AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ದೇವರಲ್ಲ, ಆತ ರಾಮಾಯಣದ ಒಂದು ಪಾತ್ರವಷ್ಟೇ; ಬಿಹಾರದ ಬಿಜೆಪಿ ಮಿತ್ರಪಕ್ಷದ ನಾಯಕನ ಅಚ್ಚರಿಯ ಹೇಳಿಕೆ

"ವಾಲ್ಮೀಕಿ ರಾಮಾಯಣವನ್ನು ಬರೆದಿದ್ದಾರೆ. ನಾವು ಅದನ್ನು ನಂಬುತ್ತೇವೆ. ನಾವು ತುಳಸಿದಾಸ್ ಮತ್ತು ವಾಲ್ಮೀಕಿಯನ್ನು ನಂಬುತ್ತೇವೆಯೇ ಹೊರತು ರಾಮನನ್ನಲ್ಲ" ಎಂದು ಮಾಂಝಿ ಹೇಳಿದ್ದಾರೆ

ರಾಮ ದೇವರಲ್ಲ, ಆತ ರಾಮಾಯಣದ ಒಂದು ಪಾತ್ರವಷ್ಟೇ; ಬಿಹಾರದ ಬಿಜೆಪಿ ಮಿತ್ರಪಕ್ಷದ ನಾಯಕನ ಅಚ್ಚರಿಯ ಹೇಳಿಕೆ
ಮಾಂಝಿ
TV9 Web
| Edited By: |

Updated on: Apr 15, 2022 | 8:23 PM

Share

ಬಿಹಾರ: ‘ನಾನು ರಾಮನನ್ನು ನಂಬುವುದಿಲ್ಲ. ರಾಮ ದೇವರಲ್ಲ. ರಾಮನೆಂಬುದು ತುಳಸಿದಾಸ್ ಮತ್ತು ವಾಲ್ಮೀಕಿ ಸೃಷ್ಟಿ ಮಾಡಿದ ಒಂದು ಪಾತ್ರವಷ್ಟೇ’ ಎಂದು ಹೇಳುವ ಮೂಲಕ ಬಿಹಾರದ ಬಿಜೆಪಿ ಪಕ್ಷದ ಪ್ರಮುಖ ಮಿತ್ರ ಪಕ್ಷ ವಿವಾದಕ್ಕೆ ಗುರಿಯಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಹೇಳಿರುವ ಈ ಮಾತುಗಳು ತೀವ್ರ ಚರ್ಚೆಗೆ ಕಾರಣವಾಗಿವೆ.

“ವಾಲ್ಮೀಕಿ ರಾಮಾಯಣವನ್ನು ಬರೆದಿದ್ದಾರೆ. ಅವರ ಬರಹಗಳಲ್ಲಿ ಅನೇಕ ಉತ್ತಮ ಪಾಠಗಳಿವೆ. ನಾವು ಅದನ್ನು ನಂಬುತ್ತೇವೆ. ನಾವು ತುಳಸಿದಾಸ್ ಮತ್ತು ವಾಲ್ಮೀಕಿಯನ್ನು ನಂಬುತ್ತೇವೆಯೇ ಹೊರತು ರಾಮನನ್ನಲ್ಲ” ಎಂದು ಮಾಂಝಿ ಹೇಳಿದ್ದಾರೆ. ಅವರ ಮಗ ಸಂತೋಷ್ ಮಾಂಝಿ ಬಿಹಾರದಲ್ಲಿ ನಿತೀಶ್ ಕುಮಾರ್-ಬಿಜೆಪಿ ಸಂಪುಟದ ಸಚಿವರಾಗಿದ್ದಾರೆ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿರುವ ಹಿಂದೂಸ್ತಾನ್ ಅವಾಮ್ ಮೋರ್ಚಾ (ಎಚ್‌ಎಎಂ) ಮುಖ್ಯಸ್ಥ ಮಾಂಝಿ ಅವರು ಭಾರತದ ಸಂವಿಧಾನವನ್ನು ರೂಪಿಸಿದ ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ನಿಮಗೆ ರಾಮನಲ್ಲಿ ನಂಬಿಕೆಯಿದ್ದರೆ, ರಾಮನು ಶಬರಿಯು ರುಚಿಯಾದ ಹಣ್ಣನ್ನು ತಿಂದಿದ್ದಾನೆ ಎಂಬುದು ನಾವು ಯಾವಾಗಲೂ ಕೇಳುವ ಕಥೆ. ನಾವು ಕಚ್ಚಿದ ಹಣ್ಣನ್ನು ನೀವು ತಿನ್ನುವುದಿಲ್ಲ. ಆದರೆ ನಾವು ಮುಟ್ಟಿದ್ದನ್ನು ತಿನ್ನುತ್ತೀರಿ” ಎಂದು ಮಾಂಝಿ ದೇಶದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆಯೂ ಟೀಕಿಸಿದ್ದಾರೆ.

ಇದನ್ನೂ ಓದಿ: ಶ್ರೀರಾಮಸೇನೆ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆಯಿದೆ: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಸಂತೋಷ ಸಾವಿನ ಪ್ರಕರಣ ಬಹಳ ಸೂಕ್ಷ್ಮವಾಗಿರುವುದರಿಂದ ತನಿಖೆ ಪೂರ್ತಿಗೊಳ್ಳದೆ ಏನನ್ನೂ ಹೇಳಲಾಗಲ್ಲ: ದೇವಜ್ಯೋತಿ ರೇ, ಐಜಿಪಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ