AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ದೇವರಲ್ಲ, ಆತ ರಾಮಾಯಣದ ಒಂದು ಪಾತ್ರವಷ್ಟೇ; ಬಿಹಾರದ ಬಿಜೆಪಿ ಮಿತ್ರಪಕ್ಷದ ನಾಯಕನ ಅಚ್ಚರಿಯ ಹೇಳಿಕೆ

"ವಾಲ್ಮೀಕಿ ರಾಮಾಯಣವನ್ನು ಬರೆದಿದ್ದಾರೆ. ನಾವು ಅದನ್ನು ನಂಬುತ್ತೇವೆ. ನಾವು ತುಳಸಿದಾಸ್ ಮತ್ತು ವಾಲ್ಮೀಕಿಯನ್ನು ನಂಬುತ್ತೇವೆಯೇ ಹೊರತು ರಾಮನನ್ನಲ್ಲ" ಎಂದು ಮಾಂಝಿ ಹೇಳಿದ್ದಾರೆ

ರಾಮ ದೇವರಲ್ಲ, ಆತ ರಾಮಾಯಣದ ಒಂದು ಪಾತ್ರವಷ್ಟೇ; ಬಿಹಾರದ ಬಿಜೆಪಿ ಮಿತ್ರಪಕ್ಷದ ನಾಯಕನ ಅಚ್ಚರಿಯ ಹೇಳಿಕೆ
ಮಾಂಝಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 15, 2022 | 8:23 PM

ಬಿಹಾರ: ‘ನಾನು ರಾಮನನ್ನು ನಂಬುವುದಿಲ್ಲ. ರಾಮ ದೇವರಲ್ಲ. ರಾಮನೆಂಬುದು ತುಳಸಿದಾಸ್ ಮತ್ತು ವಾಲ್ಮೀಕಿ ಸೃಷ್ಟಿ ಮಾಡಿದ ಒಂದು ಪಾತ್ರವಷ್ಟೇ’ ಎಂದು ಹೇಳುವ ಮೂಲಕ ಬಿಹಾರದ ಬಿಜೆಪಿ ಪಕ್ಷದ ಪ್ರಮುಖ ಮಿತ್ರ ಪಕ್ಷ ವಿವಾದಕ್ಕೆ ಗುರಿಯಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಹೇಳಿರುವ ಈ ಮಾತುಗಳು ತೀವ್ರ ಚರ್ಚೆಗೆ ಕಾರಣವಾಗಿವೆ.

“ವಾಲ್ಮೀಕಿ ರಾಮಾಯಣವನ್ನು ಬರೆದಿದ್ದಾರೆ. ಅವರ ಬರಹಗಳಲ್ಲಿ ಅನೇಕ ಉತ್ತಮ ಪಾಠಗಳಿವೆ. ನಾವು ಅದನ್ನು ನಂಬುತ್ತೇವೆ. ನಾವು ತುಳಸಿದಾಸ್ ಮತ್ತು ವಾಲ್ಮೀಕಿಯನ್ನು ನಂಬುತ್ತೇವೆಯೇ ಹೊರತು ರಾಮನನ್ನಲ್ಲ” ಎಂದು ಮಾಂಝಿ ಹೇಳಿದ್ದಾರೆ. ಅವರ ಮಗ ಸಂತೋಷ್ ಮಾಂಝಿ ಬಿಹಾರದಲ್ಲಿ ನಿತೀಶ್ ಕುಮಾರ್-ಬಿಜೆಪಿ ಸಂಪುಟದ ಸಚಿವರಾಗಿದ್ದಾರೆ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿರುವ ಹಿಂದೂಸ್ತಾನ್ ಅವಾಮ್ ಮೋರ್ಚಾ (ಎಚ್‌ಎಎಂ) ಮುಖ್ಯಸ್ಥ ಮಾಂಝಿ ಅವರು ಭಾರತದ ಸಂವಿಧಾನವನ್ನು ರೂಪಿಸಿದ ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ನಿಮಗೆ ರಾಮನಲ್ಲಿ ನಂಬಿಕೆಯಿದ್ದರೆ, ರಾಮನು ಶಬರಿಯು ರುಚಿಯಾದ ಹಣ್ಣನ್ನು ತಿಂದಿದ್ದಾನೆ ಎಂಬುದು ನಾವು ಯಾವಾಗಲೂ ಕೇಳುವ ಕಥೆ. ನಾವು ಕಚ್ಚಿದ ಹಣ್ಣನ್ನು ನೀವು ತಿನ್ನುವುದಿಲ್ಲ. ಆದರೆ ನಾವು ಮುಟ್ಟಿದ್ದನ್ನು ತಿನ್ನುತ್ತೀರಿ” ಎಂದು ಮಾಂಝಿ ದೇಶದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆಯೂ ಟೀಕಿಸಿದ್ದಾರೆ.

ಇದನ್ನೂ ಓದಿ: ಶ್ರೀರಾಮಸೇನೆ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆಯಿದೆ: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಸಂತೋಷ ಸಾವಿನ ಪ್ರಕರಣ ಬಹಳ ಸೂಕ್ಷ್ಮವಾಗಿರುವುದರಿಂದ ತನಿಖೆ ಪೂರ್ತಿಗೊಳ್ಳದೆ ಏನನ್ನೂ ಹೇಳಲಾಗಲ್ಲ: ದೇವಜ್ಯೋತಿ ರೇ, ಐಜಿಪಿ

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ