು ಭಾರತ ಮತ್ತು ಶ್ರೀಲಂಕಾ ನಡುವೆ 27 ಕಿಲೋಮೀಟರ್ ಉದ್ದದ ಸಂಭವನೀಯ ರಾಮೇಶ್ವರಂ-ತಲೈ ಮನ್ನಾರ್ ಜೋಡಣೆಯ ಮೇಲೆ ಸೇತುವೆಯನ್ನು ಸೂಚಿಸಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ತಕ್ಷಣವೇ ಒಪ್ಪಿದರು. ಪಾಕ್ ಜಲಸಂಧಿಯ ಈ ನಿರ್ದಿಷ್ಟ ಪ್ರದೇಶದಲ್ಲಿ ಸಮುದ್ರದ ಆಳವು ಸಹ ಅನುಕೂಲಕರವಾಗಿದೆ. ಏಕೆಂದರೆ ಇಲ್ಲಿ ಕೇವಲ ಒಂದರಿಂದ ಮೂರು ಮೀಟರ್ ನೀರು ಇದ್ದು ಸೇತುವೆಯನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ.

ಕಡಲ ಸಂಪರ್ಕದ ಭಾಗವಾಗಿ ಪರಸ್ಪರ ತಿಳುವಳಿಕೆಯೊಂದಿಗೆ ಕೊಲಂಬೊ, ಟ್ರಿಂಕೋಮಲಿ ಮತ್ತು ಕಂಕಸಂತುರೈಗಳಲ್ಲಿ ಬಂದರುಗಳು ಮತ್ತು ಲಾಜಿಸ್ಟಿಕ್ಸ್ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಸಹಕರಿಸಲು ಉಭಯ ದೇಶಗಳು ನಿರ್ಧರಿಸಿವೆ. ಇದಲ್ಲದೇ ವಾಯು ಸಂಪರ್ಕ, ಇಂಧನ ಮತ್ತು ವಿದ್ಯುತ್ ಸಂಪರ್ಕ ಹಾಗೂ ನವೀಕರಿಸಬಹುದಾದ ಇಂಧನದ ಬಗ್ಗೆ ಒಪ್ಪಂದವಿತ್ತು.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಫೇಲ್ ಎಂದು ರಿಪೋರ್ಟ್ ಕಾರ್ಡ್ ನೀಡಿದ ಕಾಂಗ್ರೆಸ್; ಈ ಎರಡರಲ್ಲಿ ನೀವು ಸ್ಕೋರ್ ಮಾಡುತ್ತೀರಿ ಎಂದು ಕೇಂದ್ರ ಸಚಿವೆ ತಿರುಗೇಟು

ಭೂಸೇತುವೆ ಪ್ರಸ್ತಾವನೆಯನ್ನು ಮೊದಲ ಬಾರಿಗೆ ಪ್ರಸ್ತಾಪಿಸಲಾಗಿದ್ದು, ಎರಡು ದೇಶಗಳನ್ನು ಸಂಪರ್ಕಿಸುವ ಸೇತುವೆಯೊಂದಿಗೆ ತೈಲ, ಅನಿಲ, ವಿದ್ಯುತ್ ಪೈಪ್‌ಲೈನ್ ಹೊಂದುವ ಬಲವಾದ ಸಾಧ್ಯತೆಯಿದೆ. ಶ್ರೀಲಂಕಾದ ಭಾಗದಲ್ಲಿ ತಲೈ ಮನ್ನಾರ್ ಇರುವಂತೆಯೇ ರಾಮೇಶ್ವರಂ ರೈಲುಮಾರ್ಗದೊಂದಿಗೆ ಸಂಪರ್ಕ ಹೊಂದಿರುವುದರಿಂದ ಉಭಯ ದೇಶಗಳ ನಡುವೆ ರೈಲು ಸೇತುವೆಯನ್ನು ಹೊಂದುವ ಸಾಧ್ಯತೆಯೂ ಇದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ